ಬೆಂಗಳೂರು: ದೇಶದ ಗೌರವ ಉಳಿಸುವ ಸಲುವಾಗಿ ಕೇಂದ್ರ ಸರ್ಕಾರ ಉದ್ಯಮಿ ಗೌತಮ್ ಅದಾನಿ ಅವರನ್ನು ಬಂಧಿಸಿ, ಕಾನೂನು ಪ್ರಕಾರ ಕ್ರಮ ಕೈಗೊಳ್ಳಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಒತ್ತಾಯಿಸಿದರು.
ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಸರ್ಕಾರ ಈವರೆಗೆ ಉದ್ಯಮಿ ಗೌತಮ್ ಅದಾನಿ ಅವರನ್ನು ರಕ್ಷಿಸುತ್ತಾ ಬಂದಿದೆ. ಈಗ ಅಮೆರಿಕದ ನ್ಯಾಯಾಲಯ ಗೌತಮ್ ಅದಾನಿ ಅಧಿಕಾರಿಗಳಿಗೆ ಲಂಚ ನೀಡಿ ವಿದ್ಯುತ್ ಹಂಚಿಕೆ ಯೋಜನೆ ಪಡೆದಿದ್ದಾರೆ. ಹೀಗಾಗಿ ಅವರನ್ನು ಬಂಧಿಸುವಂತೆ ಆದೇಶಿಸಿದೆ. ಹೀಗಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಗೌತಮ್ ಅದಾನಿ ಅವರನ್ನು ಬಂಧಿಸಿ, ಕಾನೂನು ಪ್ರಕಾರ ಕ್ರಮ ಕೈಗೊಳ್ಳಬೇಕು ಎಂದರು.
ಕಳೆದ ಏಳೆಂಟು ವರ್ಷಗಳಿಂದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಗೌತಮ್ ಅದಾನಿ ಅವರ ಸಂಸ್ಥೆಗಳ ವಿರುದ್ಧ ಆರೋಪ ಮಾಡುತ್ತಿದ್ದರು. ಆದರೆ, ಕೇಂದ್ರ ಸರ್ಕಾರ ಮತ್ತು ತನಿಖಾ ಸಂಸ್ಥೆಗಳು ಯಾವುದೇ ಕ್ರಮ ಕೈಗೊಂಡಿರಲಿಲ್ಲ. ಈ ವಿಚಾರ ಸಂಸತ್ತಿನಲ್ಲೂ ಚರ್ಚೆಯಾಗಿತ್ತು. ಇದೀಗ ಅಮೆರಿಕ ನ್ಯಾಯಾಲಯ ಗೌತಮ್ ಅದಾನಿ ಅವರನ್ನು ಬಂಧಿಸುವಂತೆ ಆದೇಶಿಸಿದೆ. ಮುಖ್ಯಮಂತ್ರಿಗಳು ಸೇರಿದಂತೆ ವಿಪಕ್ಷದ ನಾಯಕರನ್ನು ಬಂಧಿಸುವ ಕೇಂದ್ರ ಸರ್ಕಾರ ಈಗ ಅದಾನಿ ಅವರನ್ನು ಬಂಧಿಸಿ ದೇಶದ ಮರ್ಯಾದೆ ಉಳಿಸಬೇಕು ಎಂದು ಹೇಳಿದರು.
ಕೇಂದ್ರ ಸರ್ಕಾರ ಗೌತಮ್ ಅದಾನಿ ಅವರನ್ನು ರಕ್ಷಿಸುವುದರಲ್ಲಿ ಯಾವುದೇ ಪ್ರಯೋಜನವಿಲ್ಲ. ಅದರ ಬದಲು ದೇಶದ ಜನಸಾಮಾನ್ಯರು ಅದಾನಿ ಸಂಸ್ಥೆಗಳ ಷೇರುಗಳ ಮೇಲೆ ಹೂಡಿಕೆ ಮಾಡಿರುವ ಸಾವಿರಾರು ಕೋಟಿಯನ್ನು ರಕ್ಷಿಸುವುದಕ್ಕೆ ಮುಂದಾಗಬೇಕು ಎಂದು ಕೋರಿದರು.
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…