Featured

ದೇಶದ ಸಮಗ್ರ ಅಭಿವೃದ್ಧಿಗಾಗಿ ಮೋದಿ ಮತ್ತೂಮ್ಮೆ ದೇಶದ ಪ್ರಧಾನಿಯಾಗಬೇಕು:ಶಾಸಕ ಸಿ.ಟಿ. ರವಿ – Vishwanews24

ಕುಷ್ಟಗಿ: ನರೇಂದ್ರ ಮೋದಿ ಮತ್ತೂಮ್ಮೆ ದೇಶದ ಪ್ರಧಾನಿಯಾದರೆ ಮಹಾತ್ವಾಕಾಂಕ್ಷಿ ನದಿಗಳ ಜೋಡಣೆ ಸಂಕಲ್ಪ ಈಡೇರಲಿದೆ ಎಂದು ರಾಜ್ಯ ಬಿಜೆಪಿ ಕಾರ್ಯದರ್ಶಿ, ಚಿಕಮಗಳೂರು ಶಾಸಕ ಸಿ.ಟಿ. ರವಿ ಹೇಳಿದರು.

ರವಿವಾರ ಪಟ್ಟಣದಲ್ಲಿ ರೋಡ್‌ ಶೋ ನಡೆಸಿ ಬಿಜೆಪಿ ಅಭ್ಯರ್ಥಿ ಕರಡಿ ಸಂಗಣ್ಣ ಪರ ಮತಯಾಚಿಸಿದರು. ನಂತರ ಬಸವೇಶ್ವರ ವೃತ್ತದಲ್ಲಿ ಮತದಾರರನ್ನು ಉದ್ದೇಶಿಸಿ ಮಾತನಾಡಿದರು.

2014ರಲ್ಲಿ ನರೇಂದ್ರ ಮೋದಿ ಪ್ರಧಾನಮಂತ್ರಿಯಾಗಿ ಸ್ವಚ್ಛ ಭಾರತ, ಜನ್‌ಧನ್‌ ಉಜ್ವಲ, ಮುದ್ರಾ, ಪ್ರಧಾನಮತ್ರಿ ಫಸಲ್ ಬಿಮಾ ಯೋಜನೆ, ಪ್ರಧಾನಮಂತ್ರಿ ಕಿಸಾನ್‌ ಸಮ್ಮಾನ್‌, ಆಯುಷ್ಮಾನ್‌ ಭಾರತ ಮೊದಲಾದ ಜನಕಲ್ಯಾಣ ಯೋಜನೆಗಳನನ್ನು ಜಾರಿಗೆ ತಂದರು. ಇದೀಗ ಮತ್ತೂಮ್ಮೆ ಪ್ರಧಾನಿಯಾದರೆ ನದಿಗಳ ಜೋಡಣೆಯಿಂದ ವ್ಯಾಪಕ ನೀರಾವರಿ ಯೋಜನೆಗಳಿಗೆ ಮೊದಲಾದ್ಯತೆ ನೀಡುತ್ತಾರೆ. ಹೀಗಾಗಿ ಬಿಜೆಪಿ ಗೆಲ್ಲಿಸಬೇಕು. ಮೋದಿ ಮತ್ತೂಮ್ಮೆ ಪ್ರಧಾನಿಯಾಗಬೇಕು. ಪುಲ್ವಾಮಾ ಉಗ್ರರರ ದಾಳಿಗೆ ಮೂಲಕ ಪ್ರತ್ಯುತ್ತರ ನೀಡಿರುವುದು ಭಾರತದ ತಾಕತ್‌ ಆಗಿದೆ.

ಭಾರತ ಗೆಲ್ಲಿಸುವ ಯೋಗ್ಯತೆ ನರೇಂದ್ರ ಮೋದಿ ಅವರಿಗೆ ಇದ್ದು, ಆ ಯೋಗ್ಯತೆ ಕಾಂಗ್ರೆಸ್ಸಿಗರಲ್ಲಿದೆಯೇ? ಮಾಜಿ ಪ್ರಧಾನಿ ದೊಡ್ಡಗೌಡರಿಗೆ ದೇಶದ ಚಿಂತೆಗಿಂತ ಮಕ್ಕಳು, ಮೊಮ್ಮಕ್ಕಳ ಚಿಂತೆಯಾದರೆ ನರೇಂದ್ರ ಮೋದಿ ಅವರಿಗೆ ದೇಶ ಗೆಲ್ಲಿಸುವ ಚಿಂತೆಯಾಗಿದ್ದು, ದೇಶಕ್ಕಾಗಿ ಮೋದಿ ಅನಿವಾರ್ಯ ಎಂದು ಹೇಳಿದರು.

ಸಂಸದ, ಬಿಜೆಪಿ ಅಭ್ಯರ್ಥಿ ಸಂಗಣ್ಣ ಕರಡಿ ಮಾತನಾಡಿ, ಲೋಕಸಭೆ ಚುನಾವಣೆ ನಂತರ ರಾಜ್ಯದ ಮೈತ್ರಿ ಸರ್ಕಾರ ಪತನಗೊಳ್ಳಲಿದೆ. ಈ ಸರ್ಕಾರ ಮೇ 23ರವರೆಗೆ ಮಾತ್ರ ಜೀವಂತವಾಗಿರಲಿದೆ ಎಂದರು.

ಮಾಜಿ ಶಾಸಕ ದೊಡ್ಡನಗೌಡ ಪಾಟೀಲ, ಮಾಜಿ ಶಾಸಕ ಕೆ. ಶರಣಪ್ಪ ಮಾತನಾಡಿದರು. ಜಿಪಂ ಸದಸ್ಯರಾದ ಕೆ. ಮಹೇಶ, ವಿಜಯ್‌ ನಾಯಕ್‌, ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಶರಣು ತಳ್ಳೀಕೇರಿ, ಹೇಮಲತಾ ಹಿರೇಮಠ, ಮಲ್ಲಣ್ಣ ಪಲ್ಲೇದ್‌, ಬಾಲಪ್ಪ ಚಾಕ್ರಿ, ಎಪಿಎಂಸಿ ಅಧ್ಯಕ್ಷ ಪರಶುರಾಮ ಪಲ್ಲೇದ್‌, ಪುರಸಭೆ ಸದಸ್ಯ ಕಲ್ಲೇಶ ತಾಳದ್‌, ಮಲ್ಲಿಕಾರ್ಜುನ ಮಸೂತಿ, ರಾಜು ಗಂಗನಾಳ ಮತ್ತಿತರಿದ್ದರು.

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

6 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

6 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

6 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

6 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

7 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

7 hours ago