ಉಡುಪಿ: ದೇಶದ ಬಗ್ಗೆ ಅಭಿಮಾನ, ಗೌರವ, ದೇಶಭಕ್ತಿ ಇರುವವರೇ ಈ ದೇಶವನ್ನು ಆಳಬೇಕು. ಪ್ರಧಾನಿ ಮೋದಿ ಅವರಲ್ಲಿ ಇಂತಹ ಆದರ್ಶ ಗುಣವಿದೆ ಎಂದು ಪರ್ಯಾಯ ಪಲಿಮಾರು ಶ್ರೀವಿದ್ಯಾಧೀಶ ತೀರ್ಥ ಶ್ರೀಪಾದರು ತಿಳಿಸಿದ್ದಾರೆ.
ಅವರು ಚಕ್ರವರ್ತಿ ಸೂಲಿಬೆಲೆ ನೇತೃತ್ವದಲ್ಲಿ ಟೀಮ್ ಮೋದಿ ಕರ್ನಾಟಕದ ವತಿಯಿಂದ ಮೋದಿ ಸಾಧನೆಗಳನ್ನು ಜನರಿಗೆ ಮುಟ್ಟಿಸುವ ಸಲುವಾಗಿ ಹಮ್ಮಿಕೊಂಡಿರುವ ಮೋದಿ ರಥಯಾತ್ರೆಗೆ ಶ್ರೀಕೃಷ್ಣ ಮಠದ ರಾಜಾಂಗಣದ ಮುಂಭಾಗ ಪುಷ್ಪನಮನ ಸಲ್ಲಿಸಿ ಮಾತನಾಡಿದರು.
ಭಾರತಾಂಬೆಯನ್ನು ಪ್ರತಿಯೊಬ್ಬರೂ ಪೂಜಿಸಬೇಕಿದೆ. ಶ್ರೀರಾಮ ದೇವರು ಕೂಡಾ ಪೂಜಿಸಿದ್ದರು. ಪ್ರಧಾನಿ ಮೋದಿಗೆ ಸಂಸತ್ತಿನ ಮೇಲೆ ಅಪಾರ ಗೌರವವಿದ್ದು, ಉತ್ತಮ ಆಳ್ವಿಕೆ ನೀಡಿದ್ದಾರೆ. ಇಂತಹ ನಾಯಕರೇ ನಮ್ಮನ್ನು ಆಳಬೇಕಿದೆ ಎಂದರು.
ಮೋದಿಗೆ ಸೇನೆಯ ಬಗ್ಗೆ ಅಪಾರ ಗೌರವವಿದೆ. ತಮ್ಮ ಹುಟ್ಟುಹಬ್ಬವನ್ನು ಅನೇಕ ಬಾರಿ ಸೈನಿಕರೊಂದಿಗೆ ಆಚರಿಸಿಕೊಂಡು ಧೈರ್ಯ ತುಂಬುವ ಕೆಲಸ ಮಾಡಿದ್ದರು. ವಿರೋಧಿಗಳ ಹೇಯಕೃತ್ಯಕ್ಕೆ ತಕ್ಕ ಉತ್ತರವೂ ಕೊಟ್ಟಿದ್ದರು. ಇವರ ಆಳ್ವಿಕೆಯಲ್ಲಿ ಸೈನಿಕರ ಆತ್ಮ ಸ್ಥೈರ್ಯ ತುಂಬುವ ಕೆಲಸವೂ ಆಗಿದೆ ಎಂದರು.
ಈ ಸಂದರ್ಭ ಒಂದು ನಿಮಿಷದ ಮೌನ ಪ್ರಾರ್ಥಿಸಿ ಸಲ್ಲಿಸಿ ಹುತಾತ್ಮ ಯೋಧರಿಗೆ ಗೌರವ ಸಲ್ಲಿಸಲಾಯಿತು.
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮತ್ತೊಮ್ಮೆ ಮೋದಿ ಪ್ರಧಾನಿಯಾಗಬೇಕು. ಕನಿಷ್ಠ 300 ಸೀಟ್ ಗೆಲ್ಲಬೇಕೆಂಬ ಗುರಿಯೊಂದಿಗೆ ಈ ರಥಯಾತ್ರೆ ಹಮ್ಮಿಕೊಳ್ಳಲಾಗಿದೆ ..
ಟೀಮ್ ಮೋದಿ ಉಡುಪಿ ತಂಡದ ಶಶಿಧರ್ ತಲ್ಲೂರಂಗಡಿ
ಪಡುಬಿದ್ರಿ : ವ್ಯಕ್ತಿ ನಾಪತ್ತೆ ; ಪತ್ತೆಗೆ ಮನವಿ ಪಡುಬಿದ್ರಿ : ಕಂಚಿನಡ್ಕದ ನಿವಾಸಿ ರವೀಂದ್ರ (35) ಪಡುಬಿದ್ರಿ ಪೇಟೆಗೆ…
ಪಡುಬಿದ್ರಿ ಪೊಲೀಸರ ವಿಶೇಷ ಕಾರ್ಯಾಚರಣೆ :ರಸ್ತೆ ಅಪಘಾತ ಪ್ರಕರಣದಲ್ಲಿ 23 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಲಾರಿ ಚಾಲಕ ಅರೆಸ್ಟ್ ಉಡುಪಿ: 2002ರಲ್ಲಿ…
ಬೆಂಗಳೂರು : ಸ್ವಾಮೀಜಿ ವೇಷದಲ್ಲಿ ಬಂದು ಕೈಚಳಕ; ಮನೆಯಲ್ಲಿ ದೋಷ, ಸಾವಿನ ಕಂಟಕ ಎಂದು ಹೆದರಿಸಿ ಚಿನ್ನಾಭರಣ ದೋಚಿ ಪರಾರಿ…
ಬೆಳ್ತಂಗಡಿ: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ ; ಆರೋಪಿ ಅರೆಸ್ಟ್ ಬೆಳ್ತಂಗಡಿ : ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ ಮಾಡಿ ಬಾಲಕಿ…
ಮಂತ್ರಾಲಯ ಬಳಿ ಅಪಘಾತ: ಮಂಗಳೂರಿನ ಹಾಪ್ಕಾಮ್ಸ್ ನ ಪ್ರಧಾನ ವ್ಯವಸ್ಥಾಪಕ ರವಿ ಶೆಟ್ಟಿ ನಿಧನ ಕರ್ನೂಲು: ಕರ್ನೂಲು ಜಿಲ್ಲೆಯ ಮಂತ್ರಾಲಯದ…
ಉಡುಪಿ ಬಡಗುಬೆಟ್ಟು ಕಂಬಳಕ್ಕೆ ತಡೆ: ಆದೇಶ ತಕ್ಷಣ ಹಿಂಪಡೆಯಲು ಶಾಸಕ ಗುರ್ಮೆ ಆಗ್ರಹ ಉಡುಪಿ: ಉಡುಪಿ ಬಡಗುಬೆಟ್ಟು ಕೋಟಿ–ಚೆನ್ನಯ ಕಂಬಳಕ್ಕೆ…