ಹೊಸದಿಲ್ಲಿ:ದೇಶದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಮಿಲಿಟರಿ ಪೊಲೀಸ್ ಸೇವೆಗೆ ಮಹಿಳೆಯರನ್ನು ನೇಮಿಸಿಕೊಳ್ಳುವ ತೀರ್ಮಾನವನ್ನು ಕೈಗೊಳ್ಳಲಾಗಿದ್ದು, 100 ಪೊಲೀಸರ ನೇಮಕಕ್ಕೆ ಅಧಿಸೂಚನೆ ಪ್ರಕಟಿಸಲಾಗಿದೆ.
ಸೇನೆಯಲ್ಲಿ ಈವರೆಗೆ ಅಧಿಕಾರಿಗಳಾಗಿ ಕೆಲಸ ಮಾಡುತ್ತಿದ್ದ ಮಹಿಳೆಯರು ಇನ್ನು ಪೊಲೀಸರಾಗಿಯೂ ಕೆಲಸ ಮಾಡಬಹುದು. ಪುರುಷರಿಗೆ ಸಮಾನವಾಗಿ ಮಹಿಳೆ ಯರಿಗೆ ಸೇನೆಯಲ್ಲಿ ಅವಕಾಶ ಕಲ್ಪಿಸುತ್ತಿಲ್ಲ ಎಂಬ ಆರೋಪದ ಮಧ್ಯೆ ಇದು ಮಹತ್ವದ ಮೈಲುಗಲ್ಲಾಗಿದ್ದು, ಇದೇ ಮೊದಲ ಬಾರಿಗೆ ಸೇನಾ ಪೊಲೀಸ್ ಹುದ್ದೆಗೆ ಮಹಿಳೆಯ ರನ್ನು ನೇಮಿಸಲು ಅರ್ಜಿ ಆಹ್ವಾನಿಸಲಾಗಿದೆ.
ಗುರುವಾರದಿಂದ ಆನ್ಲೈನ್ ನೋಂದಣಿ ಆರಂಭವಾಗಿದ್ದು, ಜೂನ್ 8ರ ವರೆಗೆ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗೆ ಮಹಿಳೆಯರನ್ನು ನೇಮಿಸುವ ಪ್ರಕ್ರಿಯೆಯನ್ನು ಸೇನಾ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಅಧಿಕಾರ ವಹಿಸಿಕೊಂಡಾ ಗಲೇ ಆರಂಭಿಸಿದ್ದರು ಎಂದು ಸೇನೆ ಮೂಲಗಳು ತಿಳಿಸಿವೆ.
ಕಳೆದ ಜನವರಿಯಲ್ಲಿ ಈ ಬಗ್ಗೆ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಘೋಷಣೆ ಮಾಡಿದ್ದು, ಮಿಲಿಟರಿ ಪೊಲೀಸ್ ವಿಭಾಗದಲ್ಲಿ ಮಹಿಳೆಯರನ್ನು ನೇಮಿಸಿಕೊಳ್ಳಲು ನಾವು ಐತಿಹಾಸಿಕ ನಿರ್ಧಾರ ಕೈಗೊಂಡಿದ್ದೇವೆ ಎಂದಿದ್ದರು.
ಮಿಲಿಟರಿ ಪೊಲೀಸರು ಸಾಮಾನ್ಯ ಯೋಧರಂತೆ ಗಡಿಯಲ್ಲಿ ನಿಂತು ಕಾರ್ಯಾಚರಣೆ ಮಾಡುವ ಸಾಧ್ಯತೆ ಕಡಿಮೆ. ಈ ಹುದ್ದೆಗಳಿಗೆ ಮಹಿಳೆಯರನ್ನು ನೇಮಿಸಿಕೊಳ್ಳುವ ನಿಟ್ಟಿನಲ್ಲಿ ಇದೊಂದು ಮಹತ್ವದ ಪ್ರಕ್ರಿಯೆಯಾಗಿದೆ.
ಮಹಿಳಾ ಪೊಲೀಸರ ಕರ್ತವ್ಯವೇನು?
ಮಿಲಿಟರಿಯಲ್ಲಿ ಪೊಲೀಸರಂತೆ ಇವರು ಕರ್ತವ್ಯ ನಿರ್ವಹಿಸಲಿದ್ದಾರೆ. ಸೇನೆಯಲ್ಲಿ ಉತ್ತಮ ನಿಯಮಾವಳಿ ಮತ್ತು ಶಿಸ್ತು ಪಾಲನೆ ಇವರ ಪ್ರಧಾನ ಜವಾಬ್ದಾರಿಯಾಗಿರುತ್ತದೆ.
– ಅತ್ಯಾಚಾರ, ಚುಡಾವಣೆ ಮತ್ತು ಕಳವಿನ ಪ್ರಕರಣಗಳು ದಾಖಲಾದಾಗ ತನಿಖೆ ನಡೆಸುವುದು.
– ಮಿಲಿಟರಿ ಕಾರ್ಯಾಚರಣೆಗಳ ವೇಳೆ ಪೊಲೀಸರ ಸಹಕಾರ ಬೇಕೆಂದಾಗ ಒದಗಿಸುವುದು.
– ಗಡಿಯಲ್ಲಿ ಗಲಾಟೆಗಳಾದಾಗ ಗ್ರಾಮಸ್ಥರನ್ನು ತೆರವುಗೊಳಿಸುವುದು.
– ನಿರ್ವಸಿತರಾಗುವ ಮಹಿಳೆಯರು ಮತ್ತು ಮಕ್ಕಳ ಪುನರ್ವಸತಿ ವ್ಯವಸ್ಥೆ ಕಲ್ಪಿಸುವುದು.
– ಸೇನೆ ಕಾರ್ಯಾಚರಣೆ ವೇಳೆ ಮಹಿಳೆಯರನ್ನು ದೂರ ಕಳುಹಿಸಲು.
– ಸಂಘರ್ಷದ ಸಂದರ್ಭ ಯುದ್ಧ ಕೈದಿಗಳ ಶಿಬಿರಗಳ ಮೇಲ್ವಿಚಾರಣೆ.
– ಕಾಂಗೊ, ಸೊಮಾಲಿಯಾ, ರುವಾಂಡಾ, ಸಿಯೆರಾಲಿಯೊನ್ಮೊದಲಾದೆಡೆ ಕಳುಹಿಸುವ ವಿಶ್ವ ಸಂಸ್ಥೆಯ ಶಾಂತಿಪಾಲನಾ ಪಡೆಗೆ.
ನೇಮಕಾತಿ ಹೇಗೆ?
– ಏಪ್ರಿಲ್ 25ರಿಂದ ಜೂನ್ 8ವರೆಗೆ ಆನ್ಲೈನ್ನಲ್ಲಿ ಮಾತ್ರ ಅರ್ಜಿ ಸಲ್ಲಿಸಬಹುದು.
– ಕನಿಷ್ಠ ವಯೋಮಿತಿ 17.5 ವರ್ಷ, ಗರಿಷ್ಠ 21. ಯೋಧರ ವಿಧವೆಯರಿಗೆ 30 ವರ್ಷದವರೆಗೆ ವಿನಾಯಿತಿ.
– ಅಂಬಾಲಾ, ಲಖನೌ, ಜಬಲ್ಪುರ, ಬೆಂಗಳೂರು ಮತ್ತು ಶಿಲ್ಲಾಂಗ್ನಲ್ಲಿ ನೇಮಕಾತಿ ರಾರಯಲಿ.
– ಸಾಮಾನ್ಯ ಪ್ರವೇಶ ಪರೀಕ್ಷೆ ಮೂಲಕ ಲಿಖಿತ ಪರೀಕ್ಷೆ
– ಲಿಖಿತ ಪರೀಕ್ಷೆಯಲ್ಲಿ ಆಯ್ಕೆಯಾದವರಿಗೆ ವೈದ್ಯಕೀಯ ಪರೀಕ್ಷೆ.
ಯಾರಿಗೆ ಅವಕಾಶವಿಲ್ಲ?
– ಲಿಂಗ ಪರಿವರ್ತನೆ ಶಸ್ತ್ರ ಚಿಕಿತ್ಸೆ ಮಾಡಿಕೊಂಡವರಿಗೆ
– ಗರ್ಭಿಣಿಯರಿಗೆ
– ತೋಳಿನ ಹೊರಭಾಗದಲ್ಲಿ ಟ್ಯಾಟೂ ಹಾಕಿಸಿರಬಾರದು.
– ದೇಹದ ಇತರ ಯಾವುದೇ ಭಾಗದಲ್ಲಿ ಶಾಶ್ವತ ಹಚ್ಚೆ ಇರಬಾರದು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…