ಸರಕು ಮತ್ತು ಸೇವಾ ತೆರಿಗೆಯ ವ್ಯವಸ್ಥೆಯಲ್ಲಿನ ಸೇವಾ ತೆರಿಗೆ (ಜಿ.ಎಸ್.ಟಿ) ಹಂತಗಳನ್ನು ಕಡಿಮೆ ಮಾಡಿ ಮಹತ್ವದ ಬದಲಾವಣೆಗಳನ್ನು ಕೇಂದ್ರ ಸರಕಾರದ ಜಿ.ಎಸ್.ಟಿ ಮಂಡಳಿಯು ನಿರ್ಧರಿಸಿದೆ.
ಈ ಹಿಂದೆ 4 ಜಿ.ಎಸ್.ಟಿ ಯ ಹಂತಗಳಿದ್ದು, ಅದನ್ನು 2 ಹಂತಗಳಾಗಿ (ಶೇ.5% ಮತ್ತು ಶೇ.18%) ನಿಗಧಿಪಡಿಸಿದ್ದರಿಂದ ಆರ್ಥಿಕವಾಗಿ ಹಿಂದುಳಿದ ವರ್ಗಗಳ ಹಾಗೂ ಮಧ್ಯಮ ವರ್ಗದ ಕುಟುಂಬಗಳ ಜೀವನ ನಿರ್ವಹಣೆಯ ನಿಟ್ಟಿನಲ್ಲಿ ಬದಲಾವಣೆ ತಂದಿರುವುದು ಒಂದು ದಿಟ್ಟ ಹೆಜ್ಜೆ ಆಗಿರುತ್ತದೆ. ಆರೋಗ್ಯ, ಜೀವಾ ವಿಮೆ, ಕ್ಷೀರೋತ್ಪನ್ನ, ಜೀವ ರಕ್ಷಕ ಔಷಧಗಳು ಹಾಗೂ ನಿತ್ಯ ಬಳೆಕೆಯ ವಸ್ತುಗಳಿಗೆ ಇದು ಅನ್ವಯವಾಗುವುದರಿಂದ ದೇಶದ ತೆರಿಗೆ ವ್ಯವಸ್ಥೆಯಲ್ಲಿ ಒಂದು ಕ್ರಾಂತಿಕಾರಕ ಬದಲಾವಣೆಯನ್ನು ತಂದ ಮಾನ್ಯ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ನೆತೃತ್ವದ ಕೇಂದ್ರ ಸರಕಾರದ ಈ ತೆರಿಗೆ ನೀತಿಯನ್ನು ದೇಶದ ಸಾಮಾನ್ಯ ಜನರಲ್ಲದೇ ನಾನೂ ಕೂಡ ಸ್ವಾಗತಿಸುತ್ತೇವೆ.
ಈ ತೆರಿಗೆ ನೀತಿಯ ಬದಲಾವಣೆಯಿಂದ ಮುಂದಿನ ದಿನಗಳಲ್ಲಿ ಸಾಮಾನ್ಯ ಹಾಗೂ ಮಧ್ಯಮ ವರ್ಗದ ಜನರ ಜೀವನ ಶೈಲಿಯಲ್ಲಿ ಸುಧಾರಣೆಯಾಗುವುದು ಮಹತ್ವದ ಸಂಗತಿಯಾಗಿರುತ್ತದೆ. ಅಲ್ಲದೆ ಜಿಎಸ್ಟಿ ದರವನ್ನು ಗಣನೀಯವಾಗಿ ಇಳಿಮುಖ ಮಾಡಿದ್ದರಿಂದ ದೇಶದ ಜಿ.ಡಿ.ಪಿ ಯ ಮೇಲೆ ಧನಾತ್ಮಕ ಪರಿಣಾಮವನ್ನು ಬೀರುವುದರಲ್ಲಿ ಯಾವುದೇ ಸಂಶಯವಿಲ್ಲ. ಎಂದು ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಹೇಳಿದ್ದಾರೆ.
ನನ್ನ ಜೀವನದ ಕೊನೆ ಘಟ್ಟದವರೆಗೂ ಮೈತ್ರಿ ಮುಂದುವರೆಸಿಕೊಂಡು ಹೋಗುತ್ತೇನೆ : ಹೆಚ್ಡಿಡಿ ಬೆಂಗಳೂರು: ಒಂದು ರಾಜ್ಯಸಭೆ ಸ್ಥಾನದಿಂದ ನನ್ನ, ಮೋದಿ …
ಜೂನ್ 15 ರಿಂದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ : ಕೇರಳ ಸರ್ಕಾರ ಘೋಷಣೆ ತಿರುವನಂತಪುರಂ: ಕೇರಳ ಸರ್ಕಾರ ಮಹತ್ವದ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ಐವರು ಆರೋಪಿಗಳ ಜಾಮೀನು ರದ್ದು ಅರ್ಜಿ ವಜಾಗೊಳಿಸಿದ ಹೈಕೋರ್ಟ್ ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ…
ಮನೆ ಕೆಲಸಕ್ಕೆ ಸೇರಿದ್ದ ದಂಪತಿಯಿಂದ ಕಳ್ಳತನ ; 25 ಲಕ್ಷ ಹಣ ಕದ್ದು ನೇಪಾಳಕ್ಕೆ ಎಸ್ಕೇಪ್ ಆಗುತ್ತಿದ್ದ ವೇಳೆ ಅರೆಸ್ಟ್ ಬೆಂಗಳೂರು:…
ಮಂಗಳೂರು: ಜೋಕಟ್ಟೆ ಫ್ಲೈಓವರ್ ಬಳಿ ಅಪರಿಚಿತ ಯುವಕನ ಶವ ಪತ್ತೆ ಮಂಗಳೂರು: ಪಣಂಬೂರಿನ ಜೋಕಟ್ಟೆ ಬಳಿ ಬುಧವಾರ ಯುವಕನೊಬ್ಬನ ಶವ…
ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸಿ, ಗೋಹತ್ಯೆ, ಗೋಮಾಂಸ ರಫ್ತನ್ನು ನಿಷೇಧಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ…