Featured

ದೇಶದ ಭದ್ರತೆ ಮತ್ತು ಸೈನಿಕರ ಗೌರವ ಕಾಪಾಡುವುದು ಹೇಗೆಂದು ಕಾಂಗ್ರೆಸ್ ಪಕ್ಷಕ್ಕೆ ಗೊತ್ತಿದೆ : ರಾಜೀವ್ ಶುಕ್ಲಾ -Vishwanews24

ನವದೆಹಲಿ, : ಈ ಹಿಂದೆ ದೇಶದಲ್ಲಿ ಆಡಳಿತ ನಡೆಸುತ್ತಿದ್ದ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರದ ಅವಧಿಯಲ್ಲಿ ಉಗ್ರರ ವಿರುದ್ಧ ಒಟ್ಟು 6 ಬಾರಿ ಸರ್ಜಿಕಲ್ ಸ್ಟ್ರೈಕ್ ನಡೆಸಲಾಗಿತ್ತು ಎಂದು ಕಾಂಗ್ರೆಸ್ ಹೇಳಿದೆ.

ಪತ್ರಿಕಾಗೋಷ್ಠಿಯಲ್ಲಿ ಯುಪಿಎ ಸರ್ಕಾರ ನಡೆಸಿದ ಸರ್ಜಿಕಲ್ ದಾಳಿಯ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್, ಯುಪಿಎ ಅವಧಿಯಲ್ಲಿ ಆರು ಸರ್ಜಿಕಲ್ ದಾಳಿ ನಡೆದಿದೆ. ಅಲ್ಲದೆ ಅಟಲ್ ಬಿಹಾರಿ ವಾಜಪೇಯಿ ಅವರ ಆಡಳಿತಾವಧಿಯಲ್ಲಿ ಎರಡು ಸರ್ಜಿಕಲ್ ಸ್ಟ್ರೈಕ್‌ಗಳನ್ನು ನಡೆಸಲಾಗಿತ್ತು ಎಂದು ಕಾಂಗ್ರೆಸ್ ವಕ್ತಾರ ರಾಜೀವ್ ಶುಕ್ಲಾ ಅವರು ತಿಳಿಸಿದ್ದಾರೆ.

ಯುಪಿಎ ಸರ್ಕಾರ ನಡೆಸಿದ ಸರ್ಜಿಕಲ್ ದಾಳಿಯ ಪಟ್ಟಿ ಬಿಡುಗಡೆ ಮಾಡಿದ ಅವರು, 2008ರ ಜೂನ್ 19 ರಂದು ಭತ್ತಲ್ ಸೆಕ್ಟರ್​ನಲ್ಲಿ ಸರ್ಜಿಕಲ್ ಸ್ಟ್ರೈಕ್, 2011ರ ಆಗಸ್ಟ್ 30, ಸೆಪ್ಟಂಬರ್ 1 ರಂದು ಶಾರ್ದಾ ಸೆಕ್ಟರ್​ ಮೇಲೆ ದಾಳಿ, 2013ರ ಜ.6 ರಂದು ಸಾವನ್ ಪಾತ್ರಾ ಚೆಕ್​ಪೋಸ್ಟ್​ನಲ್ಲಿ ಸರ್ಜಿಕಲ್ ಸ್ಟ್ರೈಕ್, 2013ರ ಜುಲೈ 27-28 ರಂದು ನಜಾಪಿರ್ ಸೆಕ್ಟರ್​ನಲ್ಲಿ ಸರ್ಜಿಕಲ್ ಸ್ಟ್ರೈಕ್. 2013ರ ಆಗಸ್ಟ್ 6ರಂದು ನೀಲಂ ಕಣಿವೆಯಲ್ಲಿ ಸರ್ಜಿಕಲ್ ಸ್ಟ್ರೈಕ್, 2014ರ ಜನವರಿ 14 ರಂದು UPA ಅವಧಿಯ 6ನೇ ಸರ್ಜಿಕಲ್ ಸ್ಟ್ರೈಕ್ ನಡೆಸಿದೆ ಎಂದು ತಿಳಿಸಿದ್ದಾರೆ.

ಕಾಂಗ್ರೆಸ್, ಯುಪಿಎ ಅವಧಿಯಲ್ಲಿ ಆರು ಸರ್ಜಿಕಲ್ ದಾಳಿ ನಡೆದಿದೆ. ಅಲ್ಲದೆ ಅಟಲ್ ಬಿಹಾರಿ ವಾಜಪೇಯಿ ಅವರ ಆಡಳಿತಾವಧಿಯಲ್ಲಿ ಎರಡು ಸರ್ಜಿಕಲ್ ಸ್ಟ್ರೈಕ್‌ಗಳನ್ನು ನಡೆಸಲಾಗಿತ್ತು ಎಂದು ಹೇಳಿದ್ದಾರೆ.

ಸರ್ಜಿಕಲ್ ದಾಳಿಗಳ ಕುರಿತು ಮಾಹಿತಿ ನೀಡಿದ ರಾಜೀವ್ ಶುಕ್ಲಾ ಅವರು, ದೇಶದ ಭದ್ರತೆ ಮತ್ತು ಸೈನಿಕರ ಗೌರವ ಕಾಪಾಡುವುದು ಹೇಗೆಂದು ಕಾಂಗ್ರೆಸ್ ಗೆ ಗೊತ್ತಿದೆ ಎಂದು ಬಿಜೆಪಿಗೆ ತಿರುಗೇಟು ನೀಡಿದ್ದಾರೆ.

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

13 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

13 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

13 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

13 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

14 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

14 hours ago