Featured

ದೇಶದ ಗೌರವ ಉಳಿಸಲು ಗೌತಮ್‌ ಅದಾನಿಯನ್ನು ಬಂಧಿಸಿ : ಡಿಸಿಎಂ – vishwanews24

ದೇಶದ ಗೌರವ ಉಳಿಸಲು ಗೌತಮ್‌ ಅದಾನಿಯನ್ನು  ಬಂಧಿಸಿ :  ಡಿಸಿಎಂ

ಬೆಂಗಳೂರು: ದೇಶದ ಗೌರವ ಉಳಿಸುವ ಸಲುವಾಗಿ ಕೇಂದ್ರ ಸರ್ಕಾರ ಉದ್ಯಮಿ ಗೌತಮ್‌ ಅದಾನಿ ಅವರನ್ನು ಬಂಧಿಸಿ, ಕಾನೂನು ಪ್ರಕಾರ ಕ್ರಮ ಕೈಗೊಳ್ಳಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಒತ್ತಾಯಿಸಿದರು.

ಕೆಪಿಸಿಸಿ ಕಚೇರಿಯಲ್ಲಿ  ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಸರ್ಕಾರ ಈವರೆಗೆ ಉದ್ಯಮಿ ಗೌತಮ್‌ ಅದಾನಿ ಅವರನ್ನು ರಕ್ಷಿಸುತ್ತಾ ಬಂದಿದೆ. ಈಗ ಅಮೆರಿಕದ ನ್ಯಾಯಾಲಯ ಗೌತಮ್‌ ಅದಾನಿ ಅಧಿಕಾರಿಗಳಿಗೆ ಲಂಚ ನೀಡಿ ವಿದ್ಯುತ್‌ ಹಂಚಿಕೆ ಯೋಜನೆ ಪಡೆದಿದ್ದಾರೆ. ಹೀಗಾಗಿ ಅವರನ್ನು ಬಂಧಿಸುವಂತೆ ಆದೇಶಿಸಿದೆ. ಹೀಗಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಗೌತಮ್‌ ಅದಾನಿ ಅವರನ್ನು ಬಂಧಿಸಿ, ಕಾನೂನು ಪ್ರಕಾರ ಕ್ರಮ ಕೈಗೊಳ್ಳಬೇಕು ಎಂದರು.

ಕಳೆದ ಏಳೆಂಟು ವರ್ಷಗಳಿಂದ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ಗೌತಮ್‌ ಅದಾನಿ ಅವರ ಸಂಸ್ಥೆಗಳ ವಿರುದ್ಧ ಆರೋಪ ಮಾಡುತ್ತಿದ್ದರು. ಆದರೆ, ಕೇಂದ್ರ ಸರ್ಕಾರ ಮತ್ತು ತನಿಖಾ ಸಂಸ್ಥೆಗಳು ಯಾವುದೇ ಕ್ರಮ ಕೈಗೊಂಡಿರಲಿಲ್ಲ. ಈ ವಿಚಾರ ಸಂಸತ್ತಿನಲ್ಲೂ ಚರ್ಚೆಯಾಗಿತ್ತು. ಇದೀಗ ಅಮೆರಿಕ ನ್ಯಾಯಾಲಯ ಗೌತಮ್‌ ಅದಾನಿ ಅವರನ್ನು ಬಂಧಿಸುವಂತೆ ಆದೇಶಿಸಿದೆ. ಮುಖ್ಯಮಂತ್ರಿಗಳು ಸೇರಿದಂತೆ ವಿಪಕ್ಷದ ನಾಯಕರನ್ನು ಬಂಧಿಸುವ ಕೇಂದ್ರ ಸರ್ಕಾರ ಈಗ ಅದಾನಿ ಅವರನ್ನು ಬಂಧಿಸಿ ದೇಶದ ಮರ್ಯಾದೆ ಉಳಿಸಬೇಕು ಎಂದು ಹೇಳಿದರು.

ಕೇಂದ್ರ ಸರ್ಕಾರ ಗೌತಮ್‌ ಅದಾನಿ ಅವರನ್ನು ರಕ್ಷಿಸುವುದರಲ್ಲಿ ಯಾವುದೇ ಪ್ರಯೋಜನವಿಲ್ಲ. ಅದರ ಬದಲು ದೇಶದ ಜನಸಾಮಾನ್ಯರು ಅದಾನಿ ಸಂಸ್ಥೆಗಳ ಷೇರುಗಳ ಮೇಲೆ ಹೂಡಿಕೆ ಮಾಡಿರುವ ಸಾವಿರಾರು ಕೋಟಿಯನ್ನು ರಕ್ಷಿಸುವುದಕ್ಕೆ ಮುಂದಾಗಬೇಕು ಎಂದು ಕೋರಿದರು.

Vishwa News 24

Recent Posts

ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ -vishwanews24

ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ…

10 minutes ago

ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ -vishwanews24

ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ…

15 minutes ago

ಕಾರ್ಕಳ : ಯಕ್ಷರಂಗಾಯಣದ ಹೆಸರನ್ನು ಬದಲಾಯಿಸಿರುವುದು ಅತ್ಯಂತ ಬೇಜವಾಬ್ದಾರಿ ಹಾಗೂ ಏಕಪಕ್ಷೀಯ ನಿರ್ಧಾರ : ಸುನಿಲ್‌ ಕುಮಾರ್‌ ಆಕ್ರೋಶ -vishwanews24

ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್‌ ಕುಮಾರ್‌ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…

3 hours ago

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ -vishwanews24

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…

4 hours ago

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ -vishwanews24

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…

4 hours ago

ಮೂಡುಬಿದಿರೆ: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ;  ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು  -vishwanews24

ಮೂಡುಬಿದಿರೆ: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ;  ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು  ಮೂಡುಬಿದಿರೆ : ಚಲಿಸುತ್ತಿದ್ದ ಕಾರಿನ ಫಾಗ್ ಲೈಟ್‌ನಿಂದ ಅಕಸ್ಮಾತ್ತಾಗಿ ಬೆಂಕಿ…

7 hours ago