ರಾಯಚೂರು: ದೇಶದ ರಕ್ಷಣಾ ನಿಧಿಗೆ ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಿಂದ 25 ಲಕ್ಷ ರೂ. ದೇಣಿಗೆಯನ್ನು ಘೋಷಿಸಲಾಗಿದೆ.
ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥ ಶ್ರೀಗಳು ದೇಣಿಗೆಯನ್ನು ಘೋಷಿಸಿದ್ದಾರೆ. ತಮ್ಮ 13ನೇ ಪಟ್ಟಾಭಿಷೇಕ ಮಹೋತ್ಸವದ ವೇಳೆ ಶ್ರೀಗಳು ಈ ಘೋಷಣೆ ಮಾಡಿದ್ದಾರೆ.
ಭಕ್ತರಿಂದ ತುಲಾಭಾರ ಕಾರ್ಯಕ್ರಮ ನಡೆದ ಬಳಿಕ ಶ್ರೀಗಳು ಮಾತನಾಡಿದರು. ಈ ವೇಳೆ, ದೇಶದಲ್ಲಿ ಅಶಾಂತಿ ಉಂಟಾಗಿದೆ. ತಾತ್ಕಾಲಿಕವಾಗಿ ಯುದ್ಧ ವಿರಾಮ ದೊರಕಿದೆ. ರಾತ್ರಿ ಹಗಲು, ಮಳೆ, ಬಿಸಿಲು ಎನ್ನದೇ ಪ್ರಾಣವನ್ನೂ ಲೆಕ್ಕಿಸದೇ ದೇಶದ ರಕ್ಷಣೆಗಾಗಿ ನಮ್ಮೆಲ್ಲ ಯೋಧರು ಶ್ರಮಿಸುತ್ತಿದ್ದಾರೆ. ಜಾಗೃತರಾಗಿ, ವಿವೇಚನಾ ಪೂರ್ವಕವಾಗಿ ದೇಶದ ಸಮಗ್ರತೆಗೆ, ರಕ್ಷಣೆ, ಭದ್ರತೆಗೆ ಕೇಂದ್ರ ಸರ್ಕಾರ ಶ್ರಮಿಸುತ್ತಿದೆ. ದೇಶದಲ್ಲಿ ಅಶಾಂತಿ ಪರಸ್ಥಿತಿ ಹಿನ್ನೆಲೆ ಸರಳವಾಗಿ ಕಾರ್ಯಕ್ರಮ ಆಚರಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಗಡಿಯಲ್ಲಿ ಉದ್ವಿಗ್ನ ಪರಿಸ್ಥಿತಿ ಹಿನ್ನೆಲೆ ದೇಶದ ಸೈನಿಕರ ಹಾಗೂ ನಾಗರಿಕರ ರಕ್ಷಣೆ, ಸುರಕ್ಷತೆಗಾಗಿ ಮಂತ್ರಾಲಯ ಗುರುರಾಘವೇಂದ್ರ ಸ್ವಾಮಿ ಮಠದಲ್ಲಿ ವಿವಿಧ ವಿಶೇಷ ಪೂಜೆ, ಹೋಮ-ಹವನವನ್ನು ಸಹ ಈ ವೇಳೆ ನೆರವೇರಿಸಲಾಯಿತು.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…