ಕೋಲ್ಕತ್ತಾ,– ದೇಶದ ಹಿತಾಸಕ್ತಿ ದೃಷ್ಟಿಯಿಂದಾಗಿ ನರೇಂದ್ರ ಮೋದಿ ಅವರನ್ನು ಪ್ರಧಾನಮಂತ್ರಿ ಕುರ್ಚಿಯಿಂದಲ್ಲ ರಾಜಕೀಯ ಜೀವನದಿಂದಲೇ ಹೊರ ಹೋಗಬೇಕು ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇಂದು ನಡೆದ ಚುನಾವಣಾ ರ್ಯಾಲಿಯಲ್ಲಿ ಮಾತನಾಡಿದ ಅವರು, ನಾಲ್ಕೂವರೆ ವರ್ಷ ನರೇಂದ್ರ ಮೋದಿ ಅವರಿಗೆ ಈ ದೇಶದ ರೈತರು ನೆನಪಾಗಲಿಲ್ಲ. ಮಧ್ಯಮ ವರ್ಗದ ಕಷ್ಟಗಳು ಅರಿವಾಗಲಿಲ್ಲ. ವಿದೇಶಗಳಲ್ಲಿ ಪ್ರವಾಸ ಮಾಡುವುದರಲ್ಲೇ ಅವರು ಹೆಚ್ಚು ಸಮಯ ಕಳೆದರು.
ಚುನಾವಣೆ ಬಂದು ಬಾಗಿಲು ಬಡಿದಾಗ ಇದ್ದಕ್ಕಿದ್ದ ಹಾಗೆ ಮೋದಿ ಅವರಿಗೆ ದೇಶ ನೆನಪಾಗಿದೆ. ತಮ್ಮ ಸುಳ್ಳುಗಳ ಮೂಲಕ ವಿರೋಧ ಪಕ್ಷಗಳನ್ನು ಜರಿದು ಅಭಿವೃದ್ಧಿಯಾಗದೇ ಇರುವುದಕ್ಕೆ ವಿಪಕ್ಷಗಳನ್ನೇ ಗುರಿ ಮಾಡಿದ್ದಾರೆ ಮತ್ತು ವಿವಿಧ ರೀತಿಯ ಬೆದರಿಕೆಗಳನ್ನುಒಡ್ಡುವ ಪ್ರಯತ್ನ ಮಾಡಿದರು.
ದೇಶದಲ್ಲಿ ಸುಳ್ಳು ಹೇಳುವ ಸ್ಪರ್ಧೆಗೆ ಪ್ರಶಸ್ತಿ ನೀಡುವುದಾದರೆ ನರೇಂದ್ರ ಮೋದಿ ಅವರಿಗೆ ಪ್ರಥಮ ಬಹುಮಾನ ನೀಡಬೇಕು ಎಂದು ಮಮತಾ ಕಿಡಿಕಾರಿದರು.ಈ ಚುನಾವಣೆಯಲ್ಲಿ ಸುಳ್ಳಿನ ಮಾತುಗಳು ನಡೆಯುವುದಿಲ್ಲ.
ರೈತರು ಆತ್ಮಹತ್ಯೆ ಮಾಡಿಕೊಂಡಾಗ ಅವರ ಕಷ್ಟ ಕೇಳದ ಮೋದಿ ಅವರು ನೋಟು ಅಮಾನೀಕರಣದಿಂದ ಜನರು ತೊಂದರೆಯಲ್ಲಿದ್ದಾಗ ನೆರವಿಗೆ ಬಾರದ ಮೋದಿ ಅವರು ಸುಳ್ಳಿನ ಭಾಷಣ ಮಾಡುವ ಮೂಲಕ ಜನರನ್ನು ವಂಚಿಸಲು ಸಾಧ್ಯ ಇಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನನ್ನ ಜೀವನದ ಕೊನೆ ಘಟ್ಟದವರೆಗೂ ಮೈತ್ರಿ ಮುಂದುವರೆಸಿಕೊಂಡು ಹೋಗುತ್ತೇನೆ : ಹೆಚ್ಡಿಡಿ ಬೆಂಗಳೂರು: ಒಂದು ರಾಜ್ಯಸಭೆ ಸ್ಥಾನದಿಂದ ನನ್ನ, ಮೋದಿ …
ಜೂನ್ 15 ರಿಂದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ : ಕೇರಳ ಸರ್ಕಾರ ಘೋಷಣೆ ತಿರುವನಂತಪುರಂ: ಕೇರಳ ಸರ್ಕಾರ ಮಹತ್ವದ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ಐವರು ಆರೋಪಿಗಳ ಜಾಮೀನು ರದ್ದು ಅರ್ಜಿ ವಜಾಗೊಳಿಸಿದ ಹೈಕೋರ್ಟ್ ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ…
ಮನೆ ಕೆಲಸಕ್ಕೆ ಸೇರಿದ್ದ ದಂಪತಿಯಿಂದ ಕಳ್ಳತನ ; 25 ಲಕ್ಷ ಹಣ ಕದ್ದು ನೇಪಾಳಕ್ಕೆ ಎಸ್ಕೇಪ್ ಆಗುತ್ತಿದ್ದ ವೇಳೆ ಅರೆಸ್ಟ್ ಬೆಂಗಳೂರು:…
ಮಂಗಳೂರು: ಜೋಕಟ್ಟೆ ಫ್ಲೈಓವರ್ ಬಳಿ ಅಪರಿಚಿತ ಯುವಕನ ಶವ ಪತ್ತೆ ಮಂಗಳೂರು: ಪಣಂಬೂರಿನ ಜೋಕಟ್ಟೆ ಬಳಿ ಬುಧವಾರ ಯುವಕನೊಬ್ಬನ ಶವ…
ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸಿ, ಗೋಹತ್ಯೆ, ಗೋಮಾಂಸ ರಫ್ತನ್ನು ನಿಷೇಧಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ…