ದೇಶದ್ರೋಹ ಪ್ರಕರಣ :ಜೆಎನ್‌ಯು ವಿದ್ಯಾರ್ಥಿ ಶರ್ಜೀಲ್‌ ಇಮಾಮ್‌ ಬಂಧನ -Vishwanews24

ನವದೆಹಲಿ : ದೇಶದ್ರೋಹದ ಆರೋಪ ಎದುರಿಸುತ್ತಿರುವ ದೆಹಲಿಯ ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯದ ಸಂಶೋಧನಾ ವಿದ್ಯಾರ್ಥಿ ಶರ್ಜೀಲ್ ಇಮಾಮ್ ರನ್ನು ಅವರ ಹುಟ್ಟೂರಾದ ಬಿಹಾರದ ಜೆಹೆನಾಬಾದ್ ಎಂಬಲ್ಲಿ ಬಂಧಿಸಲಾಗಿದೆ.

ದೇಶವಿರೋಧಿ ಹೇಳಿಕೆ ನೀಡಿದ್ದಾರೆ ಎಂಬ ಆರೋಪ ಶರ್ಜೀಲ್ ಮೇಲೆ ಇದ್ದು ವಿಡಿಯೋವನ್ನು ಆಧರಿಸಿ ಅವರ ವಿರುದ್ಧ ಹಲವು ಪ್ರಕರಣಗಳು ದಾಖಲಾಗಿದ್ದವು..

ಇಡೀ ಈಶಾನ್ಯ ಪ್ರದೇಶವನ್ನು ಭಾರತ ದೇಶದಿಂದ ಪ್ರತ್ಯೇಕ ಮಾಡಬೇಕು ಎಂದು ಅವರು ಹೇಳಿದ್ದಾರೆ ಎಂದು ಆರೋಪಿಸಿ ಆವರ ಮೇಲೆ ದೇಶದ್ರೋಹ ಪ್ರಕರಣ ದಾಖಲು ಮಾಡಲಾಗಿತ್ತು.

ಅವರ ವಿರುದ್ಧವಾಗಿ ಅರುಣಾಚಲ ಪ್ರದೇಶ, ಅಸ್ಸಾಂ, ಉತ್ತರ ಪ್ರದೇಶ, ಮಣಿಪುರದಲ್ಲೂ ಪ್ರಕರಣಗಳು ದಾಖಲಾಗಿವೆ. ಐದು ಪೊಲೀಸ್‌ ತಂಡಗಳು ಅವರ ಶೋಧಕ್ಕಾಗಿ ಮುಂಬೈ, ಪಾಟ್ನಾ ಹಾಗೂ ದೆಹಲಿಗೆ ತೆರಳಿದ್ದರು.

ಶರ್ಜೀಲ್‌ ಎರಡು ಸಂದರ್ಭಗಳಲ್ಲಿ ವಿಭಜನಾತ್ಮಕ ಭಾಷಣ ಮಾಡಿದ್ದಾರೆ. ಡಿಸೆಂಬರ್‌ನಲ್ಲಿ ಜಾಂಇಯಾ ಮಿಲ್ಲಿಯಾ ವಿವಿಯಲ್ಲಿ ಒಂದು ಭಾಷಣ ಹಾಗೂ ಇನ್ನೊಂದು ಭಾಷಣವನ್ನು ಆಲಿಘರ್‌ ಮುಸ್ಲಿಂ ವಿವಿಯಲ್ಲಿ ಸಿಎಎ ವಿರೋಧಿ ಪ್ರತಿಭಟನೆ ಸಂದರ್ಭದಲ್ಲಿ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೌರತ್ವ ತಿದ್ದುಪಡಿ ಕಾಯ್ದೆ ಹಾಗೂ ಎನ್ಆರ್​ಸಿ ವಿರೋಧಿರುವ ಭರದಲ್ಲಿ ಇಮಾಮ್ ಅವರು ಪ್ರಚೋದನಾಕಾರಿ ಭಾಷಣ ಮಾಡಿದ್ದಾರೆ. ಡಿ.13 ರಂದು ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದಲ್ಲಿ ಇದೇ ರೀತಿ ಉದ್ರಿಕ್ತ ಭಾಷಣ ಮಾಡಿದ್ದರು ಎಂದು ಹೇಳಿ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು. ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ದೆಹಲಿ ಪೊಲೀಸರು ಇಮಾಮ್ ವಿರುದ್ಧ ದೇಶದ್ರೋಹ ಪ್ರಕರಣ ದಾಖಲು ಮಾಡಿದ್ದಾರೆ. ಇದಷ್ಟೇ ಅಲ್ಲದೆ, ಉತ್ತರಪ್ರದೇಶ ಹಾಗೂ ಅಸ್ಸಾಂನಲ್ಲಿಯೂ ಇಮಾಮ್ ವಿರುದ್ಧ ಪ್ರಕರಣ ದಾಖಲಾಗಿದೆ.

 

Vishwa News 24

Recent Posts

ಮಂಗಳೂರು ನಗರ/ ಗ್ರಾಮಾಂತರ: ಅಂಗನವಾಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ – vishwanews24

ಮಂಗಳೂರು ನಗರ/ ಗ್ರಾಮಾಂತರ: ಅಂಗನವಾಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ ಮಂಗಳೂರು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ…

8 minutes ago

ಬೆಳ್ತಂಗಡಿ: ಹಾವು ಕಚ್ಚಿ ಬಾಲಕಿ ಗಂಭೀರ – vishwanews24

ಬೆಳ್ತಂಗಡಿ: ಅಂಗನವಾಡಿಯಲ್ಲಿ ಆಟಿಕೆಯ ನಡುವೆ ಅಡಗಿದ್ದ ಹಾವು ಕಚ್ಚಿ ಬಾಲಕಿ ಗಂಭೀರ ಬೆಳ್ತಂಗಡಿ: ಸೌತಡ್ಕ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳೊಂದಿಗೆ ಆಟವಾಡುತ್ತಿದ್ದ ನಾಲ್ಕು…

15 minutes ago

ವಂಚನೆ ಪ್ರಕರಣ :  ಝೀನತ್ ಜಾಮೀನು ಅರ್ಜಿ ತಿರಸ್ಕೃತ – vishwanews24

ವಂಚನೆ ಪ್ರಕರಣ :  ಝೀನತ್ ಜಾಮೀನು ಅರ್ಜಿ ತಿರಸ್ಕೃತ ಉಡುಪಿ: ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಪಡುಬಿದ್ರಿಯ ಝೀನತ್ ಇಬ್ರಾಹಿಂ ಜಾಮೀನಿಗಾಗಿ…

37 minutes ago

ಉಡುಪಿ:  ನೇರ ಸಂದರ್ಶನ – vishwanews24

ಉಡುಪಿ:  ನೇರ ಸಂದರ್ಶನ ಉಡುಪಿ: ಉಡುಪಿಯ ಆಕ್ಸಿಸ್ ಮ್ಯಾಕ್ಸ್ ಲೈಫ್ 2ನೇ ಮಹಡಿ  ಪ್ರಗತಿ ಬಿಸಿನೆಸ್ ಪಾರ್ಕ್ ಕ್ರೋಮಾ ಬಿಲ್ಡಿಂಗ್…

49 minutes ago

ಉಡುಪಿ: ಕುಕ್ಕೆಹಳ್ಳಿ ಕೊರಗಜ್ಜ ಕ್ಷೇತ್ರದಿಂದ ನವೆಂಬರ್‌ನಿಂದ ಹೊಸ ಯಕ್ಷಗಾನ ಮೇಳ ಆರಂಭ – vishwanews24

ಉಡುಪಿ: ಕುಕ್ಕೆಹಳ್ಳಿ ಕೊರಗಜ್ಜ ಕ್ಷೇತ್ರದಿಂದ ನವೆಂಬರ್‌ನಿಂದ ಹೊಸ ಯಕ್ಷಗಾನ ಮೇಳ ಆರಂಭ ಉಡುಪಿ: ಕುಕ್ಕೆಹಳ್ಳಿ ಈಶ್ವರನಗರದಲ್ಲಿರುವ ಸ್ವಾಮಿ ಕೊರಗಜ್ಜ ಕ್ಷೇತ್ರದ…

19 hours ago

ಕೋಟ: ಹೆದ್ದಾರಿ ಮಧ್ಯೆ ಟಿವಿ, ಟೇಬಲ್ ಇಟ್ಟು ಯುವಕನ ಹುಚ್ಚಾಟ – ಪೊಲೀಸರ ಮೇಲೆ ಕತ್ತಿ ಬೀಸಿ ಹಲ್ಲೆಗೆ ಯತ್ನ ; ಯುವಕ ವಶಕ್ಕೆ – vishwanews24

ಕೋಟ: ಹೆದ್ದಾರಿ ಮಧ್ಯೆ ಟಿವಿ, ಟೇಬಲ್ ಇಟ್ಟು ಯುವಕನ ಹುಚ್ಚಾಟ - ಪೊಲೀಸರ ಮೇಲೆ ಕತ್ತಿ ಬೀಸಿ ಹಲ್ಲೆಗೆ ಯತ್ನ…

19 hours ago