ಉಡುಪಿ: ಶಿಕ್ಷಣ, ಆರ್ಥಿಕ ಕ್ರೋಢೀಕರಣ ಸಹಿತ ವಿವಿಧ ವಿಷಯ ಗಳಲ್ಲಿನ ವಿಶೇಷ ಸಾಧನೆಗಾಗಿ ಕೇಂದ್ರ ಸರಕಾರದ ಪಂಚಾಯತ್ರಾಜ್ ಇಲಾಖೆಯ ರಾಷ್ಟ್ರೀಯ ಪುರಸ್ಕಾರಕ್ಕೆ ಉಡುಪಿ ಜಿ.ಪಂ. ಆಯ್ಕೆಯಾಗಿದೆ.
ಡಿ.11ರಂದು ದಿಲ್ಲಿಯಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದ್ದು, ಜಿ.ಪಂ. ಸಿಇಒ ಪ್ರತೀಕ್ ಬಾಯಲ್ 2 ಕೋ.ರೂ. ನಗದಿನ ಪ್ರಶಸ್ತಿ ಸ್ವೀಕರಿಸುವರು.ಈ ಹಣವನ್ನು ಯಾವ ಉದ್ದೇಶಕ್ಕೆ ಬಳಸಬೇಕು ಎಂಬುದರ ಮಾರ್ಗ ಸೂಚಿಯನ್ನು ಇಲಾಖೆ ನೀಡಲಿದೆ. ಈ ಮೂಲಕ ಉಡುಪಿಯು ದೇಶದ ಸರ್ವೋತ್ತಮ ಜಿ.ಪಂ. ಹೆಗ್ಗಳಿಕೆಗೆ ಪಾತ್ರವಾಗಿದೆ.
ಉಡುಪಿಯ ಸಾಧನೆಯ ಹಾದಿ
ಉಡುಪಿಯು 155 ಗ್ರಾ. ಪಂ. ಹೊಂದಿದ್ದು, ಪ್ರತಿ ಸೋಮವಾರ ಜಿಪಂ ಸಿಇಒ ಗ್ರಾ.ಪಂ. ಗಳ ನೀರು ಪೂರೈಕೆ ಸಹಿತ ವಿವಿಧ ಕಾರ್ಯಯೋಜನೆ ಅನುಷ್ಠಾನ ಏಜೆನ್ಸಿಗಳೊಂದಿಗೆ ಪ್ರಗತಿ ಪರಿಶೀಲಿಸುತ್ತಿದ್ದರು. ಬಳಿಕ ಸಮಸ್ಯೆಗಳ ಪರಿಹಾರಕ್ಕೆ ತಿಂಗಳಿಗೆ 2 ಬಾರಿ ಜಿಲ್ಲಾಧಿಕಾರಿಗಳ ಜತೆ ಸಭೆ, ಇಲಾಖೆಗಳ ಜತೆ ಸಮನ್ವಯ, ಅಭಿವೃದ್ಧಿಗಾಗಿ ಕಳೆದ ವರ್ಷದ ಸೂಚ್ಯಂಕದ ಆಧಾರದಲ್ಲಿ ಯೋಜನೆ ರೂಪಿಸಿ ಅನುಷ್ಠಾನ,ವಾರ್ಡ್ ಸಭೆ, ಗ್ರಾಮ ಸಭೆ, ಜಮಾಬಂದಿಗೆ ಒತ್ತು, ಶಾಲಾಭಿವೃದ್ಧಿಗೆ ಪ್ರತ್ಯೇಕ ಸಮಿತಿ ರಚನೆ, ಶೈಕ್ಷಣಿಕ ಕಾರ್ಯಕ್ರಮ ಅನುಷ್ಠಾನ ಗುಣಮಟ್ಟ ಪರಿಶೀಲನೆ, ಶಿಶು, ಗರ್ಭಿಣಿ ಮರಣ ಸಂಭವಿಸ ದಂತೆ ನಿಗಾ, ಅಪೌಷ್ಟಿಕತೆ ನಿವಾರಣೆ, ಸಾಂಕ್ರಾಮಿಕ ರೋಗಗಳ ಸಮರ್ಥ ನಿರ್ವಹಣೆ ಇತ್ಯಾದಿ ಕ್ರಮಗಳಿಗೆ ಈ ಪ್ರಶಸ್ತಿ ಸಂದಿದೆ.
ಸಂಪನ್ಮೂಲ ಕ್ರೋಢೀಕರಣಕ್ಕೆ ಒತ್ತು ನೀಡಿ ಶೇ.90ಕ್ಕೂ ಜಾಸ್ತಿ ತೆರಿಗೆ ವಸೂಲು, ಆನ್ಲೈನ್ ತೆರಿಗೆ ಪಾವತಿಗೆ ಕ್ರಮ, ತ್ಯಾಜ್ಯ ನಿರ್ವಹಣೆಯಲ್ಲಿ ದೇಶಕ್ಕೆ ಮಾದರಿ, ಗ್ರಾಮೀಣ ಭಾಗದಲ್ಲಿ ಎಂಆರ್ಎಫ್ ಘಟಕ ಸ್ಥಾಪನೆ, ಆನ್ಲೈನ್ ಮೂಲಕ ಶಾಲಾ, ಕಾಲೇಜು ವಿದ್ಯಾರ್ಥಿಗಳಿಗೆ ನೀಟ್, ಸಿಇಟಿ ಕೋಚಿಂಗ್ ಮೂಲಕ ಎಸೆಸೆಲ್ಸಿ, ಪಿಯುಸಿಯಲ್ಲಿ ಅಗ್ರಸ್ಥಾನ ಪಡೆದದ್ದು, ಸಂಜೀವಿನಿ ಸಂಘಗಳ ಮೂಲಕ ಹಡಿಲು ಭೂಮಿ ಕೃಷಿ, ಇತ್ಯಾದಿ ಕ್ರಮಗಳಿಗೆ ನಾನಾಜಿ ದೇಶ್ಮುಖ್ ಸರ್ವೋತ್ತಮ ಪಂಚಾಯತ್ ಪ್ರಶಸ್ತಿಗೆ 3ನೇ ಅತ್ಯುತ್ತಮ ಜಿಲ್ಲೆಯಾಗಿ ಆಯ್ಕೆಯಾಗಿದೆ ಎಂದು ಜಿ.ಪಂ. ಸಹಾಯಕ ಕಾರ್ಯದರ್ಶಿ ಪ್ರಶಾಂತ್ ಅವರು ಮಾಹಿತಿ ನೀಡಿದರು.
ಮಡಿಕೇರಿ ತಾಲೂಕಿನ ಗಾಳಿಬೀಡು ಗ್ರಾ.ಪಂ.ಗೆ ಪ್ರಥಮ ಸ್ಥಾನ ಬಂದಿದ್ದು, 1 ಕೋ.ರೂ. ಬಹುಮಾನ ಪಡೆಯಲಿದೆ.
ದುಬೈನಲ್ಲಿ ರಸ್ತೆ ಅಪಘಾತ : ಕಿನ್ನಿಗೋಳಿಯ ಯುವತಿ ಸಾವು ಮಂಗಳೂರು: ದುಬೈನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು, ಕಳೆದ ಕೆಲವು…
ಬಿಜೆಪಿ ಸಂಘಪರಿವಾರವು ದೇಶದ ಕಾನೂನಿಗೆ ವಿರುದ್ಧವಾಗಿದೆ: ರಿಯಾಝ್ ಫರಂಗಿಪೇಟೆ ಗಲಭೆಕೋರರ ವಿರುದ್ಧದ ಪ್ರಕರಣ ಹಿಂಪಡೆದ ಕ್ರಮಕ್ಕೆ SDPI ತೀವ್ರ ವಿರೋಧ…
ಬೆಳ್ತಂಗಡಿ : ಜೂನ್ 1 ರಿಂದ ಪ್ರವಾಸಿಗರಿಗೆ ಟ್ರೆಕ್ಕಿಂಗ್, ಜಲಪಾತಗಳ ಮೇಲಿನ ನಿರ್ಬಂಧ ತೆರವು ಅರಣ್ಯ ಇಲಾಖೆಯಿಂದ ಪ್ರವಾಸಿಗರಿಗೆ ಕಟ್ಟುನಿಟ್ಟಿನ…
50 ಸಾವಿರ ರೂ. ವರೆಗಿನ ಬೆಳೆ ಸಾಲ ಮನ್ನಾ ಘೋಷಿಸಿದ ವಿಜಯ್ ಚೆನ್ನೈ: ರೈತರಿಗೆ ಭಾರಿ ನೆರವು ಘೋಷಿಸಿರುವ ತಮಿಳುನಾಡು…
ನಟ ಧರ್ಮೇಂದ್ರಗೆ ಮರಣೋತ್ತರ ಪದ್ಮವಿಭೂಷಣ: ಪ್ರಶಸ್ತಿ ಸ್ವೀಕರಿಸಿದ ಪತ್ನಿ ಹೇಮಾ ಮಾಲಿನಿ ನವದೆಹಲಿ: ದಿವಂಗತ ಬಾಲಿವುಡ್ ನಟ ಧರ್ಮೇಂದ್ರ ಅವರಿಗೆ…
ಪುತ್ತೂರು: ವಿದ್ಯುತ್ ಶಾಕ್ ಹೊಡೆದು ಯುವಕ ಮೃತ್ಯು ಪುತ್ತೂರು : ನಿಡಳ್ಳಿ ಗ್ರಾಮದ ಬೋಳುಂಬುಡೆಯಲ್ಲಿ ವಿದ್ಯುತ್ ಶಾಕ್ ಹೊಡೆದು ನೆಲಕ್ಕೆ…