ನವದೆಹಲಿ,: ನರೇಂದ್ರ ಮೋದಿ ನೇತೃತ್ವದ ಭಾರತೀಯ ಜನತಾ ಪಕ್ಷ ಸ್ಪಷ್ಟ ಬಹುಮತದೊಂದಿಗೆ ಕೇಂದ್ರದಲ್ಲಿ ಅಧಿಕಾರಕ್ಕೆ ಬರಲು ಸಜ್ಜಾಗುತ್ತಿದೆ. ದೇಶದೆಲ್ಲೆಡೆ ಬಿಜೆಪಿ ಕಾರ್ಯಕರ್ತರು ಸಡಗರ ಸಂಭ್ರಮದಿಂದ ವಿಜಯೋತ್ಸವ ಆಚರಿಸುತ್ತಿದ್ದಾರೆ.
ಚುನಾವಣಾ ಮತ ಎಣಿಕೆ ಕಾರ್ಯ ಆರಂಭವಾಗಿ ಬಿಜೆಪಿ ಮುನ್ನಡೆ ಸಾಧಿಸಿದ ಆರಂಭಿಕ ಫಲಿತಾಂಶದಿಂದ ಉತ್ಸಾಹಗೊಂಡ ಕಾರ್ಯಕರ್ತರು ಎಲ್ಲೆಡೆ ಸಂಭ್ರಮದಿಂದ ಗೆಲುವಿನ ಸವಿಯನ್ನು ಆಚರಿಸಿದರು. ಪರಸ್ಪರ ಸಿಹಿ ವಿತರಿಸಿದ ಅಸಂಖ್ಯಾತ ಕಾರ್ಯಕರ್ತರು ನೃತ್ಯ ಮಾಡುತ್ತಾ ವಿಜಯೋತ್ಸವ ಆಚರಿಸುತ್ತಿದ್ದಾರೆ.
ನರೇಂದ್ರ ಮೋದಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಮತ್ತು ಪಕ್ಷದ ಹಿರಿಯ ನಾಯಕರ ಭಾವಚಿತ್ರಗಳನ್ನು ಹಿಡಿದಿದ್ದ ಕಾರ್ಯಕರ್ತರ ಜಯಘೋಷ ಮಾರ್ದನಿಸಿತು. ವಿಜಯದ ಸಂಕೇತ ಪ್ರದರ್ಶಿಸಿದ್ದ ಅವರಲ್ಲಿ ಸಂತಸ ಮನೆ ಮಾಡಿತ್ತು. ಹರ್ ಹರ್ ಮೋದಿ, ಅಮಿತ್ ಷಾ ಕೀ ಜೈ , ಔರ್ ಪಿರ್ ಏಕ್ ಬಾರ್ ಮೋದಿ ಸರ್ಕಾರ್ ಎಂಬ ಜಯ ಘೋಷಗಳನ್ನು ಕೂಗಿದ ಕಾರ್ಯಕರ್ತರು ಕೇಸರಿ ಧ್ವಜಗಳನ್ನು ಹಿಡಿದು ಸಂಭ್ರಮಿಸುತ್ತಿದ್ದಾರೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…