Featured

ದೇಶದ ಸರ್ವೋತ್ತಮ ಜಿ.ಪಂ. ಹೆಗ್ಗಳಿಕೆಗೆ ಪಾತ್ರವಾದ ಉಡುಪಿ ಜಿಲ್ಲಾ ಪಂಚಾಯತ್ – vishwanews24

ದೇಶದ ಸರ್ವೋತ್ತಮ ಜಿ.ಪಂ. ಹೆಗ್ಗಳಿಕೆಗೆ ಪಾತ್ರವಾದ ಉಡುಪಿ ಜಿಲ್ಲಾ ಪಂಚಾಯತ್

ಉಡುಪಿ: ಶಿಕ್ಷಣ, ಆರ್ಥಿಕ ಕ್ರೋಢೀಕರಣ ಸಹಿತ ವಿವಿಧ ವಿಷಯ ಗಳಲ್ಲಿನ ವಿಶೇಷ ಸಾಧನೆಗಾಗಿ ಕೇಂದ್ರ ಸರಕಾರದ ಪಂಚಾಯತ್‌ರಾಜ್‌ ಇಲಾಖೆಯ ರಾಷ್ಟ್ರೀಯ ಪುರಸ್ಕಾರಕ್ಕೆ ಉಡುಪಿ ಜಿ.ಪಂ. ಆಯ್ಕೆಯಾಗಿದೆ.

ಡಿ.11ರಂದು ದಿಲ್ಲಿಯಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದ್ದು, ಜಿ.ಪಂ. ಸಿಇಒ ಪ್ರತೀಕ್‌ ಬಾಯಲ್‌ 2 ಕೋ.ರೂ. ನಗದಿನ ಪ್ರಶಸ್ತಿ ಸ್ವೀಕರಿಸುವರು.ಈ ಹಣವನ್ನು ಯಾವ ಉದ್ದೇಶಕ್ಕೆ ಬಳಸಬೇಕು ಎಂಬುದರ ಮಾರ್ಗ ಸೂಚಿಯನ್ನು ಇಲಾಖೆ ನೀಡಲಿದೆ. ಈ ಮೂಲಕ ಉಡುಪಿಯು ದೇಶದ ಸರ್ವೋತ್ತಮ ಜಿ.ಪಂ. ಹೆಗ್ಗಳಿಕೆಗೆ ಪಾತ್ರವಾಗಿದೆ.

ಉಡುಪಿಯ ಸಾಧನೆಯ ಹಾದಿ
ಉಡುಪಿಯು 155 ಗ್ರಾ. ಪಂ. ಹೊಂದಿದ್ದು, ಪ್ರತಿ ಸೋಮವಾರ ಜಿಪಂ ಸಿಇಒ ಗ್ರಾ.ಪಂ. ಗಳ ನೀರು ಪೂರೈಕೆ ಸಹಿತ ವಿವಿಧ ಕಾರ್ಯಯೋಜನೆ ಅನುಷ್ಠಾನ ಏಜೆನ್ಸಿಗಳೊಂದಿಗೆ ಪ್ರಗತಿ ಪರಿಶೀಲಿಸುತ್ತಿದ್ದರು. ಬಳಿಕ ಸಮಸ್ಯೆಗಳ ಪರಿಹಾರಕ್ಕೆ ತಿಂಗಳಿಗೆ 2 ಬಾರಿ ಜಿಲ್ಲಾಧಿಕಾರಿಗಳ ಜತೆ ಸಭೆ, ಇಲಾಖೆಗಳ ಜತೆ ಸಮನ್ವಯ, ಅಭಿವೃದ್ಧಿಗಾಗಿ ಕಳೆದ ವರ್ಷದ ಸೂಚ್ಯಂಕದ ಆಧಾರದಲ್ಲಿ ಯೋಜನೆ ರೂಪಿಸಿ ಅನುಷ್ಠಾನ,ವಾರ್ಡ್‌ ಸಭೆ, ಗ್ರಾಮ ಸಭೆ, ಜಮಾಬಂದಿಗೆ ಒತ್ತು, ಶಾಲಾಭಿವೃದ್ಧಿಗೆ ಪ್ರತ್ಯೇಕ ಸಮಿತಿ ರಚನೆ, ಶೈಕ್ಷಣಿಕ ಕಾರ್ಯಕ್ರಮ ಅನುಷ್ಠಾನ ಗುಣಮಟ್ಟ ಪರಿಶೀಲನೆ, ಶಿಶು, ಗರ್ಭಿಣಿ ಮರಣ ಸಂಭವಿಸ ದಂತೆ ನಿಗಾ, ಅಪೌಷ್ಟಿಕತೆ ನಿವಾರಣೆ, ಸಾಂಕ್ರಾಮಿಕ ರೋಗಗಳ ಸಮರ್ಥ ನಿರ್ವಹಣೆ ಇತ್ಯಾದಿ ಕ್ರಮಗಳಿಗೆ ಈ ಪ್ರಶಸ್ತಿ ಸಂದಿದೆ.

ಸಂಪನ್ಮೂಲ ಕ್ರೋಢೀಕರಣಕ್ಕೆ ಒತ್ತು ನೀಡಿ ಶೇ.90ಕ್ಕೂ ಜಾಸ್ತಿ ತೆರಿಗೆ ವಸೂಲು, ಆನ್‌ಲೈನ್‌ ತೆರಿಗೆ ಪಾವತಿಗೆ ಕ್ರಮ, ತ್ಯಾಜ್ಯ ನಿರ್ವಹಣೆಯಲ್ಲಿ ದೇಶಕ್ಕೆ ಮಾದರಿ, ಗ್ರಾಮೀಣ ಭಾಗದಲ್ಲಿ ಎಂಆರ್‌ಎಫ್ ಘಟಕ ಸ್ಥಾಪನೆ, ಆನ್‌ಲೈನ್‌ ಮೂಲಕ ಶಾಲಾ, ಕಾಲೇಜು ವಿದ್ಯಾರ್ಥಿಗಳಿಗೆ ನೀಟ್‌, ಸಿಇಟಿ ಕೋಚಿಂಗ್‌ ಮೂಲಕ ಎಸೆಸೆಲ್ಸಿ, ಪಿಯುಸಿಯಲ್ಲಿ ಅಗ್ರಸ್ಥಾನ ಪಡೆದದ್ದು, ಸಂಜೀವಿನಿ ಸಂಘಗಳ ಮೂಲಕ ಹಡಿಲು ಭೂಮಿ ಕೃಷಿ, ಇತ್ಯಾದಿ ಕ್ರಮಗಳಿಗೆ ನಾನಾಜಿ ದೇಶ್‌ಮುಖ್‌ ಸರ್ವೋತ್ತಮ ಪಂಚಾಯತ್‌ ಪ್ರಶಸ್ತಿಗೆ 3ನೇ ಅತ್ಯುತ್ತಮ ಜಿಲ್ಲೆಯಾಗಿ ಆಯ್ಕೆಯಾಗಿದೆ ಎಂದು ಜಿ.ಪಂ. ಸಹಾಯಕ ಕಾರ್ಯದರ್ಶಿ ಪ್ರಶಾಂತ್‌ ಅವರು ಮಾಹಿತಿ ನೀಡಿದರು.

ಮಡಿಕೇರಿ ತಾಲೂಕಿನ ಗಾಳಿಬೀಡು ಗ್ರಾ.ಪಂ.ಗೆ ಪ್ರಥಮ ಸ್ಥಾನ ಬಂದಿದ್ದು, 1 ಕೋ.ರೂ. ಬಹುಮಾನ ಪಡೆಯಲಿದೆ.

 

Vishwa News 24

Recent Posts

ಬೆಂಗಳೂರು: ಯಾವುದೇ ಕಾರಣಕ್ಕೂ ಫುಟ್‌ಪಾತ್ ತೆರವು ಕಾರ್ಯಾಚರಣೆ ನಿಲ್ಲಲ್ಲ : ಸಚಿವ ಕೃಷ್ಣ ಬೈರೇಗೌಡ ಖಡಕ್‌ ಸೂಚನೆ – vishwanews24

ಬೆಂಗಳೂರು: ಫುಟ್‌ಪಾತ್ ತೆರವು ಕಾರ್ಯಾಚರಣೆ ನಿಲ್ಲಲ್ಲ : ಸಚಿವ ಕೃಷ್ಣ ಬೈರೇಗೌಡ ಖಡಕ್‌ ಸೂಚನೆ ಬೆಂಗಳೂರು: ಬೀದಿಬದಿ ವ್ಯಾಪಾರಿಗಳಿಗೆ ಬೆಂಗಳೂರು…

43 minutes ago

ಬೆಳಗಾವಿ: ಅಣಬೆ ಸೇವಿಸಿ ಒಂದೇ ಕುಟುಂಬದ 9 ಮಂದಿ ಅಸ್ವಸ್ಥ – vishwanews24

ಅಣಬೆ ಬೆಳೆದಿದ್ದ ಹೊಲಕ್ಕೆ ಅದರ ಮಾಲೀಕರಿಂದ ಕ್ರಿಮಿನಾಶಕ ಔಷಧಿ ಸಿಂಪಡಿಕೆ.. ಕೀಟನಾಶಕದ ಅಂಶ ಅಣಬೆಯೊಳಗೆ ಸೇರಿ ವಿಷವಾಗಿ ಮಾರ್ಪಟ್ಟು ಇಡೀ…

1 hour ago

ಉಡುಪಿ: ವಂಚನೆ ಹಾಗೂ ಬ್ಲ್ಯಾಕ್‌ಮೇಲ್ ಪ್ರಕರಣ ; ಆರೋಪಿ ಝೀನತ್ ವಿರುದ್ಧ ಮತ್ತೆರಡು ಹೊಸ ಪ್ರಕರಣ ದಾಖಲು – vishwanews24

ಉಡುಪಿ: ವಂಚನೆ ಹಾಗೂ ಬ್ಲ್ಯಾಕ್‌ಮೇಲ್ ಪ್ರಕರಣ ; ಆರೋಪಿ ಝೀನತ್ ವಿರುದ್ಧ ಮತ್ತೆರಡು ಹೊಸ ಪ್ರಕರಣ ದಾಖಲು ಉಡುಪಿ:ಬಹುಕೋಟಿ ವಂಚನೆ…

2 hours ago

ಆಗುಂಬೆ ಕೊಲೆ ಪ್ರಕರಣ: ಆರೋಪಿಗೆ ಜೀವಾವಧಿ ಶಿಕ್ಷೆ – ಮಹತ್ವದ ತೀರ್ಪು ನೀಡಿದ ಶಿವಮೊಗ್ಗ ನ್ಯಾಯಾಲಯ – vishwanews24

ಆಗುಂಬೆ ಕೊಲೆ ಪ್ರಕರಣ: ಆರೋಪಿಗೆ ಜೀವಾವಧಿ ಶಿಕ್ಷೆ - ಮಹತ್ವದ ತೀರ್ಪು ನೀಡಿದ ಶಿವಮೊಗ್ಗ ನ್ಯಾಯಾಲಯ ತೀರ್ಥಹಳ್ಳಿ: ಲೈಂಗಿಕ ದೌರ್ಜನ್ಯಕ್ಕೆ…

3 hours ago

ಅಯೋಧ್ಯೆ ಪ್ರಕರಣದ ಹಿನ್ನೆಲೆ : ರಾಜ್ಯದ ಎಲ್ಲಾ ಮುಜುರಾಯಿ ದೇಗುಲಗಳಲ್ಲಿ ಕಡ್ಡಾಯ ಸಿಸಿಟಿವಿ ಅಳವಡಿಕೆಗೆ ಸಿಎಂ ಆದೇಶ – vishwanews24

ರಾಮ ಮಂದಿರದಲ್ಲಿ ನಡೆದ ಘಟನೆ ಅವಮಾನಕರ; ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ನೋವುಂಟು ಮಾಡಿದೆ :ಸಿಎಂ  ಡಿ.ಕೆ. ಶಿ ಬೆಳಗಾವಿ: ಮುಜರಾಯಿ…

3 hours ago

ಷೇರು ಮಾರುಕಟ್ಟೆ ಹೂಡಿಕೆ ಹೆಸರಿನಲ್ಲಿ 10 ಲಕ್ಷ ರೂ.ವಂಚನೆ ಪ್ರಕರಣ: ಮಹಿಳೆ ಬಂಧನ – vishwanews24

ಷೇರು ಮಾರುಕಟ್ಟೆ ಹೂಡಿಕೆ ಹೆಸರಿನಲ್ಲಿ 10 ಲಕ್ಷ ರೂ.ವಂಚನೆ ಪ್ರಕರಣ: ಮುಂಬಯಲ್ಲಿ ಉಡುಪಿ ಮೂಲದ ಮಹಿಳೆ ಬಂಧನ ಮುಂಬೈ,: ಷೇರು…

3 hours ago