Featured

ದೇಶದ ತೆರಿಗೆ ವ್ಯವಸ್ಥೆಯಲ್ಲಿ ಒಂದು ಕ್ರಾಂತಿಕಾರಕ ಬದಲಾವಣೆ ತಂದ ಕೇಂದ್ರ ಸರಕಾರದ ಈ ನೀತಿಯನ್ನು ಸ್ವಾಗತಿಸುತ್ತೇವೆ : ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ – vishwanews24

ಕೇಂದ್ರ ಸರಕಾರದ ಈ ತೆರಿಗೆ ನೀತಿಯನ್ನು ದೇಶದ ಸಾಮಾನ್ಯ ಜನರಲ್ಲದೇ ನಾನೂ ಕೂಡ ಸ್ವಾಗತಿಸುತ್ತೇನೆ : ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ

ಸರಕು ಮತ್ತು ಸೇವಾ ತೆರಿಗೆಯ ವ್ಯವಸ್ಥೆಯಲ್ಲಿನ ಸೇವಾ ತೆರಿಗೆ (ಜಿ.ಎಸ್.ಟಿ) ಹಂತಗಳನ್ನು ಕಡಿಮೆ ಮಾಡಿ ಮಹತ್ವದ ಬದಲಾವಣೆಗಳನ್ನು ಕೇಂದ್ರ ಸರಕಾರದ ಜಿ.ಎಸ್.ಟಿ ಮಂಡಳಿಯು ನಿರ್ಧರಿಸಿದೆ.

ಈ ಹಿಂದೆ 4 ಜಿ.ಎಸ್.ಟಿ ಯ ಹಂತಗಳಿದ್ದು, ಅದನ್ನು 2 ಹಂತಗಳಾಗಿ (ಶೇ.5% ಮತ್ತು ಶೇ.18%) ನಿಗಧಿಪಡಿಸಿದ್ದರಿಂದ ಆರ್ಥಿಕವಾಗಿ ಹಿಂದುಳಿದ ವರ್ಗಗಳ ಹಾಗೂ ಮಧ್ಯಮ ವರ್ಗದ ಕುಟುಂಬಗಳ ಜೀವನ ನಿರ್ವಹಣೆಯ ನಿಟ್ಟಿನಲ್ಲಿ ಬದಲಾವಣೆ ತಂದಿರುವುದು ಒಂದು ದಿಟ್ಟ ಹೆಜ್ಜೆ ಆಗಿರುತ್ತದೆ. ಆರೋಗ್ಯ, ಜೀವಾ ವಿಮೆ, ಕ್ಷೀರೋತ್ಪನ್ನ, ಜೀವ ರಕ್ಷಕ ಔಷಧಗಳು ಹಾಗೂ ನಿತ್ಯ ಬಳೆಕೆಯ ವಸ್ತುಗಳಿಗೆ ಇದು ಅನ್ವಯವಾಗುವುದರಿಂದ ದೇಶದ ತೆರಿಗೆ ವ್ಯವಸ್ಥೆಯಲ್ಲಿ ಒಂದು ಕ್ರಾಂತಿಕಾರಕ ಬದಲಾವಣೆಯನ್ನು ತಂದ ಮಾನ್ಯ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ನೆತೃತ್ವದ ಕೇಂದ್ರ ಸರಕಾರದ ಈ ತೆರಿಗೆ ನೀತಿಯನ್ನು ದೇಶದ ಸಾಮಾನ್ಯ ಜನರಲ್ಲದೇ ನಾನೂ ಕೂಡ ಸ್ವಾಗತಿಸುತ್ತೇವೆ.

ಈ ತೆರಿಗೆ ನೀತಿಯ ಬದಲಾವಣೆಯಿಂದ ಮುಂದಿನ ದಿನಗಳಲ್ಲಿ ಸಾಮಾನ್ಯ ಹಾಗೂ ಮಧ್ಯಮ ವರ್ಗದ ಜನರ ಜೀವನ ಶೈಲಿಯಲ್ಲಿ ಸುಧಾರಣೆಯಾಗುವುದು ಮಹತ್ವದ ಸಂಗತಿಯಾಗಿರುತ್ತದೆ. ಅಲ್ಲದೆ ಜಿಎಸ್‌ಟಿ ದರವನ್ನು ಗಣನೀಯವಾಗಿ ಇಳಿಮುಖ ಮಾಡಿದ್ದರಿಂದ ದೇಶದ ಜಿ.ಡಿ.ಪಿ ಯ ಮೇಲೆ ಧನಾತ್ಮಕ ಪರಿಣಾಮವನ್ನು ಬೀರುವುದರಲ್ಲಿ ಯಾವುದೇ ಸಂಶಯವಿಲ್ಲ. ಎಂದು ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಹೇಳಿದ್ದಾರೆ.

 

Vishwa News 24

Recent Posts

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ – vishwanews24

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…

21 hours ago

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ; ಆರೋಪಿಗಾಗಿ ಶೋಧ- vishwanews24

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…

21 hours ago

ಆರು ದಿನಗಳ ನಂತರ ಅಮರನಾಥ ಯಾತ್ರೆ ಪುನರಾರಂಭ -vishwanews24

ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…

22 hours ago

BREAKING NEWS : ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ – vishwanews24

 ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…

22 hours ago

ಕಾಮನ್‌ವೆಲ್ತ್ ಗೇಮ್ಸ್ 2026 : ಪ್ಯಾರಾ ಪವರ್‌ ಲಿಫ್ಟಿಂಗ್‌ನಲ್ಲಿ ಕಂಚು ಗೆದ್ದ ಝಂದು ಕುಮಾರ್ – vishwanews24

ಕಾಮನ್‌ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್‌: ಪ್ಯಾರಾ ಪವರ್‌ಲಿಫ್ಟಿಂಗ್‌ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…

24 hours ago

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ – vishwanews24

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…

24 hours ago