ಕಾಪು : ಕಾಂಗ್ರೆಸ್ – ಜೆಡಿಎಸ್ ಜಂಟಿ ಪಕ್ಷಗಳ ಕಾರ್ಯಕರ್ತರ ಸಭೆಕಾಪು, ಮಾ. 29: ಉಡುಪಿ – ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ ದಲ್ಲಿ ಕಾಂಗ್ರೆಸ್ – ಜೆಡಿಎಸ್ ಮೈತ್ರಿ ಪಕ್ಷದ ಅಭ್ಯರ್ಥಿಯಾಗಿ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಸ್ಪರ್ಧಿಸುವ ಮೂಲಕ ರಾಷ್ಟ್ರ ರಾಜಕಾರಣದ ಮಹಾ ಘಟಬಂಧನ್ಗೆ ವಿಶೇಷ ಬಲ ತುಂಬಿದಂತಾಗಿದೆ. ದೇಶದ ಸಂವಿಧಾನ, ಜಾತ್ಯತೀತತೆಯ ರಕ್ಷಣೆಗಾಗಿ ಗೆಲುವಿಗೆ ಪ್ರಮೋದ್ ಅವರ ಗೆಲುವು ಅನಿವಾರ್ಯವಾಗಿದೆ ಎಂದು ಮಾಜಿ ಸಚಿವ ವಿನಯಕುಮಾರ್ ಸೊರಕೆ ಹೇಳಿದರು.
ಕಾಂಗ್ರೆಸ್ – ಜೆಡಿಎಸ್ ಮೈತ್ರಿ ಸರಕಾರದ ಅಭ್ಯರ್ಥಿ ಪ್ರಮೋದ್ ಮಧ್ವರಾಜ್ ಮಾತನಾಡಿ, ಕಾಪು ಕ್ಷೇತ್ರದಲ್ಲಿ ಪುರಸಭೆಯೊಂದನ್ನು ಹೊರತುಪಡಿಸಿದರೆ ಹೆಚ್ಚಿನ ಆಯಕಟ್ಟಿನ ಸ್ಥಾನಗಳಲ್ಲಿ ಬಿಜೆಪಿ ಜನಪ್ರತಿನಿಧಿಗಳೇ ಆಡಳಿತದಲ್ಲಿದ್ದಾರೆ. ಕಾರ್ಯಕರ್ತರ ಎಲ್ಲ ನೋವಿಗೂ ಪೂರಕವಾಗಿ ಸ್ಪಂದಿಸಿ, ಕಾರ್ಯಕರ್ತರ ಪರವಾಗಿ ಧ್ವನಿ ಎತ್ತುವ ಉದ್ದೇಶಕ್ಕಾಗಿ ಸ್ಪರ್ಧಿಸುತ್ತಿದ್ದೇನೆ.ಎಲ್ಲರೂ ಮುಕ್ತ ಮನಸ್ಸಿನಿಂದ ಬೆಂಬಲಿಸುವಂತೆ ವಿನಂತಿಸಿ ಕೊಂಡರು.
ಕೆ.ಪಿ.ಸಿ.ಸಿ. ಕಾರ್ಯದರ್ಶಿ ಗಳಾದ ಡಾ| ದೇವಿಪ್ರಸಾದ್ ಶೆಟ್ಟಿ, ರಾಜಶೇಖರ ಕೋಟ್ಯಾನ್, ಕೆಪಿಸಿಸಿ ಸಂಯೋಜಕ ನವೀನ್ಚಂದ್ರ ಜೆ. ಶೆಟ್ಟಿ, ಕಾಪು ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷ ನವೀನ್ಚಂದ್ರ ಸುವರ್ಣ, ಜೆಡಿಎಸ್ ಬ್ಲಾಕ್ ಅಧ್ಯಕ್ಷ ಸುಧಾಕರ ಹೆಜಮಾಡಿ, ಮೈತ್ರಿ ಪಕ್ಷದ ಮುಖಂಡರಾದ ಗೀತಾ ವಾಗ್ಲೆ, ಕಾಪು ದಿವಾಕರ ಶೆಟ್ಟಿ, ದಿಲ್ಲೇಶ್ ಶೆಟ್ಟಿ, ಶಾಲಿನಿ ಶೆಟ್ಟಿ ಕೆಂಚನೂರು, ಪ್ರಭಾವತಿ ಶೆಟ್ಟಿ ಕಟಪಾಡಿ, ಶಿವಾಜಿ ಸುವರ್ಣ ಬೆಳ್ಳೆ, ದಿನೇಶ್ ಪುತ್ರನ್, ಮನ್ಸೂರ್ ಇಬ್ರಾಹಿಂ, ಅಬ್ದುಲ್ ಅಜೀಜ್ ಮೊದಲಾದವರು ಉಪಸ್ಥಿತರಿದ್ದರು.
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…