ರಾಯಚೂರು: ದೇಶದ ರಕ್ಷಣಾ ನಿಧಿಗೆ ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಿಂದ 25 ಲಕ್ಷ ರೂ. ದೇಣಿಗೆಯನ್ನು ಘೋಷಿಸಲಾಗಿದೆ.
ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥ ಶ್ರೀಗಳು ದೇಣಿಗೆಯನ್ನು ಘೋಷಿಸಿದ್ದಾರೆ. ತಮ್ಮ 13ನೇ ಪಟ್ಟಾಭಿಷೇಕ ಮಹೋತ್ಸವದ ವೇಳೆ ಶ್ರೀಗಳು ಈ ಘೋಷಣೆ ಮಾಡಿದ್ದಾರೆ.
ಭಕ್ತರಿಂದ ತುಲಾಭಾರ ಕಾರ್ಯಕ್ರಮ ನಡೆದ ಬಳಿಕ ಶ್ರೀಗಳು ಮಾತನಾಡಿದರು. ಈ ವೇಳೆ, ದೇಶದಲ್ಲಿ ಅಶಾಂತಿ ಉಂಟಾಗಿದೆ. ತಾತ್ಕಾಲಿಕವಾಗಿ ಯುದ್ಧ ವಿರಾಮ ದೊರಕಿದೆ. ರಾತ್ರಿ ಹಗಲು, ಮಳೆ, ಬಿಸಿಲು ಎನ್ನದೇ ಪ್ರಾಣವನ್ನೂ ಲೆಕ್ಕಿಸದೇ ದೇಶದ ರಕ್ಷಣೆಗಾಗಿ ನಮ್ಮೆಲ್ಲ ಯೋಧರು ಶ್ರಮಿಸುತ್ತಿದ್ದಾರೆ. ಜಾಗೃತರಾಗಿ, ವಿವೇಚನಾ ಪೂರ್ವಕವಾಗಿ ದೇಶದ ಸಮಗ್ರತೆಗೆ, ರಕ್ಷಣೆ, ಭದ್ರತೆಗೆ ಕೇಂದ್ರ ಸರ್ಕಾರ ಶ್ರಮಿಸುತ್ತಿದೆ. ದೇಶದಲ್ಲಿ ಅಶಾಂತಿ ಪರಸ್ಥಿತಿ ಹಿನ್ನೆಲೆ ಸರಳವಾಗಿ ಕಾರ್ಯಕ್ರಮ ಆಚರಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಗಡಿಯಲ್ಲಿ ಉದ್ವಿಗ್ನ ಪರಿಸ್ಥಿತಿ ಹಿನ್ನೆಲೆ ದೇಶದ ಸೈನಿಕರ ಹಾಗೂ ನಾಗರಿಕರ ರಕ್ಷಣೆ, ಸುರಕ್ಷತೆಗಾಗಿ ಮಂತ್ರಾಲಯ ಗುರುರಾಘವೇಂದ್ರ ಸ್ವಾಮಿ ಮಠದಲ್ಲಿ ವಿವಿಧ ವಿಶೇಷ ಪೂಜೆ, ಹೋಮ-ಹವನವನ್ನು ಸಹ ಈ ವೇಳೆ ನೆರವೇರಿಸಲಾಯಿತು.
ಮಲ್ಪೆ : ಸೈಂಟ್ಮೇರೀಸ್ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…
ಜೂನ್ 21ರಂದು ನೀಟ್ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್ 21 ರಂದು ನೀಟ್–ಯುಜಿ ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…