Featured

ದೇಶದ ರಕ್ಷಣೆಗಾಗಿ ಉಗ್ರಗಾಮಿಗಳ ಗುರುತು ಪತ್ತೆ ಮಾಡಲು ಬುರ್ಖಾ ನಿಷೇಧಿಸಿದ ಶ್ರೀಲಂಕಾ – Vishwanews24

ಕೊಲಂಬೋ,: ನಿರಂತರ ಬಾಂಬ್ ಸ್ಪೋಟದಿಂದ ತತ್ತರಿಸಿ ಹೋದ ಶ್ರೀಲಂಕಾ ಭದ್ರತಾ ದೃಷ್ಟಿಯಿಂದ ಹಲವು ಕಟ್ಟು ನಿಟ್ಟಿನ ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಇದೇ ಕಾರಣಕ್ಕಾಗಿ ಬುರ್ಖಾ ತೊಡುವುದನ್ನೂ ನಿಷೇಧಿಸಿದೆ. ಸೋಮವಾರದಿಂದಲೇ ಶ್ರೀಲಂಕಾದ ಅಧ್ಯಕ್ಷ ಮೈತ್ರಿಪಾಲ ಸಿರಿಸೇನಾ ಬುರ್ಖಾಕ್ಕೆ ನಿಷೇಧ ವಿಧಿಸಿ ಆದೇಶಿಸಿದ್ದಾರೆ.

ಬುರ್ಖಾ ತೊಡುವುದರಿಂದ ದೇಶದ ಭದ್ರತೆಗೆ ತೊಂದರೆಯುಂಟಾಗುತ್ತಿದೆ. ಮಾತ್ರವಲ್ಲದೆ ಮೂಲಭೂತವಾದದ ಸಂಕೇತವಾಗುತ್ತಿದ್ದು, ದೇಶದ ರಕ್ಷಣೆಗಾಗಿ ಉಗ್ರಗಾಮಿಗಳ ಗುರುತು ಪತ್ತೆ ಮಾಡಲು ಶ್ರೀಲಂಕಾ ಅಧ್ಯಕ್ಷರು ಖಡಕ್ ನಿರ್ಧಾರ ತಳೆದಿದ್ದಾರೆ.

ದಿ ನ್ಯಾಷನಲ್ ತವಹೀದ್​ ಜಮಾತ್ ಮತ್ತು ಜಮಾಥಿ ಮಿಲ್ಲಾಥು ಇಬ್ರಾಹಿಂ ಸಂಘಟನೆಗಳ ಮೇಲೆ ಶ್ರೀಲಂಕಾ ಸರ್ಕಾರ ನಿಷೇಧ ಹೇರಿತ್ತು. ಅದರ ಬೆನ್ನಲ್ಲೇ ಇಂದಿನಿಂದ ಬುರ್ಖಾ ಮೇಲೂ ನಿಷೇಧ ಹೇರಲಾಗಿದೆ. ಈ ಬಗ್ಗೆ ನಿನ್ನೆ ಶ್ರೀಲಂಕಾ ಸರ್ಕಾರ ಆದೇಶ ಹೊರಡಿಸಿದೆ. ಬುರ್ಖಾ ಜೊತೆಗೆ ಮುಖವನ್ನು ಮುಚ್ಚಿಕೊಳ್ಳುವಂತೆ ಬಟ್ಟೆ ಸುತ್ತಿಕೊಳ್ಳುವುದನ್ನು ಕೂಡ ನಿಷೇಧಿಸಿದೆ. ಭಯೋತ್ಪಾದಕ ಕೃತ್ಯಗಳ ನಿಯಂತ್ರಣಕ್ಕಾಗಿ ಈ ಕ್ರಮ ಕೈಗೊಳ್ಳಲಾಗಿದ್ದು, ಮುಖವನ್ನು ಮುಚ್ಚಿಕೊಂಡಿರುವವರನ್ನು ಅನುಮಾನಾಸ್ಪದ ವ್ಯಕ್ತಿಗಳೆಂದು ಪರಿಗಣಿಸಬೇಕಾಗುತ್ತದೆ. ಸಾರ್ವಜನಿಕ ಹಿತಾಸಕ್ತಿಗಾಗಿ ಈ ನಿಷೇಧದ ಆದೇಶ ಹೊರಡಿಸಲಾಗಿದೆ ಎಂದು ಸರ್ಕಾರ ತಿಳಿಸಿದೆ.

ಬುರ್ಖಾ ಧರಿಸಿದ ಮಹಿಳಾ ಬಾಂಬರ್ ಆತ್ಮಾಹುತಿ ದಾಳಿಯಲ್ಲಿ ಭಾಗಿಯಾಗಿರುವ ಬಗ್ಗೆ ಮಾಹಿತಿ ಹೊರಬೀಳುತ್ತಿದ್ದಂತೆ, ದ್ವೀಪ ರಾಷ್ಟ್ರದ ಕೆಲ ಸಂಸದರು ಬುರ್ಖಾ ನಿಷೇಧಗೊಳಿಸುವಂತೆ ಧ್ವನಿ ಎತ್ತಿದ್ದರು. ಯು ಎನ್ ಪಿ ಪಕ್ಷದ ನಾಯಕ ಅಶು ಮಾರಸಿಂಘೆ, ತಮ್ಮ ಫೇಸ್ ಬುಕ್ ಖಾತೆಯಲ್ಲಿ ಬರೆದುಕೊಂಡಿದ್ದು ’ಬುರ್ಖಾ ಧರಿಸಿದ ಮಹಿಳೆ ಬಾಂಬ್ ದಾಳಿಯಲ್ಲಿ ನೇರ ಭಾಗಿಯಾಗಿರುವುದು ಕಂಡುಬಂದಿದೆ. ಮಾತ್ರವಲ್ಲದೆ ಅನೇಕ ಉಗ್ರರು ಬುರ್ಖಾ ಧರಿಸಿ ಪರಾರಿಯಾಗುವಲ್ಲಿ ಸಫಲರಾಗಿದ್ದಾರೆ. ಬುರ್ಖಾ ಎನ್ನುವುದು ಮುಸ್ಲಿಂ ಮಹಿಳೆಯರ ಸಾಂಪ್ರದಾಯಿಕ ವಸ್ತ್ರ ಅಲ್ಲ, ದೇಶದ ಕೆಲ ಭಾಗದಲ್ಲಿ ಮುಸ್ಲಿಂ ಸಮುದಾಯದ ಮಹಿಳೆಯರು ಪ್ರವೇಶಿಸುವಾಗ ಬುರ್ಖಾ ಕಡ್ಡಾಯವಾಗಿ ತೆಗೆಯಬೇಕೆಂಬ ಸೂಚನೆ ನೀಡಲಾಗಿದೆ. ದೇಶದ ಭದ್ರತೆಯ ದೃಷ್ಟಿಯಿಂದ ಬುರ್ಖಾ ನಿಷೇಧ ಒಳಿತು ಎಂದು ಸೂಚಿಸಿದ್ದರು.

 

Vishwa News 24

Recent Posts

ಕುಂದಾಪುರ: ಕಾಲೇಜಿಗೆಂದು ತೆರಳಿದ್ದ ಯುವಕ ನಾಪತ್ತೆ – vishwanews24

ಕುಂದಾಪುರ: ಕಾಲೇಜಿಗೆ ಹೋಗಿ ಟಿಸಿ  ತರುತ್ತೇನೆ ಎಂದು ಮನೆಯಿಂದ ತೆರಳಿದ್ದ ಯುವಕ ನಾಪತ್ತೆ ಕುಂದಾಪುರ: ಕಾಲೇಜಿಗೆ ಹೋಗಿ ಟಿಸಿ  ತರುತ್ತೇನೆ ಎಂದು…

2 days ago

ಆ. 1 ರಂದು ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ – vishwanews24

ಆ. 1 ರಂದು ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ; ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ ಮೈಸೂರು:…

2 days ago

ಮಿಸ್ ಯುನಿವರ್ಸ್ ಇಂಡಿಯಾ 2026 ಸ್ಪರ್ಧೆಯ ಅಂತಿಮ ಸುತ್ತಿಗೆ ಉಡುಪಿ ಮೂಲದ ಸ್ಪೂರ್ತಿ ಶೆಟ್ಟಿ ಆಯ್ಕೆ – vishwanews24

ಮಿಸ್ ಯುನಿವರ್ಸ್ ಇಂಡಿಯಾ 2026 ಸ್ಪರ್ಧೆಯ ಅಂತಿಮ ಸುತ್ತಿಗೆ ಉಡುಪಿ ಮೂಲದ ಸ್ಪೂರ್ತಿ ಶೆಟ್ಟಿ ಆಯ್ಕೆ ಉಡುಪಿ ಮೂಲದ ಸ್ಪೂರ್ತಿ…

2 days ago

ಗೃಹಲಕ್ಷ್ಮಿ ಯೋಜನೆಯ 31ನೇ ಕಂತಿನ 2,400 ಕೋಟಿ ರೂ. ಹಣ ಬಿಡುಗಡೆ – vishwanews24

ಗೃಹಲಕ್ಷ್ಮಿ ಯೋಜನೆಯ 31ನೇ ಕಂತಿನ 2,400 ಕೋಟಿ ರೂ. ಹಣ ಬಿಡುಗಡೆ ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರಕಾರದ ಮಹತ್ವಾಕಾಂಕ್ಷೆ ಯೋಜನೆಗಳಲ್ಲಿ…

2 days ago

ಬಿಡದಿ ಟೌನ್ ಶಿಪ್ ನಿರ್ಮಾಣಕ್ಕೆ ಯಾವುದೇ ಕಾರಣಕ್ಕೂ ಬಿಡುವುದಿಲ್ಲ : ಶೋಭಾ ಕರಂದ್ಲಾಜೆ – vishwanews24

ಬಿಡದಿ ಟೌನ್‍ಶಿಪ್ ನಿರ್ಮಾಣಕ್ಕೆ ಯಾವುದೇ ಕಾರಣಕ್ಕೂ ಬಿಡುವುದಿಲ್ಲ : ಶೋಭಾ ಕರಂದ್ಲಾಜೆ ಬೆಂಗಳೂರು : ಬಿಡದಿ ಟೌನ್‍ಶಿಪ್ ನಿರ್ಮಾಣಕ್ಕೆ ಯಾವುದೇ…

2 days ago

ಮುಂಬೈ-ಮಂಗಳೂರು ಎಕ್ಸ್‌ಪ್ರೆಸ್‌ನಲ್ಲಿ ಚಾಕು ತೋರಿಸಿ ದರೋಡೆಗೆ ಯತ್ನ: ಪೊಲೀಸರಿಗೆ ಒಪ್ಪಿಸಿದ ಪ್ರಯಾಣಿಕರು – vishwanews24

ಮುಂಬೈ-ಮಂಗಳೂರು ಎಕ್ಸ್‌ಪ್ರೆಸ್‌ನಲ್ಲಿ ಚಾಕು ತೋರಿಸಿ ದರೋಡೆಗೆ ಯತ್ನ: ಪೊಲೀಸರಿಗೆ ಒಪ್ಪಿಸಿದ ಪ್ರಯಾಣಿಕರು ಮಂಗಳೂರು: ಪ್ರಯಾಣಿಕರನ್ನು ಚಾಕು ತೋರಿಸಿ ಬೆದರಿಸಿ ದರೋಡೆ…

2 days ago