ಕೋಲ್ಕತ್ತಾ,– ದೇಶದ ಹಿತಾಸಕ್ತಿ ದೃಷ್ಟಿಯಿಂದಾಗಿ ನರೇಂದ್ರ ಮೋದಿ ಅವರನ್ನು ಪ್ರಧಾನಮಂತ್ರಿ ಕುರ್ಚಿಯಿಂದಲ್ಲ ರಾಜಕೀಯ ಜೀವನದಿಂದಲೇ ಹೊರ ಹೋಗಬೇಕು ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇಂದು ನಡೆದ ಚುನಾವಣಾ ರ್ಯಾಲಿಯಲ್ಲಿ ಮಾತನಾಡಿದ ಅವರು, ನಾಲ್ಕೂವರೆ ವರ್ಷ ನರೇಂದ್ರ ಮೋದಿ ಅವರಿಗೆ ಈ ದೇಶದ ರೈತರು ನೆನಪಾಗಲಿಲ್ಲ. ಮಧ್ಯಮ ವರ್ಗದ ಕಷ್ಟಗಳು ಅರಿವಾಗಲಿಲ್ಲ. ವಿದೇಶಗಳಲ್ಲಿ ಪ್ರವಾಸ ಮಾಡುವುದರಲ್ಲೇ ಅವರು ಹೆಚ್ಚು ಸಮಯ ಕಳೆದರು.
ಚುನಾವಣೆ ಬಂದು ಬಾಗಿಲು ಬಡಿದಾಗ ಇದ್ದಕ್ಕಿದ್ದ ಹಾಗೆ ಮೋದಿ ಅವರಿಗೆ ದೇಶ ನೆನಪಾಗಿದೆ. ತಮ್ಮ ಸುಳ್ಳುಗಳ ಮೂಲಕ ವಿರೋಧ ಪಕ್ಷಗಳನ್ನು ಜರಿದು ಅಭಿವೃದ್ಧಿಯಾಗದೇ ಇರುವುದಕ್ಕೆ ವಿಪಕ್ಷಗಳನ್ನೇ ಗುರಿ ಮಾಡಿದ್ದಾರೆ ಮತ್ತು ವಿವಿಧ ರೀತಿಯ ಬೆದರಿಕೆಗಳನ್ನುಒಡ್ಡುವ ಪ್ರಯತ್ನ ಮಾಡಿದರು.
ದೇಶದಲ್ಲಿ ಸುಳ್ಳು ಹೇಳುವ ಸ್ಪರ್ಧೆಗೆ ಪ್ರಶಸ್ತಿ ನೀಡುವುದಾದರೆ ನರೇಂದ್ರ ಮೋದಿ ಅವರಿಗೆ ಪ್ರಥಮ ಬಹುಮಾನ ನೀಡಬೇಕು ಎಂದು ಮಮತಾ ಕಿಡಿಕಾರಿದರು.ಈ ಚುನಾವಣೆಯಲ್ಲಿ ಸುಳ್ಳಿನ ಮಾತುಗಳು ನಡೆಯುವುದಿಲ್ಲ.
ರೈತರು ಆತ್ಮಹತ್ಯೆ ಮಾಡಿಕೊಂಡಾಗ ಅವರ ಕಷ್ಟ ಕೇಳದ ಮೋದಿ ಅವರು ನೋಟು ಅಮಾನೀಕರಣದಿಂದ ಜನರು ತೊಂದರೆಯಲ್ಲಿದ್ದಾಗ ನೆರವಿಗೆ ಬಾರದ ಮೋದಿ ಅವರು ಸುಳ್ಳಿನ ಭಾಷಣ ಮಾಡುವ ಮೂಲಕ ಜನರನ್ನು ವಂಚಿಸಲು ಸಾಧ್ಯ ಇಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…