ಬೆಂಗಳೂರು: ‘ನಿಮಗೆ ದೇಶಪ್ರೇಮೆ, ಜನರ ಮೇಲೆ ಹಾಗೂ ಸಂವಿಧಾನದ ಮೇಲೆ ವಿಶ್ವಾಸವಿದ್ದರೆ ಈಗ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವವರಿಗೆ ಯಾವುದೇ ಸ್ಥಾನ ಕೊಡಬೇಡಿ’ ಎಂದು ಸಚಿವ ಯು.ಟಿ.ಖಾದರ್ ಬಿಜೆಪಿಗೆ ಸವಾಲು ಹಾಕಿದರು.
‘ನಮ್ಮ ದೇಶದ ಮೇಲೆ ದಾಳಿ ಮಾಡಿದವರಿಗೆ ಕೆಂಪು ಹಾಸು ಹಾಸುತ್ತೀರಿ. ಪಾಕ್ ಪ್ರಧಾನಿಯ ಜೊತೆಗೆ ಬಿರಿಯಾನಿ ಊಟ ಮಾಡುತ್ತೀರಿ. ಆದರೆ ನಮಗೆ ಮಾತ್ರ ನಮ್ಮವರ ಜತೆ ಮತನಾಡಲು ಅವಕಾಶ ಕೊಡದೆ ತಡೆಯುತ್ತೀರಿ. ಅಧಿಕಾರಕ್ಕಾಗಿ ಏನೆಲ್ಲಾ ಮಾಡುತ್ತಿದ್ದೀರಿ. ಇಂದು ಆತ್ಮಸಾಕ್ಷಿಯನ್ನು ಪ್ರಶ್ನಿಸಿಕೊಳ್ಳಿ’ ಎಂದು ಖಾದರ್ ತಿರುಗೇಟು ನೀಡಿದರು.
‘ಮುಂಬೈನಲ್ಲಿರುವವರನ್ನು ಅತೃಪ್ತರು ಎಂದು ಬಿಂಬಿಸಿ ಮಾಧ್ಯಮದವರು ತಪ್ಪು ಮಾಡುತ್ತಿದ್ದಾರೆ. ವಾಸ್ತವವಾಗಿ ಅವರೆಲ್ಲರೂ ತೃಪ್ತರು. ಅವರು ಬೆಂಗಳೂರಿಗೆ ವಾಪಸ್ ಬಂದ ಮೇಲೆ ಎಲ್ಲವೂ ಬಯಲಾಗುತ್ತದೆ’ ಎಂದು ಛೇಡಿಸಿದರು.
‘ನಮ್ಮ ಶಾಸಕರಿಗೆ ಬಂದೂಕು ತೋರಿಸಿ ಬೆದರಿಸುತ್ತಿದ್ದೀರಿ. ಬಿಜೆಪಿಯ ರಾಜ್ಯ ಮತ್ತು ಕೇಂದ್ರ ನಾಯಕರು ಇದರಲ್ಲಿ ಶಾಮೀಲಾಗಿದ್ದಾರೆ. ಅನುಭವಿ ವಕೀಲರಿಂದ ಅವರಿಗೆ ಮಾರ್ಗದರ್ಶನ ನೀಡಿ, ಆಮಿಷ ಒಡ್ಡಿ ಬೇರೆಡೆಗೆ ಕಳುಹಿಸಿದ್ದೀರಿ’ ಎಂದು ಆರೋಪಿಸಿದರು.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…