ಮಂಗಳೂರು: ದೇಶದ ಎಲ್ಲಾ ಹಗರಣಗಳ ಹಿಂದೆ ಕಾಂಗ್ರೆಸ್ಸಿನ ಕೈ ಇರುವಂತೆ, ದೇಶದ ಎಲ್ಲಾ ಗಲಭೆಗಳ ಹಿಂದೆಯೂ ಕಾಂಗ್ರೆಸ್ ನಾಯಕರ ಕೈ ಇರುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ದೇಶದ ಎಲ್ಲಾ ಹಗರಣಗಳ ಹಿಂದೆ ಕಾಂಗ್ರೆಸ್ಸಿನ ಕೈ ಇರುವಂತೆ, ದೇಶದ ಎಲ್ಲಾ ಗಲಭೆಗಳ ಹಿಂದೆಯೂ ಕಾಂಗ್ರೆಸ್ ನಾಯಕರ ಕೈ ಇರುತ್ತದೆ. ಅವರು ಅಧಿಕಾರದಲ್ಲಿದ್ದಾಗ ದೇಶ ವಿರೋಧಿಗಳಿಗೆ ಬೆಂಬಲ ನೀಡುವುದು, ಗಲಭೆಕೋರರ ಮೇಲಿನ ಪ್ರಕರಣಗಳನ್ನು ರದ್ದು ಮಾಡುವುದು, ಅಧಿಕಾರ ಕಳೆದುಕೊಂಡಾಗ ದೇಶದಲ್ಲಿ ಗಲಭೆ ಎಬ್ಬಿಸಿ ಸಮಾಜದ ಶಾಂತಿ ಕದಡಿ ಆಡಳಿತ ಪಕ್ಷದ ಮೇಲೆ ಗೂಬೆ ಕೂರಿಸುವುದು. ಇದು ಐಎನ್ಸಿ ನಾಯಕರ ಸಿದ್ಧಾಂತ ಎಂದಿದ್ದಾರೆ.
ಸಮಾಜದಲ್ಲಿ ಬೆಂಕಿ ಹಚ್ಚುವ ಸಮಾಜಘಾತುಕರನ್ನು ಮಟ್ಟಹಾಕಿ ಶಾಂತಿಯುತ ಸಮಾಜ ಕಟ್ಟಬೇಕಾದ ರಾಷ್ಟ್ರೀಯ ಪಕ್ಷವೊಂದು ರಾಜಕೀಯ ಲಾಭಕ್ಕಾಗಿ ಬೆಂಕಿ ಇಡುವ ಕೆಲಸಕ್ಕೆ ಇಳಿದಿರುವುದು ಅತ್ಯಂತ ಹೀನಾಯ ಎಂದು ಹೇಳಿದ್ದಾರೆ.
ಇನ್ನು ಮುಂದೆ ಫೋನ್ ನಂಬರ್ ನೀಡದೇ ಚಾಟ್ ಮಾಡಬಹುದು : ಏನಿದು ವಾಟ್ಸಪ್ ಹೊಸ ಬದಲಾವಣೆ ? ಕ್ಯಾಲಿಫೋರ್ನಿಯಾ :…
ಬೆಂಗಳೂರು- ಮಂಗಳೂರು ಚತುಷ್ಪಥ ರೈಲು ಮಾರ್ಗ ಯೋಜನೆ ಅಭಿವೃದ್ದಿ: ಸೋಮಣ್ಣ ಬೆಂಗಳೂರು: ಬೆಂಗಳೂರಿನಿಂದ 100 ಕಿ.ಮೀ. ಸುತ್ತಮುತ್ತ ಇರುವ ನಗರಗಳಿಗೆ…
ಮಂಗಳೂರು: ಮಸೀದಿಗೆ ತೆರಳಿದ್ದ ವ್ಯಕ್ತಿ ನಾಪತ್ತೆ ; ಗುರುಪುರ ಸೇತುವೆ ಮೇಲೆ ಸ್ಕೂಟರ್ ಪತ್ತೆ - ಫಲ್ಗುಣಿ ನದಿಯಲ್ಲಿ ಶೋಧ…
ಉಳ್ಳಾಲ: ಕೆರೆಬೈಲ್ ಗುಡ್ಡೆಯಲ್ಲಿ ಮನೆ ಮೇಲೆ ಕುಸಿದ ಕಾಂಪೌಂಡ್ ಹಾಲ್: ತಪ್ಪಿದ ಭಾರೀ ದುರಂತ ಉಳ್ಳಾಲ: ಕಳೆದೆರಡು ದಿನಗಳಿಂದ ಸುರಿಯುತ್ತಿರುವ…
ನಾಗುರಿ ದುರಂತ - ಕಳಪೆ ಕಾಮಗಾರಿಯ ಶಂಕೆ : ತಪ್ಪಿತಸ್ಥರ ವಿರುದ್ಧ ಪ್ರಕರಣ ದಾಖಲಿಸಲು ಆದೇಶ ಮಂಗಳೂರು: ನಾಗುರಿಯಲ್ಲಿ ಮನೆ…
ನಕಲಿ ಪಾಸ್ಪೋರ್ಟ್ ಪ್ರಕರಣ: ಮಂಗಳೂರು ಟ್ರಾವೆಲ್ ಏಜೆಂಟ್ ವಿರುದ್ಧದ ಪ್ರಕರಣ ರದ್ದತಿಗೆ ಹೈಕೋರ್ಟ್ ನಕಾರ ಬೆಂಗಳೂರು: ಆಂಧ್ರಪ್ರದೇಶದ ಭಯೋತ್ಪಾದನಾ ನಿಗ್ರಹ…