Featured

ದೇಶದಾದ್ಯಂತ 100 ಕೋಟಿ ಡೋಸ್ ಕೋವಿಡ್‌-19 ಲಸಿಕೆ ವಿತರಿಸಿರುವುದು ಐತಿಹಾಸಿಕ ಮತ್ತು ಹೆಮ್ಮೆಯ ಕ್ಷಣ : ಅಮಿತ್‌ ಶಾ – Vishwanews24

ದೇಶದಾದ್ಯಂತ 100 ಕೋಟಿ ಡೋಸ್ ಕೋವಿಡ್‌-19 ಲಸಿಕೆ ವಿತರಿಸಿರುವುದು ಐತಿಹಾಸಿಕ ಮತ್ತು ಹೆಮ್ಮೆಯ ಕ್ಷಣ : ಅಮಿತ್‌ ಶಾ – Vishwanews24

ನವದೆಹಲಿ: ದೇಶದಾದ್ಯಂತ 100 ಕೋಟಿ ಡೋಸ್ ಕೋವಿಡ್‌-19 ಲಸಿಕೆ ವಿತರಿಸಿರುವುದು ʼಐತಿಹಾಸಿಕ ಮತ್ತು ಹೆಮ್ಮೆಯ ಕ್ಷಣʼ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಸಂತಸ ವ್ಯಕ್ತಪಡಿಸಿದ್ದಾರೆ.

ಈ ಸಂಬಂಧ ಸರಣಿ ಟ್ವೀಟ್‌ಗಳನ್ನು ಮಾಡಿರುವ ಶಾ, ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ದೂರದೃಷ್ಟಿಯ ನಾಯಕತ್ವ ಮತ್ತು ನಿರಂತರ ಪ್ರೋತ್ಸಾಹದಿಂದಾಗಿ ನೂರು ಕೋಟಿ ಡೋಸ್‌ ಕೋವಿಡ್-19‌ ಲಸಿಕೆ ವಿತರಣೆಯ ಗುರಿ ಸಾಧಿಸಿದ್ದೇವೆ. ಆ ಮೂಲಕ ದಾಖಲೆ ಬರೆದಿರುವುದು ಐತಿಹಾಸಿಕ ಮತ್ತು ಹೆಮ್ಮೆಯ ಕ್ಷಣವಾಗಿದೆ. ಇದು ಅಸಾಧಾರಣ ಸಾಮರ್ಥ್ಯದೊಂದಿಗೆ ನವ ಭಾರತವನ್ನು ಜಗತ್ತಿಗೆ ಮತ್ತೊಮ್ಮೆ ಪರಿಚಯಿಸಿದೆ ಎಂದು ತಿಳಿಸಿದ್ದಾರೆ.

ಈ ಮೈಲುಗಲ್ಲು ಮುಟ್ಟಲು ನೆರವಾದ ದೇಶದ ಎಲ್ಲ ವಿಜ್ಞಾನಿಗಳು, ಸಂಶೋದಕರು ಮತ್ತು ಆರೋಗ್ಯ ಕಾರ್ಯಕರ್ತರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.

ʼಈ ಐತಿಹಾಸಿಕ ಕ್ಷಣದಲ್ಲಿ ಇಡೀ ದೇಶವನ್ನು ಅಭಿನಂದಿಸುತ್ತೇನೆ. ಹಲವು ಸವಾಲುಗಳನ್ನು ಮೀರಿ ದೊಡ್ಡ ಕಾರ್ಯ ಸಾಧಿಸಲು ಕೊಡುಗೆ ನೀಡಿದ್ದಕ್ಕಾಗಿ ಎಲ್ಲ ವಿಜ್ಞಾನಿಗಳು, ಸಂಶೋದಕರು ಮತ್ತು ಆರೋಗ್ಯ ಕಾರ್ಯಕರ್ತರಿಗೆ ಧನ್ಯವಾದ ತಿಳಿಸುತ್ತೇನೆ. ಪ್ರತಿಯೊಬ್ಬ ವ್ಯಕ್ತಿಯ ಆರೋಗ್ಯ ಮತ್ತು ಸುರಕ್ಷತೆ ಕಡೆಗಿನ ಪ್ರಧಾನಿ ಮೋದಿ ಅವರ ಬದ್ದತೆಯನ್ನು ಅಭಿನಂದಿಸುತ್ತೇನೆʼ ಎಂದು ಹೇಳಿದ್ದಾರೆ.

 

Vishwa News 24

Recent Posts

ಕಾಪು : ಟೈಮಿಂಗ್ಸ್ ವಿಚಾರದಲ್ಲಿ  ಉದ್ದೇಶಪೂರ್ವಕ ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ ; ನಾಲ್ವರ ಬಂಧನ -vishwanews24

ಕಾಪು : ಟೈಮಿಂಗ್ಸ್ ವಿಚಾರದಲ್ಲಿ  ಉದ್ದೇಶಪೂರ್ವಕ ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ - ನಾಲ್ವರ ಬಂಧನ ಕಾಪು : ಕಾಪು…

20 hours ago

ಯುವಜನರಲ್ಲಿ ಹೆಚ್ಚುತ್ತಿರುವ HIV ಸೋಂಕು: ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ತಪಾಸಣೆ ಕಡ್ಡಾಯ ..! vishwanews24

ಯುವಜನರಲ್ಲಿ ಹೆಚ್ಚುತ್ತಿರುವ HIV ಸೋಂಕು: ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ತಪಾಸಣೆ ಕಡ್ಡಾಯ ..! ಬೆಂಗಳೂರು: ಯುವ ಜನರಲ್ಲಿ ಹೆಚ್‌ಐವಿ ಸೋಂಕಿನ…

22 hours ago

ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ – vishwanews24

ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ…

22 hours ago

ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಸರಕಾರ : ಯಶ್ಪಾಲ್ ಸುವರ್ಣ – vishwanews24

ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಸರಕಾರ :…

23 hours ago

ಮಂಗಳೂರು: ಡಿವೈಡರ್‌ಗೆ ಬಸ್  ಡಿಕ್ಕಿ; 35 ಪ್ರಯಾಣಿಕರು ಅಪಾಯದಿಂದ ಪಾರು – vishwanews24

ಮಂಗಳೂರು: ಡಿವೈಡರ್‌ಗೆ ಬಸ್  ಡಿಕ್ಕಿ; 35 ಪ್ರಯಾಣಿಕರು ಅಪಾಯದಿಂದ ಪಾರು ಮಂಗಳೂರು : ಖಾಸಗಿ ಎಕ್ಸ್‌ಪ್ರೆಸ್ ಬಸ್ಸೊಂದು ಮಂಗಳೂರು-ಮೂಡುಬಿದಿರೆ ರಾಷ್ಟ್ರೀಯ…

23 hours ago

ಕಾಪು  : ಟೈಮಿಂಗ್ಸ್ ವಿಚಾರದಲ್ಲಿ ಜಗಳ: ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ – vishwanews24

 ಕಾಪು  : ಟೈಮಿಂಗ್ಸ್ ವಿಚಾರದಲ್ಲಿ ಜಗಳ: ಎಕ್ಸ್‌ಪ್ರೆಸ್ ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ ಕಾಪು: ಎರಡು ಎಕ್ಸ್‌ಪ್ರೆಸ್ ಬಸ್ಸುಗಳು ಪ್ರಯಾಣಿಕರು…

23 hours ago