ಬೆಂಗಳೂರು: “ಒಬ್ಬ ಹಿರಿಯ ಸ್ವಾತಂತ್ರ್ಯ ಹೋರಾಟಗಾರನನ್ನು ಅವಮಾನಿಸಿರುವುದು ಸಂವಿಧಾನಕ್ಕೆ ಮಾಡಿರುವ ಅವಮಾನ. ಇಂತಹ ದೇಶದ್ರೋಹಿಗಳ ಜೊತೆ ಕಲಾಪದಲ್ಲಿ ಕುಳಿತುಕೊಳ್ಳಲು ನಾವು ಸಿದ್ಧರಿಲ್ಲ” ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಈ ವಿಚಾರವಾಗಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ ಅವರು, “ಬಸವನಗೌಡ ಪಾಟೀಲ್ ಯತ್ನಾಳ್ ಅವರು ಸದನಕ್ಕೆ ಅಗೌರವ ತೋರಿದ್ದಾರೆ. ಸಂವಿಧಾನದ ಹೆಸರಲ್ಲಿ ಪ್ರಮಾಣ ಮಾಡಿದವರು ಒಬ್ಬ ಹಿರಿಯ ಸ್ವಾತಂತ್ರ್ಯ ಹೋರಾಟಗಾರನಿಗೆ ಅವಮಾನಿಸಿರುವುದು ಸಂವಿಧಾನಕ್ಕೆ ಮಾಡಿರುವ ಅವಮಾನ. ಇಂತಹ ದೇಶದ್ರೋಹಿಗಳ ಜೊತೆ ಕಲಾಪದಲ್ಲಿ ಕುಳಿತುಕೊಳ್ಳಲು ನಾವು ಸಿದ್ಧರಿಲ್ಲ. ಅವರನ್ನು ಸಭಾಧ್ಯಕ್ಷರು ತಕ್ಷಣ ಅಮಾನತು ಮಾಡಬೇಕು” ಎಂದಿದ್ದಾರೆ.
“ಯತ್ನಾಳ್ ಹೇಳಿಕೆಯನ್ನು ಬಿಜೆಪಿ ನಾಯಕರು, ಮಂತ್ರಿಗಳು ಖಂಡಿಸುವ ಬದಲು ಬೆಂಬಲಿಸಿ ಮಾತನಾಡುತ್ತಾರೆ. ದೇಶದ ಸ್ವಾತಂತ್ರ್ಯ ಚಳುವಳಿಗೆ, ಸ್ವಾತಂತ್ರ್ಯ ಹೋರಾಟಗಾರರಿಗೆ ಪಕ್ಷದ ಶಾಸಕನೊಬ್ಬ ಅವಮಾನಿಸುವುದು ವೈಯಕ್ತಿಕ ಅಭಿಪ್ರಾಯ ಹೇಗಾಗುತ್ತದೆ? ಹಾಗಾದರೆ ಯತ್ನಾಳ್ ಹೇಳಿಕೆಗೆ ಬಿಜೆಪಿ ಸಮ್ಮತಿ ಇದೆಯೇ ಎಂಬುದನ್ನು ಅಧಿಕೃತವಾಗಿ ತಿಳಿಸಲಿ” ಎಂದು ಹೇಳಿದ್ದಾರೆ.
“ಸ್ವಾತಂತ್ರ್ಯಹೋರಾಟಗಾರ ದೊರೆಸ್ವಾಮಿಯವರನ್ನು ಒಂದು ಪಕ್ಷಕ್ಕೆ ಕಟ್ಟಿಹಾಕುವುದು ಸರಿಯಲ್ಲ. ಅವರು ಹಿಂದೆ ತುರ್ತುಪರಿಸ್ಥಿತಿಯ ಕಾಲದಲ್ಲಿ ಇಂದಿರಾಗಾಂಧಿ ವಿರುದ್ಧವೂ ಪ್ರತಿಭಟಿಸಿದ್ದರು. ನಾನು ಮುಖ್ಯಮಂತ್ರಿಯಾಗಿದ್ದಾಗ ನಮ್ಮ ಸರ್ಕಾರದ ವಿರುದ್ಧವೂ ಪ್ರತಿಭಟನೆ ನಡೆಸಿದ್ದರು” ಎಂದಿದ್ದಾರೆ.
“ಸದನಕ್ಕೆ ಅಗೌರವ ತೋರುವ ಸದಸ್ಯರನ್ನು ಅಮಾನತು ಮಾಡಬೇಕೆಂದು ಮಧ್ಯಪ್ರದೇಶ ಹೈಕೋರ್ಟ್ ಆದೇಶ ನೀಡಿತ್ತು. ಆ ತೀರ್ಪನ್ನು ಆಧಾರವಾಗಿಟ್ಟುಕೊಂಡು ಯತ್ನಾಳ್ ಅವರನ್ನು ಅಮಾನತು ಮಾಡುವಂತೆ ಸಭಾಧ್ಯಕ್ಷರಲ್ಲಿ ಒತ್ತಾಯ ಮಾಡಿದ್ದೇವೆ. ಆದರೆ ನಮಗೆ ಮಾತನಾಡಲು ಅವಕಾಶವನ್ನೇ ನೀಡದಿರುವ ಸಭಾಧ್ಯಕ್ಷರ ವರ್ತನೆ ಸರಿ ಅಲ್ಲ” ಎಂದು ಟ್ವೀಟ್ ಮಾಡಿದ್ದಾರೆ.
ಗಾನಕೋಗಿಲೆ ಎಸ್.ಜಾನಕಿ ವಿಧಿವಶ ಮೈಸೂರು : ತಮ್ಮ ಮಾಧುರ್ಯಭರಿತ ಧ್ವನಿಯಿಂದಲೇ ಚಿತ್ರರಂಗದಲ್ಲಿ ಅದೆಷ್ಟೋ ಜನರ ಮನಗೆದ್ದಿದ್ದ ಹಿನ್ನಲೆ ಗಾಯಕಿ ಎಸ್.ಜಾನಕಿ…
ಬೃಹತ್ ಡ್ರಗ್ ಜಾಲ ಪತ್ತೆ ಮಾಡಿದ ಪೊಲೀಸರ ತಂಡಕ್ಕೆ 10 ಲಕ್ಷ ರೂ. ನಗದು ಬಹುಮಾನ : ಸಿಎಂ ಡಿ.ಕೆ.ಶಿವಕುಮಾರ್…
ನಾನು ಕಂಬಳ ವಿರೋಧಿಸುತ್ತಿಲ್ಲ, ಮೈಸೂರು ದಸರಾದಲ್ಲಿ ಇದನ್ನು ಬಲವಂತವಾಗಿ ಸೇರಿಸಬಾರದು : ಯದುವೀರ್ ಒಡೆಯರ್ ಸ್ಪಷ್ಟನೆ ಮೈಸೂರು: "ನಾನು ಕಂಬಳವನ್ನು…
ಉಡುಪಿ: ಧರ್ಮಸ್ಥಳ ಬುರುಡೆ ಗ್ಯಾಂಗ್ ರಕ್ಷಣೆಗೆ ಎಸ್ಎಎಫ್ ರಚನೆ : ಮಾಜಿ ಡಿವೈಎಸ್ಪಿ ಅನುಪಮಾ ಶೆಣೈ ಗಂಭೀರ ಆರೋಪ ಉಡುಪಿ:…
ರಾಜ್ಯದಲ್ಲಿ ಅಕ್ಟೋಬರ್-ನವೆಂಬರ್’ನಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ : ಸಚಿವ ಈಶ್ವರ್ ಖಂಡ್ರೆ ಬೆಂಗಳೂರು :ರಾಜ್ಯದಲ್ಲಿ ಬಹುನಿರೀಕ್ಷಿತ ಸ್ಥಳೀಯ ಸಂಸ್ಥೆಗಳ ಚುನಾವಣೆಗಳು…
ಕೇಂದ್ರದಿಂದ ಗುಡ್ ನ್ಯೂಸ್ : ಮಧುಮೇಹ ಸೇರಿ 39 ಔಷಧಿಗಳ ಬೆಲೆಯಲ್ಲಿ ಭಾರಿ ಇಳಿಕೆ ನವದೆಹಲಿ: ಪ್ರತಿ ತಿಂಗಳು ಔಷಧಿಗಳಿಗೆ…