Featured

ದೇಶದ ಬಗ್ಗೆ ಅಭಿಮಾನ, ಗೌರವ, ದೇಶಭಕ್ತಿ ಇರುವ ಮೋದಿಯಂತಹ ನಾಯಕರೇ ನಮ್ಮನ್ನು ಆಳಬೇಕಿದೆ : ಪರ್ಯಾಯ ಪಲಿಮಾರು ಶ್ರೀ – Vishwanews24

ಉಡುಪಿ: ದೇಶದ ಬಗ್ಗೆ ಅಭಿಮಾನ, ಗೌರವ, ದೇಶಭಕ್ತಿ ಇರುವವರೇ ಈ ದೇಶವನ್ನು ಆಳಬೇಕು. ಪ್ರಧಾನಿ ಮೋದಿ ಅವರಲ್ಲಿ ಇಂತಹ ಆದರ್ಶ ಗುಣವಿದೆ ಎಂದು ಪರ್ಯಾಯ ಪಲಿಮಾರು ಶ್ರೀವಿದ್ಯಾಧೀಶ ತೀರ್ಥ ಶ್ರೀಪಾದರು ತಿಳಿಸಿದ್ದಾರೆ.

ಅವರು ಚಕ್ರವರ್ತಿ ಸೂಲಿಬೆಲೆ ನೇತೃತ್ವದಲ್ಲಿ ಟೀಮ್ ಮೋದಿ  ಕರ್ನಾಟಕದ ವತಿಯಿಂದ ಮೋದಿ ಸಾಧನೆಗಳನ್ನು ಜನರಿಗೆ ಮುಟ್ಟಿಸುವ ಸಲುವಾಗಿ ಹಮ್ಮಿಕೊಂಡಿರುವ ಮೋದಿ ರಥಯಾತ್ರೆಗೆ ಶ್ರೀಕೃಷ್ಣ ಮಠದ ರಾಜಾಂಗಣದ ಮುಂಭಾಗ  ಪುಷ್ಪನಮನ ಸಲ್ಲಿಸಿ ಮಾತನಾಡಿದರು.

ಭಾರತಾಂಬೆಯನ್ನು ಪ್ರತಿಯೊಬ್ಬರೂ ಪೂಜಿಸಬೇಕಿದೆ. ಶ್ರೀರಾಮ ದೇವರು ಕೂಡಾ ಪೂಜಿಸಿದ್ದರು. ಪ್ರಧಾನಿ ಮೋದಿಗೆ ಸಂಸತ್ತಿನ ಮೇಲೆ ಅಪಾರ ಗೌರವವಿದ್ದು, ಉತ್ತಮ ಆಳ್ವಿಕೆ ನೀಡಿದ್ದಾರೆ. ಇಂತಹ ನಾಯಕರೇ ನಮ್ಮನ್ನು ಆಳಬೇಕಿದೆ ಎಂದರು.

ಮೋದಿಗೆ ಸೇನೆಯ ಬಗ್ಗೆ ಅಪಾರ ಗೌರವವಿದೆ. ತಮ್ಮ ಹುಟ್ಟುಹಬ್ಬವನ್ನು ಅನೇಕ ಬಾರಿ ಸೈನಿಕರೊಂದಿಗೆ ಆಚರಿಸಿಕೊಂಡು ಧೈರ್ಯ ತುಂಬುವ ಕೆಲಸ ಮಾಡಿದ್ದರು. ವಿರೋಧಿಗಳ ಹೇಯಕೃತ್ಯಕ್ಕೆ ತಕ್ಕ ಉತ್ತರವೂ ಕೊಟ್ಟಿದ್ದರು. ಇವರ ಆಳ್ವಿಕೆಯಲ್ಲಿ ಸೈನಿಕರ ಆತ್ಮ ಸ್ಥೈರ್ಯ ತುಂಬುವ ಕೆಲಸವೂ ಆಗಿದೆ ಎಂದರು.

ಈ ಸಂದರ್ಭ ಒಂದು ನಿಮಿಷದ ಮೌನ ಪ್ರಾರ್ಥಿಸಿ ಸಲ್ಲಿಸಿ ಹುತಾತ್ಮ ಯೋಧರಿಗೆ ಗೌರವ ಸಲ್ಲಿಸಲಾಯಿತು.

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮತ್ತೊಮ್ಮೆ ಮೋದಿ ಪ್ರಧಾನಿಯಾಗಬೇಕು. ಕನಿಷ್ಠ 300 ಸೀಟ್ ಗೆಲ್ಲಬೇಕೆಂಬ ಗುರಿಯೊಂದಿಗೆ ಈ ರಥಯಾತ್ರೆ ಹಮ್ಮಿಕೊಳ್ಳಲಾಗಿದೆ ..

ಟೀಮ್ ಮೋದಿ ಉಡುಪಿ ತಂಡದ ಶಶಿಧರ್ ತಲ್ಲೂರಂಗಡಿ

 

Vishwa News 24

Recent Posts

ಮೃತ ಮಹಿಳೆಯರ ಬೆತ್ತಲೆ ಫೋಟೋ ತೆಗೆದು ವಿಕೃತಿ : ವರದಿ ಕೇಳಿದ ರಾಜ್ಯ ಮಹಿಳಾ ಆಯೋಗ – vishwanews24

ಮೃತ ಮಹಿಳೆಯರ ಬೆತ್ತಲೆ ಫೋಟೋ ತೆಗೆದು ವಿಕೃತಿ : ವರದಿ ಕೇಳಿದ ರಾಜ್ಯ ಮಹಿಳಾ ಆಯೋಗ ಬೆಂಗಳೂರು: ಬೀದರ್‌ನ ಬ್ರಿಮ್ಸ್ ಆಸ್ಪತ್ರೆಯಲ್ಲಿ…

9 hours ago

ಉಡುಪಿ: ಕೇಂದ್ರ ಸರಕಾರದ ಜನವಿರೋಧಿ ನೀತಿ ವಿರುದ್ಧ ಜಿಲ್ಲಾ ಕಾಂಗ್ರೆಸ್ ನಿಂದ ಬೃಹತ್ ಪ್ರತಿಭಟನೆ – vishwanews24

ಉಡುಪಿ: ಕೇಂದ್ರ ಸರಕಾರದ ಜನವಿರೋಧಿ ನೀತಿ ವಿರುದ್ಧ ಜಿಲ್ಲಾ ಕಾಂಗ್ರೆಸ್ ನಿಂದ ಬೃಹತ್ ಪ್ರತಿಭಟನೆ ಉಡುಪಿ: ಕೇಂದ್ರ ಸರಕಾರದ ಜನವಿರೋಧಿ…

10 hours ago

ಮಂಗಳೂರು: ಗಾಯಗೊಂಡ ತಾಯಿ, ಮಗುವನ್ನು ಆಸ್ಪತ್ರೆಗೆ ಸಾಗಿಸಿದ ಬಸ್ ಸಿಬ್ಬಂದಿ; ಮಾನವೀಯತೆಗೆ ಶ್ಲಾಘನೆ – vishwanews24

ಮಂಗಳೂರು: ಚಲಿಸುತ್ತಿದ್ದ ಬಸ್ಸಿನಿಂದ ಬಿದ್ದ ತಾಯಿ-ಮಗುವಿನ ರಕ್ಷಣೆಗೆ ಧಾವಿಸಿದ ಸಿಟಿ ಬಸ್ ಸಿಬ್ಬಂದಿ.. ಪ್ರಯಾಣಿಕರನ್ನು ಬಸ್ಸಿನಿಂದ ಇಳಿಸಿ ಗಾಯಗೊಂಡ ತಾಯಿ,…

11 hours ago

ಮಂಗಳೂರು – ಸೂರತ್ ವಿಶೇಷ ರೈಲು ಇನ್ನು ಮುಂದೆ ವಾರಕ್ಕೆ ಎರಡು ದಿನ ನಿರಂತರ ಸಂಚಾರ – vishwanews24

ಮಂಗಳೂರು- ಸೂರತ್ ವಿಶೇಷ ರೈಲು ಇನ್ನು ಮುಂದೆ ವಾರಕ್ಕೆ ಎರಡು ದಿನ ನಿರಂತರ ಸಂಚಾರ ಉಡುಪಿ: ಮಂಗಳೂರು- ಸೂರತ್ ನಡುವೆ…

11 hours ago

ಕೊಂಕಣ ರೈಲ್ವೇ: ಟಿಕೆಟ್ ತಪಾಸಣೆ ಕಾರ್ಯಾಚರಣೆ; 2025-26ರಲ್ಲಿ 27.68 ಕೋ.ರೂ. ದಂಡ ವಸೂಲಿ – vishwanews24

ಕೊಂಕಣ ರೈಲ್ವೇ: ಟಿಕೆಟ್ ತಪಾಸಣೆ ಕಾರ್ಯಾಚರಣೆ; 2025-26ರಲ್ಲಿ 27.68 ಕೋ.ರೂ. ದಂಡ ವಸೂಲಿ ಉಡುಪಿ: ಟಿಕೆಟ್ ಇಲ್ಲದೆ ಹಾಗೂ ಅನಧಿಕೃತವಾಗಿ…

12 hours ago

ಯುವಕ ನಾಪತ್ತೆ : ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು – vishwanews24

ಯುವಕ ನಾಪತ್ತೆ; ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಂಗಳೂರು: 23 ವರ್ಷದ ಯುವಕನೊಬ್ಬ ನಾಪತ್ತೆಯಾಗಿರುವ ಕುರಿತು ಕೊಣಾಜೆ ಪೊಲೀಸ್…

12 hours ago