ಮೂಡುಬಿದರೆ: ವಿಶ್ವ ಪರಂಪರೆಯ ಪವಿತ್ರ ತಾಣಗಳಲ್ಲಿ ಒಂದಾಗಿರುವ ಮೂಡುಬಿದಿರೆಯ ಸಾವಿರ ಕಂಬದ ಬಸದಿ ತ್ರಿಭುವನ ತಿಲಕ ಚೂಡಾಮಣಿ ಎಂದೇ ಪ್ರಸಿದ್ದವಾದ ಜೈನ ಬಸದಿಯು ದೇಶದ ಪ್ರಮುಖ ಜೈನ ಬಸದಿಗಳ ವಾಸ್ತುಶಿಲ್ಪದ ಅಚ್ಚರಿಗಳ ಪೈಕಿ ಇದೀಗ ಮೂರನೇ ಸ್ಥಾನವನ್ನು ಪಡೆದಿದೆ ಎಂದು ಶ್ರೀ ಜೈನ ಮಠಾದೀಶ ಶ್ರೀ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯ ಸ್ವಾಮೀಜಿ ತಿಳಿಸಿದ್ದಾರೆ.
ಈ ಬಗ್ಗೆ ಮಾತನಾಡಿದ ಅವರು, ಅತ್ಯಂತ ಸೂಕ್ಷ್ಮ ಕೆತ್ತನೆಯ ತೀರ್ಥಂಕರ ಜಿನ ಬಿಂಬಗಳು, ಮತ್ತು ಸರ್ವ ಧರ್ಮ ಸಮನ್ವಯದ ಅನೇಕ ಕಲ್ಲಿನ ಕೆತ್ತನೆಗಳು, ಬೆಡಗಿನ ಭಿತ್ತಿಚಿತ್ರಗಳುಳ್ಳ ವಾಸ್ತುವೈಭವದ ಬಸದಿಗಳ ಪಟ್ಟಿಯಲ್ಲಿ ಸಾವಿರ ಕಂಬದ ಬಸದಿಯು ರಾಜಸ್ಥಾನದ ರಣಾಕ್ ಪುರ ಬಸದಿ, ದಿಲ್ ವಾರಾ ದೇಗುಲದ ಅನಂತರದ ಸ್ಥಾನದಲ್ಲಿ ಗುರುತಿಸಲ್ಪಟ್ಟಿರುವುದು ದಿಲ್ಲಿಯ ಜೈನ ಸನ್ಸ್ ಮೂಲಕ ಖಚಿತವಾಗಿದೆ ಎಂದು ತಿಳಿಸಿದ್ದಾರೆ.
ಇನ್ನು ದೇಶದ 13 ಇತರ ಬಸದಿಗಳಲ್ಲಿ 4ನೇಯ ಸ್ಥಾನವನ್ನು ಕಾರ್ಕಳದ ಚತುರ್ಮುಖ ಬಸದಿಗಳಿಸಿದೆ ಎಂದರು.
ಸಾವಿರ ಕಂಬದ ಬಸದಿಗೆ ಪ್ರತಿ ವರ್ಷ ವಿಶ್ವದೆಲ್ಲೆಡೆಯಿಂದ ಅನೇಕ ಸಂಖ್ಯೆಯಲ್ಲಿ ಕಲಾಪ್ರಿಯರು, ಯಾತ್ರಿಕರು ಭೇಟಿ ನೀಡುತ್ತಿರುತ್ತಾರೆ. ಆದರೆ ಈ ಬಾರಿ ಕೊರೊನಾ ಸಂಕಷ್ಟದಿಂದ ಬಸದಿಗೆ ಭೇಟಿ ನೀಡುವ ಯಾತ್ರಿಕರ ಸಂಖ್ಯೆ ಕಡಿಮೆಯಾಗಿದೆ. ಇದೀಗ ಈ ಪರಿಸ್ಥಿತಿಯಲ್ಲಿ ಬಸದಿಯಲ್ಲಿ ನಿತ್ಯ ತ್ರಿಕಾಲ ಪೂಜೆಯ ವ್ಯವಸ್ಥೆ ಮಾಡಲಾಗಿದ್ದು, ಆ ಸಮಯದಲ್ಲಿ ಮಾತ್ರ ಬಸದಿಯನ್ನು ತೆರೆಯಲಾಗುತ್ತಿದೆ. ಕೊರೊನಾದ ಆತಂಕ ಕಡಿಮೆಯಾದ ಬಳಿಕ ಸಾರ್ವಜನಿಕರಿಗೆ ದರ್ಶನಕ್ಕೆ ಅವಕಾಶವನ್ನು ಕಲ್ಪಿಸಲಾಗುತ್ತದೆ ಎಂದು ಸ್ವಾಮೀಜಿಯವರು ತಿಳಿಸಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…