ನವದೆಹಲಿ,: “ದೇಶಭಕ್ತಿ ಎಂಬುದು ಹಿಂದೂಗಳ ಮೂಲ ಗುಣವಾಗಿದೆ” ಎಂದು ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ.
ಜೆ.ಕೆ.ಬಜಾಜ್ ಹಾಗೂ ಎಂ.ಡಿ.ಶ್ರೀನಿವಾಸ್ ಅವರು ಬರೆದಿರುವ, ‘ಮೇಕಿಂಗ್ ಎ ಹಿಂದೂ ಪೇಟ್ರಿಯೆಟ್: ಬ್ಯಾಕ್ಗ್ರೌಂಡ್ ಆಫ್ ಗಾಂಧೀಜಿಸ್ ಹಿಂದ್ ಸ್ವರಾಜ್’ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದ ಅವರು, “ಹಿಂದೂಗಳ ಮೂಲ ಗುಣ ದೇಶಭಕ್ತಿ. ಹಿಂದು ಯಾವತ್ತಿಗೂ ಭಾರತದ ವಿರೋಧಿಯಾಗಲು ಸಾಧ್ಯವಿಲ್ಲ. ಒಬ್ಬ ತನ್ನ ದೇಶವನ್ನು ಪ್ರೀತಿಸುತ್ತಾನೆ ಎಂದರೆ ಆತ ಕೇವಲ ಭೂಮಿಯನ್ನು ಮಾತ್ರ ಅಲ್ಲ. ಜನ, ನದಿ ಸೇರಿದಂತೆ ಸಂಸ್ಕೃತಿ ಸಂಪ್ರದಾಯ ಎಲ್ಲವನ್ನೂ ಕೂಡಾ ಪ್ರೀತಿಸುತ್ತಾನೆ ಎಂದು ಅರ್ಥ” ಎಂದು ಹೇಳಿದ್ದಾರೆ.
ಗಾಂಧಿ ಅವರನ್ನು ಸಂಘವು ತನ್ನವರೆಂದು ಬಿಂಬಿಸಿಕೊಳ್ಳುವ ಪ್ರಯತ್ನಿಸುತ್ತಿದೆ ಎನ್ನುವ ವದಂತಿಗಳಿಗೆ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, “ಈ ಮಾತು ಸತ್ಯವಲ್ಲ. ಯಾರೂ ಕೂಡಾ ಅಂತಹ ಮಹಾನ್ ಚೇತನಗಳನ್ನು ತಮ್ಮವರೆಂದು ಸೀಮಿತಗೊಳಿಸಲು ಆಗುವುದಿಲ್ಲ” ಎಂದು ತಿಳಿಸಿದ್ದಾರೆ.
ಗಾಂಧಿ ಅವರ ಬಗೆಗಿನ ಸಂಶೋಧನಾ ದಾಖಲೆ ಪುಸ್ತಕದ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, “ನನ್ನ ಪಾಲಿಗೆ ಧರ್ಮ ಹಾಗೂ ದೇಶಪ್ರೇಮ ಬೇರೆಬೇರೆಯಲ್ಲ. ತಾಯ್ನಾಡಿನ ಮೇಲಿನ ಪ್ರೀತಿ ಆಧ್ಯಾತ್ಮದಿಂದ ಧರ್ಮ ಹಾಗೂ ದೇಶಪ್ರೇಮ ಹುಟ್ಟಿಕೊಂಡಿದೆ ಎಂದು ಗಾಂಧಿ ಹೇಳುತ್ತಿದ್ದರು” ಎಂದು ಹೇಳಿದ್ದಾರೆ.
ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ ಬೆಂಗಳೂರು,: ಕರ್ನಾಟಕದ ಕಾಂಗ್ರೆಸ್ ಪಕ್ಷದ ಉಸ್ತುವಾರಿ ಸುರ್ಜೇವಾಲ…
ಕಾರವಾರ - ಮಡಗಾಂವ್ ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ ಶಿರಸಿ: ಕಾರವಾರ ಮತ್ತು ಮಡಗಾಂವ್ ನಡುವೆ ಸಂಚರಿಸುತ್ತಿದ್ದ ವಿಶೇಷ…
ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ, ಸ್ಪರ್ಧೆಯಲ್ಲೂ ಇಲ್ಲ: ರಾಜಣ್ಣ ಖಡಕ್ ಹೇಳಿಕೆ ಬೆಂಗಳೂರು: ನೂತನ ಮುಖ್ಯಮಂತ್ರಿ ಡಿ.…
ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ; ₹23.67 ಲಕ್ಷ ಮೌಲ್ಯದ ಸೊತ್ತು ವಶ…
ಉಡುಪಿ : ಯುವಕ ನಾಪತ್ತೆ ಉಡುಪಿ : ಮೂಲತಃ ನೇಪಾಳ ದೇಶದವರಾದ, ಪ್ರಸ್ತುತ ಮಣಿಪಾಲದ ಲಕ್ಷಿö್ಮÃಶ ನಗರದಲ್ಲಿರುವ ಹೋಟೆಲ್ ಒಂದರಲ್ಲಿ…
ಉಡುಪಿ: ಜೂನ್ 9 ರಿಂದ ಕರ್ನಾಟಕದಾದ್ಯಂತ ಖಾಸಗಿ ಬಸ್ ಪ್ರಯಾಣ ದರ ಏರಿಕೆ : ಕುಯಿಲಾಡಿ ಸುರೇಶ್ ನಾಯಕ್ ಉಡುಪಿ…