ರಾಯಚೂರು : ಜಮ್ಮು-ಕಾಶ್ಮೀರದ ಪುಲ್ವಾಮದಲ್ಲಿ ನಡೆದ ಉಗ್ರರ ದಾಳಿಯ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ದೇಶದ್ರೋಹಿಗಳು ಸಂತಸ ವ್ಯಕ್ತಪಡಿಸುತ್ತಿರುವ ಹಿನ್ನಲೆಯಲ್ಲಿ ಬುದ್ಧಿಜೀವಿಗಳು ಹೇಳಿಕೆ ನೀಡುವಾಗ ಅವರ ನಾಲಗೆ ಮೇಲೆ ಹಿಡಿತವಿರಿಲಿ. ಇಲ್ಲದಿದ್ದರೆ ನಾಲಿಗೆ ಕತ್ತರಿಸಬೇಕಾಗುತ್ತದೆ ಎಂದು ಸುರಪುರ ಶಾಸಕ ರಾಜುಗೌಡ ಎಚ್ಚರಿಕೆ ನೀಡಿದ್ದಾರೆ.
ಜಮ್ಮು-ಕಾಶ್ಮೀರದ ಪುಲ್ವಾಮದಲ್ಲಿ ನಡೆದ ಉಗ್ರರ ದಾಳಿಯಲ್ಲಿ ಹುತಾತ್ಮರಾದ ಯೋಧರ ಸಾವಿಗೆ ಸಂತಾಪ ಸೂಚಿಸಿ, ಬಳಿಕ ಮಾತನಾಡಿದ ಅವರು, ಪುಲ್ವಾಮದಲ್ಲಿ ನಡೆದ ಘೋರ ಉಗ್ರರ ದಾಳಿಯಲ್ಲಿ ವೀರ ಯೋಧರು ಹುತಾತ್ಮರಾಗಿರುವುದು ಬೇಸರದ ಸಂಗತಿ. ಇದರಿಂದ ಇಡೀ ದೇಶಕ್ಕೆ ನೋವಾಗಿದೆ. ಯೋಧರ ಹತ್ಯೆಯನ್ನು ಸಂಭ್ರಮಿಸುವ ಪ್ರಜೆಗಳು, ನಟರು, ರಾಜಕಾರಣಿಗಳು ಹಾಗೂ ಉದ್ಯಮಿಗಳು ಯಾರೇ ಆಗಲಿ ಅವರು ದೇಶದ್ರೋಹಿಗಳು. ಯಾರೇ ದೇಶದ್ರೋಹ ಹೇಳಿಕೆ ನೀಡಿದರೂ ಅವರ ಪ್ರತಿರೋಧಕ್ಕೆ ಯುವಕರ ಪಡೆ ಸಿದ್ಧವಾಗಿದೆ ಎಂದು ಕಿಡಿಕಾರಿದ್ದಾರೆ.
ಅಲ್ಲದೇ ಸಿಆರ್ಪಿಎಫ್ನ 40 ಕ್ಕೂ ಅಧಿಕ ಯೋಧರು ಬಲಿಯಾಗಿದ್ದಾರೆ. ಈ ಕೃತ್ಯವೆಸಗಿದ ಪಾಕ್ ಉಗ್ರರನ್ನು ಬುಡ ಸಮೇತ ಕಿತ್ತು ಎಸೆಯಬೇಕು ಎಂದು ನಾನು ಮೋದಿ ಅವರಿಗೆ ಮನವಿ ಮಾಡುತ್ತೇನೆ. ಗಡಿ ಯೋಧರು ಯಾವ ಜಾತಿ, ಪಕ್ಷ ಭೇದವಿಲ್ಲದೆ ನಾವೆಲ್ಲ ಭಾರತೀಯರೆಂದು ದೇಶವನ್ನು ಕಾಯುತ್ತಾರೆ. ಹಾಗೆಯೇ ನಾವೆಲ್ಲ ಒಂದಾಗಿ ಉಗ್ರರ ವಿರುದ್ಧ ನಿಲ್ಲಬೇಕು ಎಂದು ಅವರು ತಿಳಿಸಿದ್ದಾರೆ.
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…
ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ ನವದೆಹಲಿ: ದೇಶೀಯ ಮಾರುಕಟ್ಟೆಯಲ್ಲಿ ಸಕ್ಕರೆ ಬೆಲೆಯನ್ನು ನಿಯಂತ್ರಿಸಲು ಮತ್ತು…
ಹಿಜಬ್ ಬಗ್ಗೆ ಮಾತಾಡುವ ಬಿಜೆಪಿಯವರು ನೀಟ್ ಬಗ್ಗೆ ಮಾತಾಡಲಿ : ಮಧು ಬಂಗಾರಪ್ಪ ಆಕ್ರೋಶ ಬೆಂಗಳೂರು: ಹಿಜಬ್ ಬಗ್ಗೆ ಮಾತಾಡುವ…