Featured

ದೇಶದ ಹಿತಾಸಕ್ತಿ ದೃಷ್ಟಿಯಿಂದಾಗಿ ನರೇಂದ್ರ ಮೋದಿ ಅವರನ್ನು ರಾಜಕೀಯ ಜೀವನದಿಂದಲೇ ಹೊರ ಹೋಗಬೇಕು : ಮಮತಾ ಬ್ಯಾನರ್ಜಿ – Vishwanews24

ಕೋಲ್ಕತ್ತಾ,– ದೇಶದ ಹಿತಾಸಕ್ತಿ ದೃಷ್ಟಿಯಿಂದಾಗಿ ನರೇಂದ್ರ ಮೋದಿ ಅವರನ್ನು ಪ್ರಧಾನಮಂತ್ರಿ ಕುರ್ಚಿಯಿಂದಲ್ಲ ರಾಜಕೀಯ ಜೀವನದಿಂದಲೇ ಹೊರ ಹೋಗಬೇಕು ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇಂದು ನಡೆದ ಚುನಾವಣಾ ರ್ಯಾಲಿಯಲ್ಲಿ ಮಾತನಾಡಿದ ಅವರು, ನಾಲ್ಕೂವರೆ ವರ್ಷ ನರೇಂದ್ರ ಮೋದಿ ಅವರಿಗೆ ಈ ದೇಶದ ರೈತರು ನೆನಪಾಗಲಿಲ್ಲ. ಮಧ್ಯಮ ವರ್ಗದ ಕಷ್ಟಗಳು ಅರಿವಾಗಲಿಲ್ಲ. ವಿದೇಶಗಳಲ್ಲಿ ಪ್ರವಾಸ ಮಾಡುವುದರಲ್ಲೇ ಅವರು ಹೆಚ್ಚು ಸಮಯ ಕಳೆದರು.

ಚುನಾವಣೆ ಬಂದು ಬಾಗಿಲು ಬಡಿದಾಗ ಇದ್ದಕ್ಕಿದ್ದ ಹಾಗೆ ಮೋದಿ ಅವರಿಗೆ ದೇಶ ನೆನಪಾಗಿದೆ. ತಮ್ಮ ಸುಳ್ಳುಗಳ ಮೂಲಕ ವಿರೋಧ ಪಕ್ಷಗಳನ್ನು ಜರಿದು ಅಭಿವೃದ್ಧಿಯಾಗದೇ ಇರುವುದಕ್ಕೆ ವಿಪಕ್ಷಗಳನ್ನೇ ಗುರಿ ಮಾಡಿದ್ದಾರೆ ಮತ್ತು ವಿವಿಧ ರೀತಿಯ ಬೆದರಿಕೆಗಳನ್ನುಒಡ್ಡುವ ಪ್ರಯತ್ನ ಮಾಡಿದರು.

ದೇಶದಲ್ಲಿ ಸುಳ್ಳು ಹೇಳುವ ಸ್ಪರ್ಧೆಗೆ ಪ್ರಶಸ್ತಿ ನೀಡುವುದಾದರೆ ನರೇಂದ್ರ ಮೋದಿ ಅವರಿಗೆ ಪ್ರಥಮ ಬಹುಮಾನ ನೀಡಬೇಕು ಎಂದು ಮಮತಾ ಕಿಡಿಕಾರಿದರು.ಈ ಚುನಾವಣೆಯಲ್ಲಿ ಸುಳ್ಳಿನ ಮಾತುಗಳು ನಡೆಯುವುದಿಲ್ಲ.

ರೈತರು ಆತ್ಮಹತ್ಯೆ ಮಾಡಿಕೊಂಡಾಗ ಅವರ ಕಷ್ಟ ಕೇಳದ ಮೋದಿ ಅವರು ನೋಟು ಅಮಾನೀಕರಣದಿಂದ ಜನರು ತೊಂದರೆಯಲ್ಲಿದ್ದಾಗ ನೆರವಿಗೆ ಬಾರದ ಮೋದಿ ಅವರು ಸುಳ್ಳಿನ ಭಾಷಣ ಮಾಡುವ ಮೂಲಕ ಜನರನ್ನು ವಂಚಿಸಲು ಸಾಧ್ಯ ಇಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Vishwa News 24

Recent Posts

ರಾಜ್ಯಸಭೆ ಸ್ಥಾನದಿಂದ ನನ್ನ ಮೋದಿ ಅವರ ಸಂಬಂಧ ಮುಕ್ತಾಯ ಆಗೋದಿಲ್ಲ : ಹೆಚ್.ಡಿ ದೇವೇಗೌಡ – vishwanews24

ನನ್ನ ಜೀವನದ ಕೊನೆ ಘಟ್ಟದವರೆಗೂ ಮೈತ್ರಿ ಮುಂದುವರೆಸಿಕೊಂಡು ಹೋಗುತ್ತೇನೆ : ಹೆಚ್‌ಡಿಡಿ ಬೆಂಗಳೂರು: ಒಂದು ರಾಜ್ಯಸಭೆ ಸ್ಥಾನದಿಂದ ನನ್ನ, ಮೋದಿ …

4 hours ago

ಜೂನ್ 15 ರಿಂದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ : ಕೇರಳ ಸರ್ಕಾರ ಘೋಷಣೆ – vishwanews24

ಜೂನ್ 15 ರಿಂದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ : ಕೇರಳ ಸರ್ಕಾರ ಘೋಷಣೆ ತಿರುವನಂತಪುರಂ: ಕೇರಳ ಸರ್ಕಾರ ಮಹತ್ವದ…

4 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ : ಐವರು ಆರೋಪಿಗಳ ಜಾಮೀನು ರದ್ದು ಅರ್ಜಿ ವಜಾಗೊಳಿಸಿದ ಹೈಕೋರ್ಟ್ – vishwanews24

ರೇಣುಕಾಸ್ವಾಮಿ ಕೊಲೆ ಪ್ರಕರಣ : ಐವರು ಆರೋಪಿಗಳ ಜಾಮೀನು ರದ್ದು ಅರ್ಜಿ ವಜಾಗೊಳಿಸಿದ ಹೈಕೋರ್ಟ್ ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ…

5 hours ago

ಮನೆ ಕೆಲಸಕ್ಕೆ ಸೇರಿದ್ದ ದಂಪತಿಯಿಂದ ಕಳ್ಳತನ ; 25 ಲಕ್ಷ ಹಣ ಕದ್ದು ನೇಪಾಳಕ್ಕೆ ಎಸ್ಕೇಪ್ ಆಗುತ್ತಿದ್ದ ವೇಳೆ ಅರೆಸ್ಟ್ – vishwanews24

ಮನೆ ಕೆಲಸಕ್ಕೆ ಸೇರಿದ್ದ ದಂಪತಿಯಿಂದ ಕಳ್ಳತನ ; 25 ಲಕ್ಷ ಹಣ ಕದ್ದು ನೇಪಾಳಕ್ಕೆ ಎಸ್ಕೇಪ್ ಆಗುತ್ತಿದ್ದ ವೇಳೆ ಅರೆಸ್ಟ್ ಬೆಂಗಳೂರು:…

5 hours ago

ಮಂಗಳೂರು: ಜೋಕಟ್ಟೆ ಫ್ಲೈಓವರ್ ಬಳಿ ಅಪರಿಚಿತ ಯುವಕನ ಶವ ಪತ್ತೆ – vishwanews24

ಮಂಗಳೂರು: ಜೋಕಟ್ಟೆ ಫ್ಲೈಓವರ್ ಬಳಿ ಅಪರಿಚಿತ ಯುವಕನ ಶವ ಪತ್ತೆ ಮಂಗಳೂರು: ಪಣಂಬೂರಿನ ಜೋಕಟ್ಟೆ ಬಳಿ ಬುಧವಾರ ಯುವಕನೊಬ್ಬನ ಶವ…

5 hours ago

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸಿ : ಪ್ರಧಾನಿಗೆ ಮುಸ್ಲಿಂ ಬಾಂಧವ್ಯ ವೇದಿಕೆ ಮನವಿ – vishwanews24

ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸಿ, ಗೋಹತ್ಯೆ, ಗೋಮಾಂಸ ರಫ್ತನ್ನು ನಿಷೇಧಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ…

6 hours ago