Featured

ದೇಶದ ಸರ್ವೋತ್ತಮ ಜಿ.ಪಂ. ಹೆಗ್ಗಳಿಕೆಗೆ ಪಾತ್ರವಾದ ಉಡುಪಿ ಜಿಲ್ಲಾ ಪಂಚಾಯತ್ – vishwanews24

ದೇಶದ ಸರ್ವೋತ್ತಮ ಜಿ.ಪಂ. ಹೆಗ್ಗಳಿಕೆಗೆ ಪಾತ್ರವಾದ ಉಡುಪಿ ಜಿಲ್ಲಾ ಪಂಚಾಯತ್

ಉಡುಪಿ: ಶಿಕ್ಷಣ, ಆರ್ಥಿಕ ಕ್ರೋಢೀಕರಣ ಸಹಿತ ವಿವಿಧ ವಿಷಯ ಗಳಲ್ಲಿನ ವಿಶೇಷ ಸಾಧನೆಗಾಗಿ ಕೇಂದ್ರ ಸರಕಾರದ ಪಂಚಾಯತ್‌ರಾಜ್‌ ಇಲಾಖೆಯ ರಾಷ್ಟ್ರೀಯ ಪುರಸ್ಕಾರಕ್ಕೆ ಉಡುಪಿ ಜಿ.ಪಂ. ಆಯ್ಕೆಯಾಗಿದೆ.

ಡಿ.11ರಂದು ದಿಲ್ಲಿಯಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದ್ದು, ಜಿ.ಪಂ. ಸಿಇಒ ಪ್ರತೀಕ್‌ ಬಾಯಲ್‌ 2 ಕೋ.ರೂ. ನಗದಿನ ಪ್ರಶಸ್ತಿ ಸ್ವೀಕರಿಸುವರು.ಈ ಹಣವನ್ನು ಯಾವ ಉದ್ದೇಶಕ್ಕೆ ಬಳಸಬೇಕು ಎಂಬುದರ ಮಾರ್ಗ ಸೂಚಿಯನ್ನು ಇಲಾಖೆ ನೀಡಲಿದೆ. ಈ ಮೂಲಕ ಉಡುಪಿಯು ದೇಶದ ಸರ್ವೋತ್ತಮ ಜಿ.ಪಂ. ಹೆಗ್ಗಳಿಕೆಗೆ ಪಾತ್ರವಾಗಿದೆ.

ಉಡುಪಿಯ ಸಾಧನೆಯ ಹಾದಿ
ಉಡುಪಿಯು 155 ಗ್ರಾ. ಪಂ. ಹೊಂದಿದ್ದು, ಪ್ರತಿ ಸೋಮವಾರ ಜಿಪಂ ಸಿಇಒ ಗ್ರಾ.ಪಂ. ಗಳ ನೀರು ಪೂರೈಕೆ ಸಹಿತ ವಿವಿಧ ಕಾರ್ಯಯೋಜನೆ ಅನುಷ್ಠಾನ ಏಜೆನ್ಸಿಗಳೊಂದಿಗೆ ಪ್ರಗತಿ ಪರಿಶೀಲಿಸುತ್ತಿದ್ದರು. ಬಳಿಕ ಸಮಸ್ಯೆಗಳ ಪರಿಹಾರಕ್ಕೆ ತಿಂಗಳಿಗೆ 2 ಬಾರಿ ಜಿಲ್ಲಾಧಿಕಾರಿಗಳ ಜತೆ ಸಭೆ, ಇಲಾಖೆಗಳ ಜತೆ ಸಮನ್ವಯ, ಅಭಿವೃದ್ಧಿಗಾಗಿ ಕಳೆದ ವರ್ಷದ ಸೂಚ್ಯಂಕದ ಆಧಾರದಲ್ಲಿ ಯೋಜನೆ ರೂಪಿಸಿ ಅನುಷ್ಠಾನ,ವಾರ್ಡ್‌ ಸಭೆ, ಗ್ರಾಮ ಸಭೆ, ಜಮಾಬಂದಿಗೆ ಒತ್ತು, ಶಾಲಾಭಿವೃದ್ಧಿಗೆ ಪ್ರತ್ಯೇಕ ಸಮಿತಿ ರಚನೆ, ಶೈಕ್ಷಣಿಕ ಕಾರ್ಯಕ್ರಮ ಅನುಷ್ಠಾನ ಗುಣಮಟ್ಟ ಪರಿಶೀಲನೆ, ಶಿಶು, ಗರ್ಭಿಣಿ ಮರಣ ಸಂಭವಿಸ ದಂತೆ ನಿಗಾ, ಅಪೌಷ್ಟಿಕತೆ ನಿವಾರಣೆ, ಸಾಂಕ್ರಾಮಿಕ ರೋಗಗಳ ಸಮರ್ಥ ನಿರ್ವಹಣೆ ಇತ್ಯಾದಿ ಕ್ರಮಗಳಿಗೆ ಈ ಪ್ರಶಸ್ತಿ ಸಂದಿದೆ.

ಸಂಪನ್ಮೂಲ ಕ್ರೋಢೀಕರಣಕ್ಕೆ ಒತ್ತು ನೀಡಿ ಶೇ.90ಕ್ಕೂ ಜಾಸ್ತಿ ತೆರಿಗೆ ವಸೂಲು, ಆನ್‌ಲೈನ್‌ ತೆರಿಗೆ ಪಾವತಿಗೆ ಕ್ರಮ, ತ್ಯಾಜ್ಯ ನಿರ್ವಹಣೆಯಲ್ಲಿ ದೇಶಕ್ಕೆ ಮಾದರಿ, ಗ್ರಾಮೀಣ ಭಾಗದಲ್ಲಿ ಎಂಆರ್‌ಎಫ್ ಘಟಕ ಸ್ಥಾಪನೆ, ಆನ್‌ಲೈನ್‌ ಮೂಲಕ ಶಾಲಾ, ಕಾಲೇಜು ವಿದ್ಯಾರ್ಥಿಗಳಿಗೆ ನೀಟ್‌, ಸಿಇಟಿ ಕೋಚಿಂಗ್‌ ಮೂಲಕ ಎಸೆಸೆಲ್ಸಿ, ಪಿಯುಸಿಯಲ್ಲಿ ಅಗ್ರಸ್ಥಾನ ಪಡೆದದ್ದು, ಸಂಜೀವಿನಿ ಸಂಘಗಳ ಮೂಲಕ ಹಡಿಲು ಭೂಮಿ ಕೃಷಿ, ಇತ್ಯಾದಿ ಕ್ರಮಗಳಿಗೆ ನಾನಾಜಿ ದೇಶ್‌ಮುಖ್‌ ಸರ್ವೋತ್ತಮ ಪಂಚಾಯತ್‌ ಪ್ರಶಸ್ತಿಗೆ 3ನೇ ಅತ್ಯುತ್ತಮ ಜಿಲ್ಲೆಯಾಗಿ ಆಯ್ಕೆಯಾಗಿದೆ ಎಂದು ಜಿ.ಪಂ. ಸಹಾಯಕ ಕಾರ್ಯದರ್ಶಿ ಪ್ರಶಾಂತ್‌ ಅವರು ಮಾಹಿತಿ ನೀಡಿದರು.

ಮಡಿಕೇರಿ ತಾಲೂಕಿನ ಗಾಳಿಬೀಡು ಗ್ರಾ.ಪಂ.ಗೆ ಪ್ರಥಮ ಸ್ಥಾನ ಬಂದಿದ್ದು, 1 ಕೋ.ರೂ. ಬಹುಮಾನ ಪಡೆಯಲಿದೆ.

 

Vishwa News 24

Recent Posts

ಕಾರವಾರ : ವೀರ ಯೋಧ ಹುತಾತ್ಮ ವಿನೋದ ನಾಯಕ್ ಅವರ 21ನೇ ಪುಣ್ಯತಿಥಿ ಹಾಗೂ ಸ್ಮಾರಕಕ್ಕೆ ನೂತನ ಕಾಂಪೌಂಡ್ ಗೋಡೆ ಉದ್ಘಾಟನೆ – vishwanews24

ಕಾರವಾರ : ವೀರ ಯೋಧ ಹುತಾತ್ಮ ವಿನೋದ ನಾಯಕ್ ಅವರ 21ನೇ ಪುಣ್ಯತಿಥಿ ಹಾಗೂ ಸ್ಮಾರಕಕ್ಕೆ ನೂತನ ಕಾಂಪೌಂಡ್ ಗೋಡೆ…

2 hours ago

ಕಾನ್ಪುರದಲ್ಲಿ ಖಾಸಗಿ ತರಬೇತಿ ವಿಮಾನ ಅಪಘಾತ: ಉಡುಪಿ ಮೂಲದ ಪೈಲಟ್‌ ಅಭಿಷೇಕ್ ಪೂಜಾರಿ ಸಾವು – vishwanews24

ಕಾನ್ಪುರದಲ್ಲಿ ಖಾಸಗಿ ತರಬೇತಿ ವಿಮಾನ ಅಪಘಾತ: ಉಡುಪಿ ಮೂಲದ ಪೈಲಟ್‌ ಸಾವು ಉಡುಪಿ: ಉತ್ತರ ಪ್ರದೇಶದ ಕಾನ್ಪುರದಲ್ಲಿ ಆಗಸ್ಟ್ 27ರಂದು…

3 hours ago

ಅಮೆರಿಕದ ಪ್ರತಿಷ್ಠಿತ  ಗ್ರ್ಯಾಂಡ್ ಚೆಸ್ ಟೂರ್ ಗೆದ್ದು ಇತಿಹಾಸ ನಿರ್ಮಿಸಿದ ಪ್ರಜ್ಞಾನಂದ – vishwanews24

ಅಮೆರಿಕದ ಪ್ರತಿಷ್ಠಿತ  ಗ್ರ್ಯಾಂಡ್ ಚೆಸ್ ಟೂರ್ ಗೆದ್ದು ಇತಿಹಾಸ ನಿರ್ಮಿಸಿದ ಪ್ರಜ್ಞಾನಂದ ವಾಷಿಂಗ್ಟನ್‌: ಭಾರತದ ಯುವ ಗ್ರ್ಯಾಂಡ್‌ಮಾಸ್ಟರ್ ಆರ್. ಪ್ರಜ್ಞಾನಂದ…

5 hours ago

ಮೈಸೂರು ದಸರಾಕ್ಕೆ ಅದ್ದೂರಿ ಸಿದ್ಧತೆ : ಅರಮನೆ ಪ್ರವೇಶಿಸಿದ ಗಜಪಡೆಗೆ ಭರ್ಜರಿ ಸ್ವಾಗತ – vishwanews24

ಮೈಸೂರು ದಸರಾಕ್ಕೆ ಅದ್ದೂರಿ ಸಿದ್ಧತೆ : ಅರಮನೆ ಪ್ರವೇಶಿಸಿದ ಗಜಪಡೆಗೆ ಭರ್ಜರಿ ಸ್ವಾಗತ ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ…

5 hours ago

ಕುಂದಾಪುರ : ಗಂಗೊಳ್ಳಿ ಸಮುದ್ರದಲ್ಲಿ ಮುಳುಗಿದ್ದ ದೋಣಿಯ ಅವಶೇಷ ಪತ್ತೆ – vishwanews24

ಕುಂದಾಪುರ : ಗಂಗೊಳ್ಳಿ ಸಮುದ್ರದಲ್ಲಿ ಮುಳುಗಿದ್ದ ದೋಣಿಯ ಅವಶೇಷ ಪತ್ತೆ ಕುಂದಾಪುರ : ಗಂಗೊಳ್ಳಿ ನದೀಮುಖದ ಬಳಿ ಬುಧವಾರ ಸಮುದ್ರದಲ್ಲಿ…

5 hours ago

2019 – 2023ರ ವರೆಗೆ ಮುಡಾದಿಂದ ಹಂಚಿಕೆಯಾದ ಎಲ್ಲಾ 50:50 ಸೈಟುಗಳು ರದ್ದು : ಯತೀಂದ್ರ ಸಿದ್ದರಾಮಯ್ಯ – vishwanews24

2019 – 2023ರ ವರೆಗೆ ಮುಡಾದಿಂದ ಹಂಚಿಕೆಯಾದ ಎಲ್ಲಾ 50:50 ಸೈಟುಗಳು ರದ್ದು .. ಅಕ್ರಮ ನಡೆದಿದ್ದರೆ 2018ರ ಹಿಂದೆ…

5 hours ago