ಸರಕು ಮತ್ತು ಸೇವಾ ತೆರಿಗೆಯ ವ್ಯವಸ್ಥೆಯಲ್ಲಿನ ಸೇವಾ ತೆರಿಗೆ (ಜಿ.ಎಸ್.ಟಿ) ಹಂತಗಳನ್ನು ಕಡಿಮೆ ಮಾಡಿ ಮಹತ್ವದ ಬದಲಾವಣೆಗಳನ್ನು ಕೇಂದ್ರ ಸರಕಾರದ ಜಿ.ಎಸ್.ಟಿ ಮಂಡಳಿಯು ನಿರ್ಧರಿಸಿದೆ.
ಈ ಹಿಂದೆ 4 ಜಿ.ಎಸ್.ಟಿ ಯ ಹಂತಗಳಿದ್ದು, ಅದನ್ನು 2 ಹಂತಗಳಾಗಿ (ಶೇ.5% ಮತ್ತು ಶೇ.18%) ನಿಗಧಿಪಡಿಸಿದ್ದರಿಂದ ಆರ್ಥಿಕವಾಗಿ ಹಿಂದುಳಿದ ವರ್ಗಗಳ ಹಾಗೂ ಮಧ್ಯಮ ವರ್ಗದ ಕುಟುಂಬಗಳ ಜೀವನ ನಿರ್ವಹಣೆಯ ನಿಟ್ಟಿನಲ್ಲಿ ಬದಲಾವಣೆ ತಂದಿರುವುದು ಒಂದು ದಿಟ್ಟ ಹೆಜ್ಜೆ ಆಗಿರುತ್ತದೆ. ಆರೋಗ್ಯ, ಜೀವಾ ವಿಮೆ, ಕ್ಷೀರೋತ್ಪನ್ನ, ಜೀವ ರಕ್ಷಕ ಔಷಧಗಳು ಹಾಗೂ ನಿತ್ಯ ಬಳೆಕೆಯ ವಸ್ತುಗಳಿಗೆ ಇದು ಅನ್ವಯವಾಗುವುದರಿಂದ ದೇಶದ ತೆರಿಗೆ ವ್ಯವಸ್ಥೆಯಲ್ಲಿ ಒಂದು ಕ್ರಾಂತಿಕಾರಕ ಬದಲಾವಣೆಯನ್ನು ತಂದ ಮಾನ್ಯ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ನೆತೃತ್ವದ ಕೇಂದ್ರ ಸರಕಾರದ ಈ ತೆರಿಗೆ ನೀತಿಯನ್ನು ದೇಶದ ಸಾಮಾನ್ಯ ಜನರಲ್ಲದೇ ನಾನೂ ಕೂಡ ಸ್ವಾಗತಿಸುತ್ತೇವೆ.
ಈ ತೆರಿಗೆ ನೀತಿಯ ಬದಲಾವಣೆಯಿಂದ ಮುಂದಿನ ದಿನಗಳಲ್ಲಿ ಸಾಮಾನ್ಯ ಹಾಗೂ ಮಧ್ಯಮ ವರ್ಗದ ಜನರ ಜೀವನ ಶೈಲಿಯಲ್ಲಿ ಸುಧಾರಣೆಯಾಗುವುದು ಮಹತ್ವದ ಸಂಗತಿಯಾಗಿರುತ್ತದೆ. ಅಲ್ಲದೆ ಜಿಎಸ್ಟಿ ದರವನ್ನು ಗಣನೀಯವಾಗಿ ಇಳಿಮುಖ ಮಾಡಿದ್ದರಿಂದ ದೇಶದ ಜಿ.ಡಿ.ಪಿ ಯ ಮೇಲೆ ಧನಾತ್ಮಕ ಪರಿಣಾಮವನ್ನು ಬೀರುವುದರಲ್ಲಿ ಯಾವುದೇ ಸಂಶಯವಿಲ್ಲ. ಎಂದು ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಹೇಳಿದ್ದಾರೆ.
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…
ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ : ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…