ಮೂಡುಬಿದರೆ: ವಿಶ್ವ ಪರಂಪರೆಯ ಪವಿತ್ರ ತಾಣಗಳಲ್ಲಿ ಒಂದಾಗಿರುವ ಮೂಡುಬಿದಿರೆಯ ಸಾವಿರ ಕಂಬದ ಬಸದಿ ತ್ರಿಭುವನ ತಿಲಕ ಚೂಡಾಮಣಿ ಎಂದೇ ಪ್ರಸಿದ್ದವಾದ ಜೈನ ಬಸದಿಯು ದೇಶದ ಪ್ರಮುಖ ಜೈನ ಬಸದಿಗಳ ವಾಸ್ತುಶಿಲ್ಪದ ಅಚ್ಚರಿಗಳ ಪೈಕಿ ಇದೀಗ ಮೂರನೇ ಸ್ಥಾನವನ್ನು ಪಡೆದಿದೆ ಎಂದು ಶ್ರೀ ಜೈನ ಮಠಾದೀಶ ಶ್ರೀ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯ ಸ್ವಾಮೀಜಿ ತಿಳಿಸಿದ್ದಾರೆ.
ಈ ಬಗ್ಗೆ ಮಾತನಾಡಿದ ಅವರು, ಅತ್ಯಂತ ಸೂಕ್ಷ್ಮ ಕೆತ್ತನೆಯ ತೀರ್ಥಂಕರ ಜಿನ ಬಿಂಬಗಳು, ಮತ್ತು ಸರ್ವ ಧರ್ಮ ಸಮನ್ವಯದ ಅನೇಕ ಕಲ್ಲಿನ ಕೆತ್ತನೆಗಳು, ಬೆಡಗಿನ ಭಿತ್ತಿಚಿತ್ರಗಳುಳ್ಳ ವಾಸ್ತುವೈಭವದ ಬಸದಿಗಳ ಪಟ್ಟಿಯಲ್ಲಿ ಸಾವಿರ ಕಂಬದ ಬಸದಿಯು ರಾಜಸ್ಥಾನದ ರಣಾಕ್ ಪುರ ಬಸದಿ, ದಿಲ್ ವಾರಾ ದೇಗುಲದ ಅನಂತರದ ಸ್ಥಾನದಲ್ಲಿ ಗುರುತಿಸಲ್ಪಟ್ಟಿರುವುದು ದಿಲ್ಲಿಯ ಜೈನ ಸನ್ಸ್ ಮೂಲಕ ಖಚಿತವಾಗಿದೆ ಎಂದು ತಿಳಿಸಿದ್ದಾರೆ.
ಇನ್ನು ದೇಶದ 13 ಇತರ ಬಸದಿಗಳಲ್ಲಿ 4ನೇಯ ಸ್ಥಾನವನ್ನು ಕಾರ್ಕಳದ ಚತುರ್ಮುಖ ಬಸದಿಗಳಿಸಿದೆ ಎಂದರು.
ಸಾವಿರ ಕಂಬದ ಬಸದಿಗೆ ಪ್ರತಿ ವರ್ಷ ವಿಶ್ವದೆಲ್ಲೆಡೆಯಿಂದ ಅನೇಕ ಸಂಖ್ಯೆಯಲ್ಲಿ ಕಲಾಪ್ರಿಯರು, ಯಾತ್ರಿಕರು ಭೇಟಿ ನೀಡುತ್ತಿರುತ್ತಾರೆ. ಆದರೆ ಈ ಬಾರಿ ಕೊರೊನಾ ಸಂಕಷ್ಟದಿಂದ ಬಸದಿಗೆ ಭೇಟಿ ನೀಡುವ ಯಾತ್ರಿಕರ ಸಂಖ್ಯೆ ಕಡಿಮೆಯಾಗಿದೆ. ಇದೀಗ ಈ ಪರಿಸ್ಥಿತಿಯಲ್ಲಿ ಬಸದಿಯಲ್ಲಿ ನಿತ್ಯ ತ್ರಿಕಾಲ ಪೂಜೆಯ ವ್ಯವಸ್ಥೆ ಮಾಡಲಾಗಿದ್ದು, ಆ ಸಮಯದಲ್ಲಿ ಮಾತ್ರ ಬಸದಿಯನ್ನು ತೆರೆಯಲಾಗುತ್ತಿದೆ. ಕೊರೊನಾದ ಆತಂಕ ಕಡಿಮೆಯಾದ ಬಳಿಕ ಸಾರ್ವಜನಿಕರಿಗೆ ದರ್ಶನಕ್ಕೆ ಅವಕಾಶವನ್ನು ಕಲ್ಪಿಸಲಾಗುತ್ತದೆ ಎಂದು ಸ್ವಾಮೀಜಿಯವರು ತಿಳಿಸಿದ್ದಾರೆ.
ನಂದಿನಿ ಮಿಲ್ಕ್ ಪಾರ್ಲರ್ನಲ್ಲಿ ಅಗ್ನಿ ಅವಘಡ : ಶಾಕ್ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…