ಬೆಂಗಳೂರು: ದೇಶದ ಮೊದಲ ಸೈಬರ್ ಕಮಾಂಡ್ ಸೆಂಟರ್ ತನಿಖಾ ಘಟಕಕ್ಕೆ ಕರ್ನಾಟಕ ಸರ್ಕಾರ ಚಾಲನೆ ನೀಡಿದೆ. ದೇಶದಲ್ಲಿಯೇ ಮೊತ್ತ ಮೊದಲ ಸೈಬರ್ ಕಮಾಂಡ್ ಸೆಂಟರ್ ಹೊಂದಿರುವ ರಾಜ್ಯವೆಂಬ ಹೆಗ್ಗಳಿಕೆ ಕರ್ನಾಟಕದ್ದಾಗಿದೆ.
ರಾಜ್ಯದಲ್ಲಿ ಹೆಚ್ಚುತ್ತಿರುವ ಸೈಬರ್ ಅಪರಾಧ ಕೃತ್ಯಗಳ ವಿರುದ್ಧ ಈ ತನಿಖಾ ಘಟಕ ಕಾರ್ಯಾಚರಣೆ ನಡೆಸಲಿದೆ. ಘಟಕದ ಡಿಐಜಿಯಾಗಿ ಭೂಷಣ್ ಬೊರಸೆ ಅವರನ್ನು ನೇಮಕ ಮಾಡಲಾಗಿದೆ. ಐಜಿಪಿ, ಎಸ್ಪಿ ಸೇರಿದಂತೆ ಇತರ ಸಿಬ್ಬಂದಿಯನ್ನು ಹಂತ ಹಂತವಾಗಿ ನೇಮಕ ಮಾಡಲು ಸರ್ಕಾರ ಉದ್ದೇಶಿಸಿದೆ.
ಸೈಬರ್ ಕಮಾಂಡ್ ಹೊಣೆಗಾರಿಕೆಯನ್ನು ಪೊಲೀಸ್ ಮಹಾನಿರ್ದೇಶಕರ ಶ್ರೇಣಿಯ ಐಪಿಎಸ್ ಅಧಿಕಾರಿಗೆ ವಹಿಸಲಾಗುತ್ತದೆ. ಪ್ರಣಾವ್ ಮೊಹಾಂತಿ ಅವರಿಗೆ ಹೊಣೆಗಾರಿಕೆಯನ್ನು ನೀಡಲಾಗುತ್ತಿದ್ದು, ಈ ವಿಚಾರವಾಗಿ ಅಧಿಕೃತ ಆದೇಶ ಇನ್ನಷ್ಟೇ ಹೊರಬೀಳಬೇಕಿದೆ.
ಸೈಬರ್ ಭದ್ರತೆ, ಸೈಬರ್ ಅಪರಾಧ, ರಾನ್ಸಮ್ವೇರ್, ಹಿಂಬಾಲಿಸುವುದು, ಮಹಿಳೆಯರು ಮತ್ತು ಮಕ್ಕಳ ಮೇಲಿನ ಆನ್ಲೈನ್ ಅಪರಾಧಗಳು, ಸೆಕ್ಸ್ಟಾರ್ಷನ್, ಡಿಜಿಟಲ್ ಅರೆಸ್ಟ್ ಸೇರಿದಂತೆ ಸೈಬರ್ ವಂಚನೆಗಳು, ಡೀಪ್ಫೇಕ್ಗಳು, ಐಡೆಂಟಿಟಿ ತೆಫ್ಟ್, ಹ್ಯಾಕಿಂಗ್, ಡೇಟಾ ಉಲ್ಲಂಘನೆ, ತಪ್ಪು ಮಾಹಿತಿ ಇತ್ಯಾದಿಗಳ ವಿರುದ್ಧ ಸೈಬರ್ ಕಮಾಂಡ್ ಸೆಂಟರ್ ಕಾರ್ಯಾಚರಣೆ ನಡೆಸಲಿದೆ. ಈ ಮೊದಲು ಸೈಬರ್ ಕ್ರೈಂ ಮತ್ತು ನಾಕ್ರೊಟಿಕ್ಸ್ ವಿಭಾಗವು ಸೈಬರ್ ಅಪರಾಧ ಪ್ರಕರಣಗಳ ತನಿಖೆ ನಡೆಸುತ್ತಿತ್ತು.
ಮೈಸೂರು: ಕಾಲೇಜು ಕ್ಯಾಂಪಸ್ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…