ನವದೆಹಲಿ,: “ದೇಶಭಕ್ತಿ ಎಂಬುದು ಹಿಂದೂಗಳ ಮೂಲ ಗುಣವಾಗಿದೆ” ಎಂದು ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ.
ಜೆ.ಕೆ.ಬಜಾಜ್ ಹಾಗೂ ಎಂ.ಡಿ.ಶ್ರೀನಿವಾಸ್ ಅವರು ಬರೆದಿರುವ, ‘ಮೇಕಿಂಗ್ ಎ ಹಿಂದೂ ಪೇಟ್ರಿಯೆಟ್: ಬ್ಯಾಕ್ಗ್ರೌಂಡ್ ಆಫ್ ಗಾಂಧೀಜಿಸ್ ಹಿಂದ್ ಸ್ವರಾಜ್’ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದ ಅವರು, “ಹಿಂದೂಗಳ ಮೂಲ ಗುಣ ದೇಶಭಕ್ತಿ. ಹಿಂದು ಯಾವತ್ತಿಗೂ ಭಾರತದ ವಿರೋಧಿಯಾಗಲು ಸಾಧ್ಯವಿಲ್ಲ. ಒಬ್ಬ ತನ್ನ ದೇಶವನ್ನು ಪ್ರೀತಿಸುತ್ತಾನೆ ಎಂದರೆ ಆತ ಕೇವಲ ಭೂಮಿಯನ್ನು ಮಾತ್ರ ಅಲ್ಲ. ಜನ, ನದಿ ಸೇರಿದಂತೆ ಸಂಸ್ಕೃತಿ ಸಂಪ್ರದಾಯ ಎಲ್ಲವನ್ನೂ ಕೂಡಾ ಪ್ರೀತಿಸುತ್ತಾನೆ ಎಂದು ಅರ್ಥ” ಎಂದು ಹೇಳಿದ್ದಾರೆ.
ಗಾಂಧಿ ಅವರನ್ನು ಸಂಘವು ತನ್ನವರೆಂದು ಬಿಂಬಿಸಿಕೊಳ್ಳುವ ಪ್ರಯತ್ನಿಸುತ್ತಿದೆ ಎನ್ನುವ ವದಂತಿಗಳಿಗೆ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, “ಈ ಮಾತು ಸತ್ಯವಲ್ಲ. ಯಾರೂ ಕೂಡಾ ಅಂತಹ ಮಹಾನ್ ಚೇತನಗಳನ್ನು ತಮ್ಮವರೆಂದು ಸೀಮಿತಗೊಳಿಸಲು ಆಗುವುದಿಲ್ಲ” ಎಂದು ತಿಳಿಸಿದ್ದಾರೆ.
ಗಾಂಧಿ ಅವರ ಬಗೆಗಿನ ಸಂಶೋಧನಾ ದಾಖಲೆ ಪುಸ್ತಕದ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, “ನನ್ನ ಪಾಲಿಗೆ ಧರ್ಮ ಹಾಗೂ ದೇಶಪ್ರೇಮ ಬೇರೆಬೇರೆಯಲ್ಲ. ತಾಯ್ನಾಡಿನ ಮೇಲಿನ ಪ್ರೀತಿ ಆಧ್ಯಾತ್ಮದಿಂದ ಧರ್ಮ ಹಾಗೂ ದೇಶಪ್ರೇಮ ಹುಟ್ಟಿಕೊಂಡಿದೆ ಎಂದು ಗಾಂಧಿ ಹೇಳುತ್ತಿದ್ದರು” ಎಂದು ಹೇಳಿದ್ದಾರೆ.
ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ : ಶೇಖ್ ಹಸೀನಾ ನವದೆಹಲಿ,:ನನ್ನನ್ನು ಬಂಧಿಸಬಹುದು ಅಥವಾ ಕೊಲ್ಲಬಹುದು, ಯಾವುದಕ್ಕೂ ನಾನು…
ಕೊಟೇಶ್ವರ ರಸ್ತೆ ಅಪಘಾತ : ಅತಿವೇಗ ಅಜಾಗರೂಕತೆಯ ಚಾಲನೆ ; ಬೈಕ್ ಸವಾರನ ಸಾವಿಗೆ ಕಾರಣನಾದ ಲಾರಿ ಚಾಲಕನ ಬಂಧನ ಉಡುಪಿ:…
ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆ ಬೆಂಗಳೂರು/ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಕೊನೆಗೂ ದಿನಾಂಕ…
ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್ಪಾಲ್ ಯಾದವ್ಗೆ 3 ತಿಂಗಳ ಜೈಲು ಶಿಕ್ಷೆ ನವದೆಹಲಿ: ಚೆಕ್ ಬೌನ್ಸ್…
ರೈಲಿನಲ್ಲಿ ಸಂಚರಿಸುವ ಮುನ್ನ ಹೊಸ ನಿಯಮ ತಿಳ್ಕೊಳ್ಳಿ : ಇನ್ಮುಂದೆ ಮೊಬೈಲ್ನಲ್ಲಿ ಟಿಕಟ್ ತೋರಿಸಿದರೆ ದಂಡ ಫಿಕ್ಸ್ ನವದೆಹಲಿ :ಡಿಜಿಟಲ್…
ಸುರತ್ಕಲ್ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ ಮಂಗಳೂರು: ನಗರದ ಸುರತ್ಕಲ್ ಪೊಲೀಸ್…