Featured

ದೇಶದ ಸರ್ವೋತ್ತಮ ಜಿ.ಪಂ. ಹೆಗ್ಗಳಿಕೆಗೆ ಪಾತ್ರವಾದ ಉಡುಪಿ ಜಿಲ್ಲಾ ಪಂಚಾಯತ್ – vishwanews24

ದೇಶದ ಸರ್ವೋತ್ತಮ ಜಿ.ಪಂ. ಹೆಗ್ಗಳಿಕೆಗೆ ಪಾತ್ರವಾದ ಉಡುಪಿ ಜಿಲ್ಲಾ ಪಂಚಾಯತ್

ಉಡುಪಿ: ಶಿಕ್ಷಣ, ಆರ್ಥಿಕ ಕ್ರೋಢೀಕರಣ ಸಹಿತ ವಿವಿಧ ವಿಷಯ ಗಳಲ್ಲಿನ ವಿಶೇಷ ಸಾಧನೆಗಾಗಿ ಕೇಂದ್ರ ಸರಕಾರದ ಪಂಚಾಯತ್‌ರಾಜ್‌ ಇಲಾಖೆಯ ರಾಷ್ಟ್ರೀಯ ಪುರಸ್ಕಾರಕ್ಕೆ ಉಡುಪಿ ಜಿ.ಪಂ. ಆಯ್ಕೆಯಾಗಿದೆ.

ಡಿ.11ರಂದು ದಿಲ್ಲಿಯಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದ್ದು, ಜಿ.ಪಂ. ಸಿಇಒ ಪ್ರತೀಕ್‌ ಬಾಯಲ್‌ 2 ಕೋ.ರೂ. ನಗದಿನ ಪ್ರಶಸ್ತಿ ಸ್ವೀಕರಿಸುವರು.ಈ ಹಣವನ್ನು ಯಾವ ಉದ್ದೇಶಕ್ಕೆ ಬಳಸಬೇಕು ಎಂಬುದರ ಮಾರ್ಗ ಸೂಚಿಯನ್ನು ಇಲಾಖೆ ನೀಡಲಿದೆ. ಈ ಮೂಲಕ ಉಡುಪಿಯು ದೇಶದ ಸರ್ವೋತ್ತಮ ಜಿ.ಪಂ. ಹೆಗ್ಗಳಿಕೆಗೆ ಪಾತ್ರವಾಗಿದೆ.

ಉಡುಪಿಯ ಸಾಧನೆಯ ಹಾದಿ
ಉಡುಪಿಯು 155 ಗ್ರಾ. ಪಂ. ಹೊಂದಿದ್ದು, ಪ್ರತಿ ಸೋಮವಾರ ಜಿಪಂ ಸಿಇಒ ಗ್ರಾ.ಪಂ. ಗಳ ನೀರು ಪೂರೈಕೆ ಸಹಿತ ವಿವಿಧ ಕಾರ್ಯಯೋಜನೆ ಅನುಷ್ಠಾನ ಏಜೆನ್ಸಿಗಳೊಂದಿಗೆ ಪ್ರಗತಿ ಪರಿಶೀಲಿಸುತ್ತಿದ್ದರು. ಬಳಿಕ ಸಮಸ್ಯೆಗಳ ಪರಿಹಾರಕ್ಕೆ ತಿಂಗಳಿಗೆ 2 ಬಾರಿ ಜಿಲ್ಲಾಧಿಕಾರಿಗಳ ಜತೆ ಸಭೆ, ಇಲಾಖೆಗಳ ಜತೆ ಸಮನ್ವಯ, ಅಭಿವೃದ್ಧಿಗಾಗಿ ಕಳೆದ ವರ್ಷದ ಸೂಚ್ಯಂಕದ ಆಧಾರದಲ್ಲಿ ಯೋಜನೆ ರೂಪಿಸಿ ಅನುಷ್ಠಾನ,ವಾರ್ಡ್‌ ಸಭೆ, ಗ್ರಾಮ ಸಭೆ, ಜಮಾಬಂದಿಗೆ ಒತ್ತು, ಶಾಲಾಭಿವೃದ್ಧಿಗೆ ಪ್ರತ್ಯೇಕ ಸಮಿತಿ ರಚನೆ, ಶೈಕ್ಷಣಿಕ ಕಾರ್ಯಕ್ರಮ ಅನುಷ್ಠಾನ ಗುಣಮಟ್ಟ ಪರಿಶೀಲನೆ, ಶಿಶು, ಗರ್ಭಿಣಿ ಮರಣ ಸಂಭವಿಸ ದಂತೆ ನಿಗಾ, ಅಪೌಷ್ಟಿಕತೆ ನಿವಾರಣೆ, ಸಾಂಕ್ರಾಮಿಕ ರೋಗಗಳ ಸಮರ್ಥ ನಿರ್ವಹಣೆ ಇತ್ಯಾದಿ ಕ್ರಮಗಳಿಗೆ ಈ ಪ್ರಶಸ್ತಿ ಸಂದಿದೆ.

ಸಂಪನ್ಮೂಲ ಕ್ರೋಢೀಕರಣಕ್ಕೆ ಒತ್ತು ನೀಡಿ ಶೇ.90ಕ್ಕೂ ಜಾಸ್ತಿ ತೆರಿಗೆ ವಸೂಲು, ಆನ್‌ಲೈನ್‌ ತೆರಿಗೆ ಪಾವತಿಗೆ ಕ್ರಮ, ತ್ಯಾಜ್ಯ ನಿರ್ವಹಣೆಯಲ್ಲಿ ದೇಶಕ್ಕೆ ಮಾದರಿ, ಗ್ರಾಮೀಣ ಭಾಗದಲ್ಲಿ ಎಂಆರ್‌ಎಫ್ ಘಟಕ ಸ್ಥಾಪನೆ, ಆನ್‌ಲೈನ್‌ ಮೂಲಕ ಶಾಲಾ, ಕಾಲೇಜು ವಿದ್ಯಾರ್ಥಿಗಳಿಗೆ ನೀಟ್‌, ಸಿಇಟಿ ಕೋಚಿಂಗ್‌ ಮೂಲಕ ಎಸೆಸೆಲ್ಸಿ, ಪಿಯುಸಿಯಲ್ಲಿ ಅಗ್ರಸ್ಥಾನ ಪಡೆದದ್ದು, ಸಂಜೀವಿನಿ ಸಂಘಗಳ ಮೂಲಕ ಹಡಿಲು ಭೂಮಿ ಕೃಷಿ, ಇತ್ಯಾದಿ ಕ್ರಮಗಳಿಗೆ ನಾನಾಜಿ ದೇಶ್‌ಮುಖ್‌ ಸರ್ವೋತ್ತಮ ಪಂಚಾಯತ್‌ ಪ್ರಶಸ್ತಿಗೆ 3ನೇ ಅತ್ಯುತ್ತಮ ಜಿಲ್ಲೆಯಾಗಿ ಆಯ್ಕೆಯಾಗಿದೆ ಎಂದು ಜಿ.ಪಂ. ಸಹಾಯಕ ಕಾರ್ಯದರ್ಶಿ ಪ್ರಶಾಂತ್‌ ಅವರು ಮಾಹಿತಿ ನೀಡಿದರು.

ಮಡಿಕೇರಿ ತಾಲೂಕಿನ ಗಾಳಿಬೀಡು ಗ್ರಾ.ಪಂ.ಗೆ ಪ್ರಥಮ ಸ್ಥಾನ ಬಂದಿದ್ದು, 1 ಕೋ.ರೂ. ಬಹುಮಾನ ಪಡೆಯಲಿದೆ.

 

Vishwa News 24

Recent Posts

ನೇಪಾಳ ಭೀಕರ ಪ್ರವಾಹ : 5 ಲಕ್ಷ ಡಾಲರ್‌ಗಳ ತುರ್ತು ನೆರವು ಘೋಷಿಸಿದ ಅಮೆರಿಕ – vishwanews24

ನೇಪಾಳ ಭೀಕರ ಪ್ರವಾಹ : 5 ಲಕ್ಷ ಡಾಲರ್‌ಗಳ ತುರ್ತು ನೆರವು ಘೋಷಿಸಿದ ಅಮೆರಿಕ ಕಠ್ಮಂಡು: ನೇಪಾಳದ ಭೋಟೆ ಕೋಶಿ…

1 hour ago

ಮಂಗಳೂರು ನೈಋತ್ಯ ವಲಯ ಸೇರ್ಪಡೆ ; ಶೀಘ್ರ ಸಂಭ್ರಮೋತ್ಸವ: ಸತೀಶ್‌ ಕುಂಪಲ – vishwanews24

ಮಂಗಳೂರು ನೈಋತ್ಯ ವಲಯ ಸೇರ್ಪಡೆ ; ಶೀಘ್ರ ಸಂಭ್ರಮೋತ್ಸವ: ಸತೀಶ್‌ ಕುಂಪಲ ಮಂಗಳೂರು : ರೈಲ್ವೇ ಪ್ರದೇಶವನ್ನು ನೈಋತ್ಯ ವಲಯಕ್ಕೆ…

1 hour ago

ಶಿರ್ವ : ಹುಚ್ಚುನಾಯಿ ಹಾವಳಿ ; ಹಲವರಿಗೆ ಕಡಿತ , ಸ್ಥಳೀಯರಲ್ಲಿ ಆತಂಕ – vishwanews24

ಶಿರ್ವ : ಹುಚ್ಚುನಾಯಿ ಹಾವಳಿ ; ಹಲವರಿಗೆ ಕಡಿತ , ಸ್ಥಳೀಯರಲ್ಲಿ ಆತಂಕ ಶಿರ್ವ: ಶಿರ್ವ ಮತ್ತು ಕುತ್ಯಾರು ಗ್ರಾ.ಪಂ.…

2 hours ago

ಗ್ಯಾಸ್ ಏಜೆನ್ಸಿಗಳಿಂದ ಎಲ್‌ಪಿಜಿ ಪೂರೈಕೆ: ನೆಟ್‌ವರ್ಕ್ ಇಲ್ಲದ ಕಡೆ ಒಟಿಪಿ ರಿಯಾಯಿತಿ : ಕೋಟ ಶ್ರೀನಿವಾಸ ಪೂಜಾರಿ – vishwanews24

ಗ್ಯಾಸ್ ಏಜೆನ್ಸಿಗಳಿಂದ ಎಲ್‌ಪಿಜಿ ಪೂರೈಕೆ: ನೆಟ್‌ವರ್ಕ್ ಇಲ್ಲದ ಕಡೆ ಒಟಿಪಿ ರಿಯಾಯಿತಿ : ಕೋಟ ಶ್ರೀನಿವಾಸ ಪೂಜಾರಿ ಮಣಿಪಾಲ: ನೆಟ್‌ವರ್ಕ್‌…

2 hours ago

ಕಟಪಾಡಿ:  ಮಟ್ಟು ಬೀಚ್‌ನಲ್ಲಿ ತೀವ್ರಗೊಂಡ ಕಡಲ್ಕೊರೆತ : ತುರ್ತು  ಸುರಕ್ಷ ಕಾಮಗಾರಿ ಆರಂಭ – vishwanews24

ಕಟಪಾಡಿ:  ಮಟ್ಟು ಬೀಚ್‌ನಲ್ಲಿ ತೀವ್ರಗೊಂಡ ಕಡಲ್ಕೊರೆತ : ತುರ್ತು  ಸುರಕ್ಷ ಕಾಮಗಾರಿ ಆರಂಭ ಕಟಪಾಡಿ: ಕಾಪು ತಾಲೂಕು ಕೋಟೆ ಗ್ರಾ.…

2 hours ago

ನೇಪಾಳ ಪ್ರವಾಹ: ನಾಪತ್ತೆಯಾದ ಕನ್ನಡಿಗರ ಮಾಹಿತಿ ನೀಡಲು ಸರ್ಕಾರ ಮನವಿ – vishwanews24

ನೇಪಾಳ ಪ್ರವಾಹ: ನಾಪತ್ತೆಯಾದ ಕನ್ನಡಿಗರ ಮಾಹಿತಿ ನೀಡಲು ಸರ್ಕಾರ ಮನವಿ ಬೆಂಗಳೂರು: ನೇಪಾಳದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪ ಹಾಗೂ ದಿಢೀರ್…

2 hours ago