ಕಾಪು : ಕಾಂಗ್ರೆಸ್ – ಜೆಡಿಎಸ್ ಜಂಟಿ ಪಕ್ಷಗಳ ಕಾರ್ಯಕರ್ತರ ಸಭೆಕಾಪು, ಮಾ. 29: ಉಡುಪಿ – ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ ದಲ್ಲಿ ಕಾಂಗ್ರೆಸ್ – ಜೆಡಿಎಸ್ ಮೈತ್ರಿ ಪಕ್ಷದ ಅಭ್ಯರ್ಥಿಯಾಗಿ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಸ್ಪರ್ಧಿಸುವ ಮೂಲಕ ರಾಷ್ಟ್ರ ರಾಜಕಾರಣದ ಮಹಾ ಘಟಬಂಧನ್ಗೆ ವಿಶೇಷ ಬಲ ತುಂಬಿದಂತಾಗಿದೆ. ದೇಶದ ಸಂವಿಧಾನ, ಜಾತ್ಯತೀತತೆಯ ರಕ್ಷಣೆಗಾಗಿ ಗೆಲುವಿಗೆ ಪ್ರಮೋದ್ ಅವರ ಗೆಲುವು ಅನಿವಾರ್ಯವಾಗಿದೆ ಎಂದು ಮಾಜಿ ಸಚಿವ ವಿನಯಕುಮಾರ್ ಸೊರಕೆ ಹೇಳಿದರು.
ಕಾಂಗ್ರೆಸ್ – ಜೆಡಿಎಸ್ ಮೈತ್ರಿ ಸರಕಾರದ ಅಭ್ಯರ್ಥಿ ಪ್ರಮೋದ್ ಮಧ್ವರಾಜ್ ಮಾತನಾಡಿ, ಕಾಪು ಕ್ಷೇತ್ರದಲ್ಲಿ ಪುರಸಭೆಯೊಂದನ್ನು ಹೊರತುಪಡಿಸಿದರೆ ಹೆಚ್ಚಿನ ಆಯಕಟ್ಟಿನ ಸ್ಥಾನಗಳಲ್ಲಿ ಬಿಜೆಪಿ ಜನಪ್ರತಿನಿಧಿಗಳೇ ಆಡಳಿತದಲ್ಲಿದ್ದಾರೆ. ಕಾರ್ಯಕರ್ತರ ಎಲ್ಲ ನೋವಿಗೂ ಪೂರಕವಾಗಿ ಸ್ಪಂದಿಸಿ, ಕಾರ್ಯಕರ್ತರ ಪರವಾಗಿ ಧ್ವನಿ ಎತ್ತುವ ಉದ್ದೇಶಕ್ಕಾಗಿ ಸ್ಪರ್ಧಿಸುತ್ತಿದ್ದೇನೆ.ಎಲ್ಲರೂ ಮುಕ್ತ ಮನಸ್ಸಿನಿಂದ ಬೆಂಬಲಿಸುವಂತೆ ವಿನಂತಿಸಿ ಕೊಂಡರು.
ಕೆ.ಪಿ.ಸಿ.ಸಿ. ಕಾರ್ಯದರ್ಶಿ ಗಳಾದ ಡಾ| ದೇವಿಪ್ರಸಾದ್ ಶೆಟ್ಟಿ, ರಾಜಶೇಖರ ಕೋಟ್ಯಾನ್, ಕೆಪಿಸಿಸಿ ಸಂಯೋಜಕ ನವೀನ್ಚಂದ್ರ ಜೆ. ಶೆಟ್ಟಿ, ಕಾಪು ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷ ನವೀನ್ಚಂದ್ರ ಸುವರ್ಣ, ಜೆಡಿಎಸ್ ಬ್ಲಾಕ್ ಅಧ್ಯಕ್ಷ ಸುಧಾಕರ ಹೆಜಮಾಡಿ, ಮೈತ್ರಿ ಪಕ್ಷದ ಮುಖಂಡರಾದ ಗೀತಾ ವಾಗ್ಲೆ, ಕಾಪು ದಿವಾಕರ ಶೆಟ್ಟಿ, ದಿಲ್ಲೇಶ್ ಶೆಟ್ಟಿ, ಶಾಲಿನಿ ಶೆಟ್ಟಿ ಕೆಂಚನೂರು, ಪ್ರಭಾವತಿ ಶೆಟ್ಟಿ ಕಟಪಾಡಿ, ಶಿವಾಜಿ ಸುವರ್ಣ ಬೆಳ್ಳೆ, ದಿನೇಶ್ ಪುತ್ರನ್, ಮನ್ಸೂರ್ ಇಬ್ರಾಹಿಂ, ಅಬ್ದುಲ್ ಅಜೀಜ್ ಮೊದಲಾದವರು ಉಪಸ್ಥಿತರಿದ್ದರು.
ಹೈದರಾಬಾದ್ : ಕಾರು ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ : ತೆಲುಗು ನಟ ಭರತ್ ಕಾಂತ್ ಸಾವು ಹೈದರಾಬಾದ್…
ನೀವು ಇತಿಹಾಸ ನಿರ್ಮಿಸಿದ್ದೀರಿ: ತಮಿಳುನಾಡು ನೂತನ ಸಿಎಂ ವಿಜಯ್'ಗೆ ಸಿದ್ದರಾಮಯ್ಯ ವಿಶೇಷ ಅಭಿನಂದನೆ ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮಿಳುನಾಡಿನ…
ಕಾರವಾರದ ಮೀನುಗಾರಿಕಾ ಬೋಟ್ ಗೋವಾ ಸಮುದ್ರ ಪ್ರದೇಶದಲ್ಲಿ ಮುಳುಗಡೆ : 22 ಮೀನುಗಾರರ ರಕ್ಷಣೆ ಕಾರವಾರ: ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆಗೆ…
ಯುವತಿ ವಿಚಾರಕ್ಕೆ ಕಿರುಕುಳ ಆರೋಪ : ಆಡಿಯೋ ರೆಕಾರ್ಡ್ ಮಾಡಿ ಯುವಕ ಆತ್ಮಹತ್ಯೆ ಹಾಸನ: ಯುವತಿ ವಿಚಾರಕ್ಕೆ ಕಿರುಕುಳ ನೀಡುತ್ತಿದ್ದಾರೆ…
ರಾಜಿ ಮಾಡಿಕೊಂಡ ಪ್ರಧಾನಿಯಿಂದ ದೇಶ ಮುನ್ನಡೆಸಲು ಸಾಧ್ಯವಿಲ್ಲ : ಮೋದಿ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ ನವದೆಹಲಿ: ರಾಜಿ ಮಾಡಿಕೊಂಡ…
ಬೆಳ್ತಂಗಡಿ: ಕ್ಯಾಂಟೀನ್ ಹೆಸರಲ್ಲಿ ಅಕ್ರಮ ವೇಶ್ಯಾವಟಿಕೆ ದಂಧೆ ; ಪೊಲೀಸರ ದಾಳಿ - ಮೂವರ ಬಂಧನ ಬೆಳ್ತಂಗಡಿ,: ಕ್ಯಾಂಟೀನ್ ಹೆಸರಲ್ಲಿ…