ಬೆಂಗಳೂರು: ‘ನಿಮಗೆ ದೇಶಪ್ರೇಮೆ, ಜನರ ಮೇಲೆ ಹಾಗೂ ಸಂವಿಧಾನದ ಮೇಲೆ ವಿಶ್ವಾಸವಿದ್ದರೆ ಈಗ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವವರಿಗೆ ಯಾವುದೇ ಸ್ಥಾನ ಕೊಡಬೇಡಿ’ ಎಂದು ಸಚಿವ ಯು.ಟಿ.ಖಾದರ್ ಬಿಜೆಪಿಗೆ ಸವಾಲು ಹಾಕಿದರು.
‘ನಮ್ಮ ದೇಶದ ಮೇಲೆ ದಾಳಿ ಮಾಡಿದವರಿಗೆ ಕೆಂಪು ಹಾಸು ಹಾಸುತ್ತೀರಿ. ಪಾಕ್ ಪ್ರಧಾನಿಯ ಜೊತೆಗೆ ಬಿರಿಯಾನಿ ಊಟ ಮಾಡುತ್ತೀರಿ. ಆದರೆ ನಮಗೆ ಮಾತ್ರ ನಮ್ಮವರ ಜತೆ ಮತನಾಡಲು ಅವಕಾಶ ಕೊಡದೆ ತಡೆಯುತ್ತೀರಿ. ಅಧಿಕಾರಕ್ಕಾಗಿ ಏನೆಲ್ಲಾ ಮಾಡುತ್ತಿದ್ದೀರಿ. ಇಂದು ಆತ್ಮಸಾಕ್ಷಿಯನ್ನು ಪ್ರಶ್ನಿಸಿಕೊಳ್ಳಿ’ ಎಂದು ಖಾದರ್ ತಿರುಗೇಟು ನೀಡಿದರು.
‘ಮುಂಬೈನಲ್ಲಿರುವವರನ್ನು ಅತೃಪ್ತರು ಎಂದು ಬಿಂಬಿಸಿ ಮಾಧ್ಯಮದವರು ತಪ್ಪು ಮಾಡುತ್ತಿದ್ದಾರೆ. ವಾಸ್ತವವಾಗಿ ಅವರೆಲ್ಲರೂ ತೃಪ್ತರು. ಅವರು ಬೆಂಗಳೂರಿಗೆ ವಾಪಸ್ ಬಂದ ಮೇಲೆ ಎಲ್ಲವೂ ಬಯಲಾಗುತ್ತದೆ’ ಎಂದು ಛೇಡಿಸಿದರು.
‘ನಮ್ಮ ಶಾಸಕರಿಗೆ ಬಂದೂಕು ತೋರಿಸಿ ಬೆದರಿಸುತ್ತಿದ್ದೀರಿ. ಬಿಜೆಪಿಯ ರಾಜ್ಯ ಮತ್ತು ಕೇಂದ್ರ ನಾಯಕರು ಇದರಲ್ಲಿ ಶಾಮೀಲಾಗಿದ್ದಾರೆ. ಅನುಭವಿ ವಕೀಲರಿಂದ ಅವರಿಗೆ ಮಾರ್ಗದರ್ಶನ ನೀಡಿ, ಆಮಿಷ ಒಡ್ಡಿ ಬೇರೆಡೆಗೆ ಕಳುಹಿಸಿದ್ದೀರಿ’ ಎಂದು ಆರೋಪಿಸಿದರು.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…