ದೇಶದ ಸಂವಿಧಾನ ಮತ್ತು ಪ್ರಜಾತಂತ್ರ ವ್ಯವಸ್ಥೆಯನ್ನು ಉಳಿಸಲು ಕಾಂಗ್ರೆಸ್ ನಿಂದ ಮಾತ್ರ ಸಾಧ್ಯ  :ಸಿಎಂ ಸಿದ್ದರಾಮಯ್ಯ – Vishwanews24

Featured, ರಾಜ್ಯ ನ್ಯೂಸ್

ದೇಶದ ಸಂವಿಧಾನ ಮತ್ತು ಪ್ರಜಾತಂತ್ರ ವ್ಯವಸ್ಥೆಯನ್ನು ಉಳಿಸಲು ಕಾಂಗ್ರೆಸ್ ನಿಂದ ಮಾತ್ರ ಸಾಧ್ಯ  :ಸಿಎಂ ಸಿದ್ದರಾಮಯ್ಯ

ಹಾಸನ,: ದೇಶದಲ್ಲಿ ಪ್ರಜಾಪ್ರಭುತ್ವ ಮತ್ತು ಸಂವಿಧಾನವನ್ನು ಉಳಿಸಬೇಕಾಗಿದೆ. ದೇಶದ ಬಡವರು, ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು, ಶ್ರಮಿಕರು, ಮಹಿಳೆಯರು ಉದ್ಧಾರವಾಗಬೇಕಾದರೆ ಸಂವಿಧಾನವನ್ನು ಮತ್ತು ಪ್ರಜಾತಂತ್ರ ವ್ಯವಸ್ಥೆಯನ್ನು ಉಳಿಸಲೇಬೇಕು. ಆ ಕೆಲಸ ಕೇವಲ ಕಾಂಗ್ರೆಸ್ ಪಕ್ಷದಿಂದ ಮಾತ್ರ ಸಾಧ್ಯ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಬೇಲೂರು ಕಾಂಗ್ರೆಸ್ ಸಮಾವೇಶದಲ್ಲಿ ಹಾಸನ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಶ್ರೇಯಸ್ ಪಟೇಲ್ ಪರ ಪ್ರಚಾರ ಮಾಡಿ ಮಾತನಾಡಿದ ಅವರು, ಜೆಡಿಎಸ್ ಪಕ್ಷವನ್ನು ಯಾರೂ ನಂಬುವಂತಿಲ್ಲ. ಯಾಕೆಂದರೆ ಅವರು ಕೋಮುವಾದಿ ಬಿಜೆಪಿ ಜೊತೆ ಕೈ ಜೋಡಿಸಿ ಭಾಯಿ-ಭಾಯಿ ಆಗಿದ್ದಾರೆ ಎಂದರು.

ಉಪ್ಪಿನಂಗಡಿ: 13 ವರ್ಷದ ಬಾಲಕ ನೇಣು ಬಿಗಿದು ಆತ್ಮಹತ್ಯೆ – Vishwanews24

ಇನ್ನು ನನಗೆ ದೇವೇಗೌಡರ ಬಗ್ಗೆ ಸಹಾನುಭೂತಿ ಹುಟ್ಟುತ್ತದೆ. ದೇವೇಗೌಡರು ಯಾವತ್ತೂ ಬಿಜೆಪಿ ಜೊತೆ ಕೈ ಜೋಡಿಸಲ್ಲ ಅಂತ ಹೇಳಿದ್ದರು. ಆದರೆ ಅವರಿಗೆ ತಮ್ಮ ಮಾತು ಮರೆತು ಹೋಗಿದೆ. ಹೀಗಾಗಿ ಮಾತು ತಪ್ಪುವವರ ಪಕ್ಷದ ಅಭ್ಯರ್ಥಿ ಪ್ರಜ್ವಲ್ ರೇವಣ್ಣರನ್ನು ಸೋಲಿಸಿ ಕಾಂಗ್ರೆಸ್ ಪಕ್ಷದ ಶ್ರೇಯಸ್ ಪಟೇಲ್ ರನ್ನು ಗೆಲ್ಲಿಸಿ ಎಂದು ಸಿದ್ದರಾಮಯ್ಯ ಅವರು ಜನತೆಯಲ್ಲಿ ಮನವಿ ಮಾಡಿಕೊಂಡರು.

Leave a Reply