Featured

ದೇಶದ ಅಭಿವೃದ್ಧಿ ಮಾಡಲು ಐದು ವರ್ಷ ಸಾಕಾಗುವುದಿಲ್ಲ ಮೋದಿ ಮತ್ತೆ ಪ್ರಧಾನಿಯಾಗಬೇಕು : ಕಂಗನಾ ರಣಾವತ್

ಮುಂಬೈ : ಪ್ರಧಾನಿ ಮೋದಿ ಅವರು ಮತ್ತೆ ಅಧಿಕಾರಕ್ಕೆ ಬರಬೇಕು ಎಂದು ಹೇಳಿದ ಬಾಲಿವುಡ್‌ನ ಕ್ವೀನ್ ಚಿತ್ರದ ನಟಿ ಕಂಗನಾ ರಣಾವತ್ ರಾಜಕೀಯ ಪ್ರವೇಶಿಸುವ ಬಗ್ಗೆ ಸುಳಿವು ಬಿಟ್ಟುಕೊಟ್ಟಿದ್ದಾರೆ.ಇನ್ನು ಎಲ್ಲರಿಗೂ ತಿಳಿದಿರುವಂತೆ ಕಂಗನಾ ಈ ಹಿಂದೆಯೇ ನಾನು ಪ್ರಧಾನಿ ಮೋದಿ ಅವರ ಬಹು ದೊಡ್ಡ ಅಭಿಮಾನಿ ಎಂದಿದ್ದರು. ಅವರ ಯಶಸ್ವಿ ಜೀವನ ನಮಗೆ ರೋಲ್ ಮಾಡೆಲ್. ಒಬ್ಬ ಚಾಯ್ ವಾಲ ಪ್ರಧಾನಿ ಆಗುವುದು, ಸಾಮಾನ್ಯ ಮನುಷ್ಯನ ಸಾಧನೆ ಮಾತ್ರವಲ್ಲ. ಅದು ನಮ್ಮ ಪ್ರಜಾಪ್ರಭುತ್ವದ ಯಶಸ್ಸು ಕೂಡ ಎನ್ನುವ ಅಭಿಪ್ರಾಯವನ್ನು ಹೊರ ಹಾಕಿದ್ದರು. ಸದ್ಯ ಸಿನಿಮಾರಂಗದಲ್ಲಿ ಬ್ಯುಸಿ ಆಗಿರುವ ಕಂಗನಾ ರಣಾವತ್ ರಾಜಕೀಯ ಪ್ರವೇಶದ ಬಗ್ಗೆ ಸುಳಿವು ನೀಡಿದ್ದಾರೆ.

ಇತ್ತೀಚಿಗಷ್ಟೆ ಖಾಸಗಿ ವಾಹಿನಿಯ ಸಂದರ್ಶನವೊಂದರಲ್ಲಿ ರಾಜಕೀಯದ ಬಗ್ಗೆ ಮಾತನಾಡಿದ ಕಂಗನಾ ದೇಶದಲ್ಲಿನ ಸಾಮಾಜಿಕ ಅಸಮಾನತೆಗಳ ಬಗ್ಗೆಯೂ ಕೂಡ ತಮ್ಮ ಕಾಳಜಿ ತೋರಿದ್ದರು. ಇದೇ ಸಮಯದಲ್ಲಿ ಬಾಲಿವುಡ್ ಬೋಲ್ಡ್ ಬೆಡಗಿ ರಾಜಕೀಯಕ್ಕೆ ಬರುವ ಸಣ್ಣ ಸುಳಿವು ನೀಡಿದ್ದಾರೆ. ಯುವ ಪಡೆ ದೇಶದ ಆಡಳಿತ ನಡೆಸಬೇಕು ಎನ್ನುವ ಉದ್ದೇಶ ಹೊಂದಿರುವ ಕಂಗನಾ ಲೋಕಸಭೆ ಚುನಾವಣೆಯಲ್ಲಿ ರಾಜಕೀಯ ಪ್ರವೇಶಿಸುವ ಊಹಾಪೋಹ ಇದೆ. ಕಂಗಾನ ದೇಶಕ್ಕೆ ಸೇವೆ ಸಲ್ಲಿಸುವ ಮನಸ್ಸು ತಮಗಿದೆ ಎನ್ನುವುದನ್ನು ತಿಳಿಸಿದ್ದು, ಬಾಲಿವುಡ್ ಅಂಗಳದಲ್ಲಿ ರಾಜಕೀಯದ ಸುದ್ದಿ ದಟ್ಟವಾಗಿದೆ.
ಇತ್ತೀಚಿಗೆ ಕಂಗನಾ ೨೦೧೯ರಲ್ಲಿ ಮೋದಿ ಕೇಂದ್ರದಲ್ಲಿ ಮತ್ತೆ ಅಧಿಕಾರಕ್ಕೆ ಬರುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಮೋದಿ ಅವರು ಮತ್ತೆ ಅಧಿಕಾರಕ್ಕೆ ಬರಬೇಕು. ದೇಶದ ಅಭಿವೃದ್ಧಿ ಮಾಡಲು ಐದು ವರ್ಷ ಸಾಕಾಗುವುದಿಲ್ಲ ಎಂದಿದ್ದಾರೆ.

ಜಾಹಿರಾತು: vyshali Bar& Family Restaurant kaup: 

prop: NAYESH P SHETTY: 9620427036

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

4 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

5 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

5 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

5 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

5 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

5 days ago