Featured

ದೇಶದ್ರೋಹ ಹೇಳಿಕೆ ನೀಡಿದವರ ನಾಲಿಗೆ ಕತ್ತರಿಸಬೇಕಾಗುತ್ತದೆ : ಎಚ್ಚರಿಕೆ ನೀಡಿದ ಶಾಸಕ ರಾಜುಗೌಡ – Vishwanews24

ರಾಯಚೂರು : ಜಮ್ಮು-ಕಾಶ್ಮೀರದ ಪುಲ್ವಾಮದಲ್ಲಿ ನಡೆದ ಉಗ್ರರ ದಾಳಿಯ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ದೇ‍ಶದ್ರೋಹಿಗಳು ಸಂತಸ ವ್ಯಕ್ತಪಡಿಸುತ್ತಿರುವ ಹಿನ್ನಲೆಯಲ್ಲಿ ಬುದ್ಧಿಜೀವಿಗಳು ಹೇಳಿಕೆ ನೀಡುವಾಗ ಅವರ ನಾಲಗೆ ಮೇಲೆ ಹಿಡಿತವಿರಿಲಿ. ಇಲ್ಲದಿದ್ದರೆ ನಾಲಿಗೆ ಕತ್ತರಿಸಬೇಕಾಗುತ್ತದೆ ಎಂದು ಸುರಪುರ ಶಾಸಕ ರಾಜುಗೌಡ ಎಚ್ಚರಿಕೆ ನೀಡಿದ್ದಾರೆ.

ಜಮ್ಮು-ಕಾಶ್ಮೀರದ ಪುಲ್ವಾಮದಲ್ಲಿ ನಡೆದ ಉಗ್ರರ ದಾಳಿಯಲ್ಲಿ ಹುತಾತ್ಮರಾದ ಯೋಧರ ಸಾವಿಗೆ ಸಂತಾಪ ಸೂಚಿಸಿ, ಬಳಿಕ ಮಾತನಾಡಿದ ಅವರು, ಪುಲ್ವಾಮದಲ್ಲಿ ನಡೆದ ಘೋರ ಉಗ್ರರ ದಾಳಿಯಲ್ಲಿ ವೀರ ಯೋಧರು ಹುತಾತ್ಮರಾಗಿರುವುದು ಬೇಸರದ ಸಂಗತಿ. ಇದರಿಂದ ಇಡೀ ದೇಶಕ್ಕೆ ನೋವಾಗಿದೆ. ಯೋಧರ ಹತ್ಯೆಯನ್ನು ಸಂಭ್ರಮಿಸುವ ಪ್ರಜೆಗಳು, ನಟರು, ರಾಜಕಾರಣಿಗಳು ಹಾಗೂ ಉದ್ಯಮಿಗಳು ಯಾರೇ ಆಗಲಿ ಅವರು ದೇಶದ್ರೋಹಿಗಳು. ಯಾರೇ ದೇಶದ್ರೋಹ ಹೇಳಿಕೆ ನೀಡಿದರೂ ಅವರ ಪ್ರತಿರೋಧಕ್ಕೆ ಯುವಕರ ಪಡೆ ಸಿದ್ಧವಾಗಿದೆ ಎಂದು ಕಿಡಿಕಾರಿದ್ದಾರೆ.

ಅಲ್ಲದೇ ಸಿಆರ್‌ಪಿಎಫ್‌ನ 40 ಕ್ಕೂ ಅಧಿಕ ಯೋಧರು ಬಲಿಯಾಗಿದ್ದಾರೆ. ಈ ಕೃತ್ಯವೆಸಗಿದ ಪಾಕ್ ಉಗ್ರರನ್ನು ಬುಡ ಸಮೇತ ಕಿತ್ತು ಎಸೆಯಬೇಕು ಎಂದು ನಾನು ಮೋದಿ ಅವರಿಗೆ ಮನವಿ ಮಾಡುತ್ತೇನೆ. ಗಡಿ ಯೋಧರು ಯಾವ ಜಾತಿ, ಪಕ್ಷ ಭೇದವಿಲ್ಲದೆ ನಾವೆಲ್ಲ ಭಾರತೀಯರೆಂದು ದೇಶವನ್ನು ಕಾಯುತ್ತಾರೆ. ಹಾಗೆಯೇ ನಾವೆಲ್ಲ ಒಂದಾಗಿ ಉಗ್ರರ ವಿರುದ್ಧ ನಿಲ್ಲಬೇಕು ಎಂದು ಅವರು ತಿಳಿಸಿದ್ದಾರೆ.

Vishwa News 24

Recent Posts

ಕಾಪು : ಭಾರತ್ ಜೋಡೋ ಮತ್ತು ಗ್ಯಾರಂಟಿ ಯೋಜನೆಗಳ ಮಾಹಿತಿ ಕಾರ್ಯಾಗಾರ – vishwanews24

ಕಾಪು : ಭಾರತ್ ಜೋಡೋ ಮತ್ತು ಗ್ಯಾರಂಟಿ ಯೋಜನೆಗಳ ಮಾಹಿತಿ ಕಾರ್ಯಾಗಾರ ಕರ್ನಾಟಕ ಸರ್ಕಾರದ ಯೋಜನೆಗಳಾದ ಭಾರತ್ ಜೋಡೋ ಮತ್ತು…

1 day ago

ದೇಶ ವಿರೋಧಿ ಚಟುವಟಿಕೆ ಮಾಡಿದಾಗ ಆರ್‌ಎಸ್‌ಎಸ್ ವಿರುದ್ಧ ಮಾತನಾಡಬೇಕಾಗುತ್ತೆ : ಬಿ.ಕೆ. ಹರಿಪ್ರಸಾದ್‌ – vishwanews24

ದೇಶ ವಿರೋಧಿ ಚಟುವಟಿಕೆ ಮಾಡಿದಾಗ ಆರ್‌ಎಸ್‌ಎಸ್ ವಿರುದ್ಧ ಮಾತನಾಡಬೇಕಾಗುತ್ತೆ : ಬಿ.ಕೆ. ಹರಿಪ್ರಸಾದ್‌ ಬೀದರ್‌: ‘ದೇಶ ವಿರೋಧಿ ಚಟುವಟಿಕೆ ಮಾಡಿದಾಗ…

1 day ago

ಬಿಜೆಪಿಯಿಂದ ಅಧಿವೇಶನಕ್ಕೆ ಅಡ್ಡಿ ಹಿಂದೆ ಹಿಡನ್ ಅಜೆಂಡಾ: ಯು.ಟಿ.ಖಾದರ್ ಆರೋಪ – vishwanews24

ವಿಧಾನಸಭೆ ಅಧಿವೇಶನ ರಾಜಕೀಯ ಮಾಡುವ ಸಭಾಂಗಣ ಆಗಬಾರದು .. ಪರಿಹಾರ ಕಂಡುಕೊಳ್ಳಲು ಇರುವ ವೇದಿಕೆಗೆ ಅಡ್ಡಿ ಪಡಿಸಿರುವ ಬಿಜೆಪಿಯನ್ನು ಜನತೆ…

1 day ago

ಕುಂದಾಪುರ: ಸಮುದ್ರ ಮಧ್ಯದಲ್ಲಿ ಸಿಲುಕಿಕೊಂಡಿದ್ದ ದೋಣಿ – ನಾಲ್ವರು ಮೀನುಗಾರರ ರಕ್ಷಣೆ – vishwanews24

ಕುಂದಾಪುರ: ಸಮುದ್ರ ಮಧ್ಯದಲ್ಲಿ ಸಿಲುಕಿಕೊಂಡಿದ್ದ ದೋಣಿ - ನಾಲ್ವರು ಮೀನುಗಾರರ ರಕ್ಷಣೆ ಕುಂದಾಪುರ :ಮೀನುಗಾರಿಕಾ ದೋಣಿಯ ಎಂಜಿನ್ ದೋಷದಿಂದ ಸಮುದ್ರದ…

1 day ago

ಮಂಗಳೂರು: ಆಹಾರ ಸುರಕ್ಷತೆ ತಪಾಸಣೆಗೆ ತಾಲೂಕು ಮಟ್ಟದಲ್ಲಿ ವಾಚ್‌ಟೀಮ್ : ಸಚಿವ ಯು.ಟಿ.ಖಾದರ್ – vishwanews24

ಮಂಗಳೂರು: ಕೃತಕ ಪನ್ನೀರ್, ಫುಡ್ ಕಲರ್‌, ಅಜಿನಮೊಟೊ ವಿರುದ್ಧ ಕ್ರಮ ಆಹಾರ ಸುರಕ್ಷತೆ ತಪಾಸಣೆಗೆ ತಾಲೂಕು ಮಟ್ಟದಲ್ಲಿ ವಾಚ್‌ಟೀಮ್ :…

1 day ago

ವಂದೇ ಭಾರತ್ ಪ್ರಾಯೋಗಿಕ ಸಂಚಾರ ಪೂರ್ಣ ; ಸುಬ್ರಹ್ಮಣ್ಯ ರೋಡ್ ನಿಂದ ಮಂಗಳೂರಿಗೆ ಯಶಸ್ವಿಯಾಗಿ ತೆರಳಿದ ರೈಲು  – vishwanews24

ವಂದೇ ಭಾರತ್ ಪ್ರಾಯೋಗಿಕ ಸಂಚಾರ ಪೂರ್ಣ ; ಸುಬ್ರಹ್ಮಣ್ಯ ರೋಡ್ ನಿಂದ ಮಂಗಳೂರಿಗೆ ಯಶಸ್ವಿಯಾಗಿ ತೆರಳಿದ ರೈಲು  ಪುತ್ತೂರು: ಹಲವು…

1 day ago