ರಾಯಚೂರು: ದೇಶದ ರಕ್ಷಣಾ ನಿಧಿಗೆ ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಿಂದ 25 ಲಕ್ಷ ರೂ. ದೇಣಿಗೆಯನ್ನು ಘೋಷಿಸಲಾಗಿದೆ.
ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥ ಶ್ರೀಗಳು ದೇಣಿಗೆಯನ್ನು ಘೋಷಿಸಿದ್ದಾರೆ. ತಮ್ಮ 13ನೇ ಪಟ್ಟಾಭಿಷೇಕ ಮಹೋತ್ಸವದ ವೇಳೆ ಶ್ರೀಗಳು ಈ ಘೋಷಣೆ ಮಾಡಿದ್ದಾರೆ.
ಭಕ್ತರಿಂದ ತುಲಾಭಾರ ಕಾರ್ಯಕ್ರಮ ನಡೆದ ಬಳಿಕ ಶ್ರೀಗಳು ಮಾತನಾಡಿದರು. ಈ ವೇಳೆ, ದೇಶದಲ್ಲಿ ಅಶಾಂತಿ ಉಂಟಾಗಿದೆ. ತಾತ್ಕಾಲಿಕವಾಗಿ ಯುದ್ಧ ವಿರಾಮ ದೊರಕಿದೆ. ರಾತ್ರಿ ಹಗಲು, ಮಳೆ, ಬಿಸಿಲು ಎನ್ನದೇ ಪ್ರಾಣವನ್ನೂ ಲೆಕ್ಕಿಸದೇ ದೇಶದ ರಕ್ಷಣೆಗಾಗಿ ನಮ್ಮೆಲ್ಲ ಯೋಧರು ಶ್ರಮಿಸುತ್ತಿದ್ದಾರೆ. ಜಾಗೃತರಾಗಿ, ವಿವೇಚನಾ ಪೂರ್ವಕವಾಗಿ ದೇಶದ ಸಮಗ್ರತೆಗೆ, ರಕ್ಷಣೆ, ಭದ್ರತೆಗೆ ಕೇಂದ್ರ ಸರ್ಕಾರ ಶ್ರಮಿಸುತ್ತಿದೆ. ದೇಶದಲ್ಲಿ ಅಶಾಂತಿ ಪರಸ್ಥಿತಿ ಹಿನ್ನೆಲೆ ಸರಳವಾಗಿ ಕಾರ್ಯಕ್ರಮ ಆಚರಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಗಡಿಯಲ್ಲಿ ಉದ್ವಿಗ್ನ ಪರಿಸ್ಥಿತಿ ಹಿನ್ನೆಲೆ ದೇಶದ ಸೈನಿಕರ ಹಾಗೂ ನಾಗರಿಕರ ರಕ್ಷಣೆ, ಸುರಕ್ಷತೆಗಾಗಿ ಮಂತ್ರಾಲಯ ಗುರುರಾಘವೇಂದ್ರ ಸ್ವಾಮಿ ಮಠದಲ್ಲಿ ವಿವಿಧ ವಿಶೇಷ ಪೂಜೆ, ಹೋಮ-ಹವನವನ್ನು ಸಹ ಈ ವೇಳೆ ನೆರವೇರಿಸಲಾಯಿತು.
ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ ಕಡಬ: ಚಿನ್ನಾಭರಣದ ತೂಕವನ್ನು ಕೃತಕವಾಗಿ ಹೆಚ್ಚಿಸಿ…
ಮಹಾರಾಷ್ಟ್ರ : ಮಳೆ ಅಬ್ಬರ - ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ…
ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ ಶಿವಮೊಗ್ಗ: ನವಜಾತ ಹೆಣ್ಣು ಶಿಶುವೊಂದನ್ನು ಬಸ್ ನಿಲ್ದಾಣದಲ್ಲಿ ಅನಾಥವಾಗಿ…
ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ ಪಡುಬಿದ್ರಿ: ಉಡುಪಿ…
ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇರಾ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…