ನವದೆಹಲಿ : ಕಾಂಗ್ರೆಸ್ನ ರಾಜ್ಯಸಭಾ ಸದಸ್ಯತ್ವಕ್ಕೆ ಒಂದು ವಾರದ ಹಿಂದೆ ರಾಜೀನಾಮೆ ನೀಡಿದ್ದ ಕೆ.ಸಿ. ರಾಮಮೂರ್ತಿ ಇಂದು ಅಧಿಕೃತವಾಗಿ ಬಿಜೆಪಿ ಪಕ್ಷಕ್ಕೆ ಸೇರಿದರು. ಮಾಜಿ ಪೊಲೀಸ್ ಅಧಿಕಾರಿಯೂ ಆಗಿರುವ ರಾಮಮೂರ್ತಿ ಯವರು ಇಲ್ಲಿಯ ಬಿಜೆಪಿ ಮುಖ್ಯ ಕಚೇರಿಯಲ್ಲಿ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಸಮ್ಮುಖದಲ್ಲಿ ಅಧಿಕೃತವಾಗಿ ಬಿಜೆಪಿ ಸೇರ್ಪಡೆಗೊಂಡರು.
ಬಿಜೆಪಿ ಸೇರಿದ ಕೆ ಸಿ ರಾಮಮೂರ್ತಿ ಯವರು ಬಿಜೆಪಿ ಪ್ರಾಥಮಿಕ ಸದಸ್ಯತ್ವವನ್ನು ಪಡೆದುಕೊಂಡರು. ಎನ್ನಲಾಗಿದೆ. ಬಿಜೆಪಿ ಸೇರ್ಪಡೆ ಕುರಿತು ಆ ಪಕ್ಷದ ರಾಷ್ಟ್ರೀಯ ನಾಯಕರೊಂದಿಗೆ ಹಲವು ದಿನಗಳ ಹಿಂದೆ ಕೆ ಸಿ ರಾಮೂರ್ತಿ ಯವರು ಮಾತುಕತೆ ನಡೆಸಿದ್ದರು. ಇಂದು ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಉಪಸ್ಥಿತರಿದ್ದರು.
ಸೇರ್ಪಡೆ ಬಳಿಕ ನವದೆಹಲಿಯಲ್ಲಿ ಪ್ರತಿಕ್ರಿಯೆ ನೀಡಿದ್ದ ಕೆ.ಸಿ.ರಾಮಮೂರ್ತಿ, ಅತ್ಯಂತ ಸಂತೋಷದಿಂದ ಬಿಜೆಪಿ ಸೇರುತ್ತಿದ್ದೇನೆ ಎರಡೂವರೆ ವರ್ಷದಿಂದ ಕೈಲಾದಷ್ಟು ಕೆಲಸ ಮಾಡಿದ್ದೇನೆ. ಆದರೂ ಬಹಳ ಬಾರಿ ಆತ್ಮವಂಚನೆ ಮಾಡಿಕೊಂಡಿದ್ದೆ. ಈಗ ದೇಶದ ಬೆಳವಣಿಗೆ ದೃಷ್ಟಿಯಿಂದ ಬಿಜೆಪಿ ಸೇರುತ್ತಿದ್ದೇನೆ. ಮೊದಲು ದೇಶದಲ್ಲಿ ಈ ರೀತಿಯ ನಾಯಕ ಇರಲಿಲ್ಲ. ಈಗ ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವ ಮೆಚ್ಚಿ ಬಿಜೆಪಿ ಸೇರಿದ್ದೇನೆ. ಪಕ್ಷ ವಹಿಸುವ ಕೆಲಸ ಮಾಡಲು ಸಿದ್ದನಿದ್ದೇನೆ ಎಂದು ಹೇಳಿದರು.
ಉಡುಪಿ : ನೇರ ಸಂದರ್ಶನ ಉಡುಪಿ : ನಗರದ ಮಣಿಪಾಲದ ಮನೋಹರ್ ಭವನ್ ಹೋಟೆಲ್ ಮುಂಭಾಗದ ಮಣಿಪಾಲ್ ಪೇಮೆಂಟ್ ಐಡೆಂಟಿಟಿ…
ಚಾ.ನಗರ: ಗ್ರೈಂಡರ್ನಿಂದ ವಿದ್ಯುತ್ ಶಾಕ್ – ನಾಲ್ಕು ವರ್ಷದ ಬಾಲಕಿ ದುರ್ಮರಣ ಚಾಮರಾಜನಗರ: ಗ್ರೈಂಡರ್ನಿಂದ ವಿದ್ಯುತ್ ಶಾಕ್ ಹೊಡೆದು ನಾಲ್ಕು…
ಉಡುಪಿ : ಮತದಾರ ಪಟ್ಟಿಯ ವಿಶೇಷ ಪರಿಷ್ಕರಣೆ: ಜೂ. 23ರಿಂದ ಜಿಲ್ಲೆಯ ಮನೆಮನೆಗೆ ತೆರಳಿ ಜನಜಾಗೃತಿ: ಕೆ.ಜಯಪ್ರಕಾಶ್ ಹೆಗ್ಡೆ ಉಡುಪಿ:…
ಆರ್ಎಸ್ಎಸ್ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…
ಬೆಳ್ತಂಗಡಿ: ಎಸ್ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…
ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…