ಮಂಗಳೂರು: ದೇಶದ ಎಲ್ಲಾ ಹಗರಣಗಳ ಹಿಂದೆ ಕಾಂಗ್ರೆಸ್ಸಿನ ಕೈ ಇರುವಂತೆ, ದೇಶದ ಎಲ್ಲಾ ಗಲಭೆಗಳ ಹಿಂದೆಯೂ ಕಾಂಗ್ರೆಸ್ ನಾಯಕರ ಕೈ ಇರುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ದೇಶದ ಎಲ್ಲಾ ಹಗರಣಗಳ ಹಿಂದೆ ಕಾಂಗ್ರೆಸ್ಸಿನ ಕೈ ಇರುವಂತೆ, ದೇಶದ ಎಲ್ಲಾ ಗಲಭೆಗಳ ಹಿಂದೆಯೂ ಕಾಂಗ್ರೆಸ್ ನಾಯಕರ ಕೈ ಇರುತ್ತದೆ. ಅವರು ಅಧಿಕಾರದಲ್ಲಿದ್ದಾಗ ದೇಶ ವಿರೋಧಿಗಳಿಗೆ ಬೆಂಬಲ ನೀಡುವುದು, ಗಲಭೆಕೋರರ ಮೇಲಿನ ಪ್ರಕರಣಗಳನ್ನು ರದ್ದು ಮಾಡುವುದು, ಅಧಿಕಾರ ಕಳೆದುಕೊಂಡಾಗ ದೇಶದಲ್ಲಿ ಗಲಭೆ ಎಬ್ಬಿಸಿ ಸಮಾಜದ ಶಾಂತಿ ಕದಡಿ ಆಡಳಿತ ಪಕ್ಷದ ಮೇಲೆ ಗೂಬೆ ಕೂರಿಸುವುದು. ಇದು ಐಎನ್ಸಿ ನಾಯಕರ ಸಿದ್ಧಾಂತ ಎಂದಿದ್ದಾರೆ.
ಸಮಾಜದಲ್ಲಿ ಬೆಂಕಿ ಹಚ್ಚುವ ಸಮಾಜಘಾತುಕರನ್ನು ಮಟ್ಟಹಾಕಿ ಶಾಂತಿಯುತ ಸಮಾಜ ಕಟ್ಟಬೇಕಾದ ರಾಷ್ಟ್ರೀಯ ಪಕ್ಷವೊಂದು ರಾಜಕೀಯ ಲಾಭಕ್ಕಾಗಿ ಬೆಂಕಿ ಇಡುವ ಕೆಲಸಕ್ಕೆ ಇಳಿದಿರುವುದು ಅತ್ಯಂತ ಹೀನಾಯ ಎಂದು ಹೇಳಿದ್ದಾರೆ.
ನಾಗುರಿ ದುರಂತ - ಕಳಪೆ ಕಾಮಗಾರಿಯ ಶಂಕೆ : ತಪ್ಪಿತಸ್ಥರ ವಿರುದ್ಧ ಪ್ರಕರಣ ದಾಖಲಿಸಲು ಆದೇಶ ಮಂಗಳೂರು: ನಾಗುರಿಯಲ್ಲಿ ಮನೆ…
ನಕಲಿ ಪಾಸ್ಪೋರ್ಟ್ ಪ್ರಕರಣ: ಮಂಗಳೂರು ಟ್ರಾವೆಲ್ ಏಜೆಂಟ್ ವಿರುದ್ಧದ ಪ್ರಕರಣ ರದ್ದತಿಗೆ ಹೈಕೋರ್ಟ್ ನಕಾರ ಬೆಂಗಳೂರು: ಆಂಧ್ರಪ್ರದೇಶದ ಭಯೋತ್ಪಾದನಾ ನಿಗ್ರಹ…
ವಾಣಿಜ್ಯ LPG ಸಿಲಿಂಡರ್ ದರದಲ್ಲಿ ಭಾರೀ ಇಳಿಕೆ : ಇಂದಿನಿಂದಲೇ ಪರಿಷ್ಕೃತ ದರ ಜಾರಿ ನವದೆಹಲಿ: ವಾಣಿಜ್ಯ ಬಳಕೆಯ ಎಲ್ಪಿಜಿ ಪೂರೈಕೆ…
ಆಟೋ ಚಾಲಕರಿಗೆ ಸಿಹಿ ಸುದ್ದಿ: ಎಲ್ಪಿಜಿ ದರ 10 ರೂ. ಇಳಿಕೆ ಬೆಂಗಳೂರು: ನಿರಂತರ ಎಲ್ಪಿಜಿ ದರ ಏರಿಕೆಯಿಂದ ಕಂಗಾಲಾಗಿದ್ದ ಆಟೋ…
ರಾಮ ಮಂದಿರದ ದೇಣಿಗೆ ಹಣ ದುರುಪಯೋಗ ಆರೋಪ - ಸಿಎಂ ಯೋಗಿ ಯಾರ ತಪ್ಪನ್ನೂ ಸಹಿಸಲ್ಲ : ಸಿ.ಟಿ.ರವಿ ಬೆಂಗಳೂರು:…
ಮಂಗಳೂರು: ಬೈಕಂಪಾಡಿ ದರೋಡೆ ಪ್ರಕರಣಕ್ಕೆ ಟ್ವಿಸ್ಟ್ - ವಾಹನವನ್ನು ಬಿಟ್ಟು ಪರಾರಿಯಾದ ಆರೋಪಿಗಳು ; ಕಾರು ಪತ್ತೆ ಮಂಗಳೂರು: ಬೈಕಂಪಾಡಿ…