Featured

ದೇಶದ ಹಿತಾಸಕ್ತಿ ದೃಷ್ಟಿಯಿಂದಾಗಿ ನರೇಂದ್ರ ಮೋದಿ ಅವರನ್ನು ರಾಜಕೀಯ ಜೀವನದಿಂದಲೇ ಹೊರ ಹೋಗಬೇಕು : ಮಮತಾ ಬ್ಯಾನರ್ಜಿ – Vishwanews24

ಕೋಲ್ಕತ್ತಾ,– ದೇಶದ ಹಿತಾಸಕ್ತಿ ದೃಷ್ಟಿಯಿಂದಾಗಿ ನರೇಂದ್ರ ಮೋದಿ ಅವರನ್ನು ಪ್ರಧಾನಮಂತ್ರಿ ಕುರ್ಚಿಯಿಂದಲ್ಲ ರಾಜಕೀಯ ಜೀವನದಿಂದಲೇ ಹೊರ ಹೋಗಬೇಕು ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇಂದು ನಡೆದ ಚುನಾವಣಾ ರ್ಯಾಲಿಯಲ್ಲಿ ಮಾತನಾಡಿದ ಅವರು, ನಾಲ್ಕೂವರೆ ವರ್ಷ ನರೇಂದ್ರ ಮೋದಿ ಅವರಿಗೆ ಈ ದೇಶದ ರೈತರು ನೆನಪಾಗಲಿಲ್ಲ. ಮಧ್ಯಮ ವರ್ಗದ ಕಷ್ಟಗಳು ಅರಿವಾಗಲಿಲ್ಲ. ವಿದೇಶಗಳಲ್ಲಿ ಪ್ರವಾಸ ಮಾಡುವುದರಲ್ಲೇ ಅವರು ಹೆಚ್ಚು ಸಮಯ ಕಳೆದರು.

ಚುನಾವಣೆ ಬಂದು ಬಾಗಿಲು ಬಡಿದಾಗ ಇದ್ದಕ್ಕಿದ್ದ ಹಾಗೆ ಮೋದಿ ಅವರಿಗೆ ದೇಶ ನೆನಪಾಗಿದೆ. ತಮ್ಮ ಸುಳ್ಳುಗಳ ಮೂಲಕ ವಿರೋಧ ಪಕ್ಷಗಳನ್ನು ಜರಿದು ಅಭಿವೃದ್ಧಿಯಾಗದೇ ಇರುವುದಕ್ಕೆ ವಿಪಕ್ಷಗಳನ್ನೇ ಗುರಿ ಮಾಡಿದ್ದಾರೆ ಮತ್ತು ವಿವಿಧ ರೀತಿಯ ಬೆದರಿಕೆಗಳನ್ನುಒಡ್ಡುವ ಪ್ರಯತ್ನ ಮಾಡಿದರು.

ದೇಶದಲ್ಲಿ ಸುಳ್ಳು ಹೇಳುವ ಸ್ಪರ್ಧೆಗೆ ಪ್ರಶಸ್ತಿ ನೀಡುವುದಾದರೆ ನರೇಂದ್ರ ಮೋದಿ ಅವರಿಗೆ ಪ್ರಥಮ ಬಹುಮಾನ ನೀಡಬೇಕು ಎಂದು ಮಮತಾ ಕಿಡಿಕಾರಿದರು.ಈ ಚುನಾವಣೆಯಲ್ಲಿ ಸುಳ್ಳಿನ ಮಾತುಗಳು ನಡೆಯುವುದಿಲ್ಲ.

ರೈತರು ಆತ್ಮಹತ್ಯೆ ಮಾಡಿಕೊಂಡಾಗ ಅವರ ಕಷ್ಟ ಕೇಳದ ಮೋದಿ ಅವರು ನೋಟು ಅಮಾನೀಕರಣದಿಂದ ಜನರು ತೊಂದರೆಯಲ್ಲಿದ್ದಾಗ ನೆರವಿಗೆ ಬಾರದ ಮೋದಿ ಅವರು ಸುಳ್ಳಿನ ಭಾಷಣ ಮಾಡುವ ಮೂಲಕ ಜನರನ್ನು ವಂಚಿಸಲು ಸಾಧ್ಯ ಇಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

9 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

10 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

10 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

10 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

11 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

11 hours ago