Featured

ದೇಶದ ಪ್ರಮುಖ ಜೈನ ಬಸದಿಗಳ ವಾಸ್ತುಶಿಲ್ಪದ ಅಚ್ಚರಿ : ಮೂಡುಬಿದರೆಯ ಸಾವಿರಕಂಬದ ಬಸದಿಗೆ ಮೂರನೇ ಸ್ಥಾನ -Vishwanews24

ದೇಶದ ಪ್ರಮುಖ ಜೈನ ಬಸದಿಗಳ ವಾಸ್ತುಶಿಲ್ಪದ ಅಚ್ಚರಿ : ಮೂಡುಬಿದರೆಯ ಸಾವಿರ ಕಂಬದ ಬಸದಿಗೆ ಮೂರನೇ ಸ್ಥಾನ -Vishwanews24

ಮೂಡುಬಿದರೆ: ವಿಶ್ವ ಪರಂಪರೆಯ ಪವಿತ್ರ ತಾಣಗಳಲ್ಲಿ ಒಂದಾಗಿರುವ ಮೂಡುಬಿದಿರೆಯ ಸಾವಿರ ಕಂಬದ ಬಸದಿ ತ್ರಿಭುವನ ತಿಲಕ ಚೂಡಾಮಣಿ ಎಂದೇ ಪ್ರಸಿದ್ದವಾದ ಜೈನ ಬಸದಿಯು ದೇಶದ ಪ್ರಮುಖ ಜೈನ ಬಸದಿಗಳ ವಾಸ್ತುಶಿಲ್ಪದ ಅಚ್ಚರಿಗಳ ಪೈಕಿ ಇದೀಗ ಮೂರನೇ ಸ್ಥಾನವನ್ನು ಪಡೆದಿದೆ ಎಂದು ಶ್ರೀ ಜೈನ ಮಠಾದೀಶ ಶ್ರೀ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯ ಸ್ವಾಮೀಜಿ ತಿಳಿಸಿದ್ದಾರೆ.

ಈ ಬಗ್ಗೆ ಮಾತನಾಡಿದ ಅವರು, ಅತ್ಯಂತ ಸೂಕ್ಷ್ಮ ಕೆತ್ತನೆಯ ತೀರ್ಥಂಕರ ಜಿನ ಬಿಂಬಗಳು, ಮತ್ತು ಸರ್ವ ಧರ್ಮ ಸಮನ್ವಯದ ಅನೇಕ ಕಲ್ಲಿನ ಕೆತ್ತನೆಗಳು, ಬೆಡಗಿನ ಭಿತ್ತಿಚಿತ್ರಗಳುಳ್ಳ ವಾಸ್ತುವೈಭವದ ಬಸದಿಗಳ ಪಟ್ಟಿಯಲ್ಲಿ ಸಾವಿರ ಕಂಬದ ಬಸದಿಯು ರಾಜಸ್ಥಾನದ ರಣಾಕ್ ಪುರ ಬಸದಿ, ದಿಲ್ ವಾರಾ ದೇಗುಲದ ಅನಂತರದ ಸ್ಥಾನದಲ್ಲಿ ಗುರುತಿಸಲ್ಪಟ್ಟಿರುವುದು ದಿಲ್ಲಿಯ ಜೈನ ಸನ್ಸ್ ಮೂಲಕ ಖಚಿತವಾಗಿದೆ ಎಂದು ತಿಳಿಸಿದ್ದಾರೆ.

ಇನ್ನು ದೇಶದ 13 ಇತರ ಬಸದಿಗಳಲ್ಲಿ 4ನೇಯ ಸ್ಥಾನವನ್ನು ಕಾರ್ಕಳದ ಚತುರ್ಮುಖ ಬಸದಿಗಳಿಸಿದೆ ಎಂದರು.

ಸಾವಿರ ಕಂಬದ ಬಸದಿಗೆ ಪ್ರತಿ ವರ್ಷ ವಿಶ್ವದೆಲ್ಲೆಡೆಯಿಂದ ಅನೇಕ ಸಂಖ್ಯೆಯಲ್ಲಿ ಕಲಾಪ್ರಿಯರು, ಯಾತ್ರಿಕರು ಭೇಟಿ ನೀಡುತ್ತಿರುತ್ತಾರೆ. ಆದರೆ ಈ ಬಾರಿ ಕೊರೊನಾ ಸಂಕಷ್ಟದಿಂದ ಬಸದಿಗೆ ಭೇಟಿ ನೀಡುವ ಯಾತ್ರಿಕರ ಸಂಖ್ಯೆ ಕಡಿಮೆಯಾಗಿದೆ. ಇದೀಗ ಈ ಪರಿಸ್ಥಿತಿಯಲ್ಲಿ ಬಸದಿಯಲ್ಲಿ ನಿತ್ಯ ತ್ರಿಕಾಲ ಪೂಜೆಯ ವ್ಯವಸ್ಥೆ ಮಾಡಲಾಗಿದ್ದು, ಆ ಸಮಯದಲ್ಲಿ ಮಾತ್ರ ಬಸದಿಯನ್ನು ತೆರೆಯಲಾಗುತ್ತಿದೆ. ಕೊರೊನಾದ ಆತಂಕ ಕಡಿಮೆಯಾದ ಬಳಿಕ ಸಾರ್ವಜನಿಕರಿಗೆ ದರ್ಶನಕ್ಕೆ ಅವಕಾಶವನ್ನು ಕಲ್ಪಿಸಲಾಗುತ್ತದೆ ಎಂದು ಸ್ವಾಮೀಜಿಯವರು ತಿಳಿಸಿದ್ದಾರೆ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

1 day ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

1 day ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago