Featured

ದೇಶಭಕ್ತ ಸಂಘಟನೆ ಆರ್.ಎಸ್.ಎಸ್.‌‌ ಭಯೋತ್ಪಾದಕರು ಎಂದ ಸಿದ್ಧರಾಮಯ್ಯ ನೈಜ ಭಯೋತ್ಪಾದಕ; ಸಿದ್ಧು ಮಾನಸಿಕ ಚಿಕಿತ್ಸೆಯ ವೆಚ್ಚ ಭರಿಸಲು ಜಿಲ್ಲಾ ಬಿಜೆಪಿ ಸಿದ್ದ: ಕುಯಿಲಾಡಿ ಸುರೇಶ್ ನಾಯಕ್ -Vishwanews24

*ದೇಶಭಕ್ತ ಸಂಘಟನೆ ಆರ್.ಎಸ್.ಎಸ್.‌‌ ಭಯೋತ್ಪಾದಕರು ಎಂದ ಸಿದ್ಧರಾಮಯ್ಯ ನೈಜ ಭಯೋತ್ಪಾದಕ; ಸಿದ್ಧು ಮಾನಸಿಕ ಚಿಕಿತ್ಸೆಯ ವೆಚ್ಚ ಭರಿಸಲು ಜಿಲ್ಲಾ ಬಿಜೆಪಿ ಸಿದ್ದ: ಕುಯಿಲಾಡಿ ಸುರೇಶ್ ನಾಯಕ್

ದೇಶಭಕ್ತ ಸೇವಾ ಸಂಘಟನೆ ಆರ್.ಎಸ್.ಎಸ್. ಭಯೋತ್ಪಾದಕರು ಎಂದಿರುವ ಮಾಜಿ ಸಿ.ಎಂ. ಸಿದ್ಧರಾಮಯ್ಯ ಹೇಳಿಕೆಯನ್ನು ಉಡುಪಿ ಜಿಲ್ಲಾ ಬಿಜೆಪಿ ತೀವ್ರವಾಗಿ ಖಂಡಿಸಿದೆ.

ತನ್ನ ಆಡಳಿತಾವಧಿಯಲ್ಲಿ ಅನೇಕ ಹಿಂದೂ ಕಾರ್ಯಕರ್ತರ ಮಾರಣ ಹೋಮ ನಡೆದರೂ‌ ಸುಮ್ಮನಿದ್ದು,‌ ಪಿ.ಎಫ್.ಐ., ಎಸ್.ಡಿ.ಪಿ.ಐ.‌ ನಂತಹ ದೇಶ ವಿರೋಧಿ ಸಂಘಟನೆಗಳ‌ ಕಾರ್ಯಕರ್ತರ‌ ಪ್ರಕರಣಗಳನ್ನು ಹಿಂಪಡೆದು, ರಾಜ್ಯಾದ್ಯಂತ ವ್ಯವಸ್ಥಿತ ಪಿತೂರಿಯೊಂದಿಗೆ ಗಲಭೆ ಸೃಷ್ಠಿಸಲು ಮೂಲ ಕಾರಣರಾಗಿರುವ‌ ಸಿದ್ಧರಾಮಯ್ಯ ಓರ್ವ‌ ನೈಜ ಭಯೋತ್ಪಾದಕ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದ್ದಾರೆ.

ಕಾಂಗ್ರೆಸ್ ಪಕ್ಷದ ನಿರಂತರ ಸೋಲಿನಿಂದ ಕಂಗೆಟ್ಟು, ಡಿಕೆಶಿ‌ ಜೊತೆಗಿನ ಒಳ ಜಗಳದಿಂದ ಮೂಲೆ ಗುಂಪಾಗುವ ಭಯದಿಂದ ಹತಾಶೆಗೊಂಡು‌ ಮಾನಸಿಕ ಸ್ಥಿಮಿತ ಕಳೆದುಕೊಂಡಿರುವ ಸಿದ್ಧುಗೆ‌ ತುರ್ತು ಚಿಕಿತ್ಸೆಯ ಅವಶ್ಯಕತೆ ಇದ್ದು, ಅದರ ವೆಚ್ಚವನ್ನು ಭರಿಸಲು ಜಿಲ್ಲಾ ಬಿಜೆಪಿ ಸಿದ್ದವಿದೆ ಎಂದಿರುವ ಕುಯಿಲಾಡಿ, ಕೇಸರಿ ಕಂಡರೆ ಮಾರುದ್ದ ಓಡುವ ಹಿಂದೂ ವಿರೋಧಿ ಸಿದ್ಧರಾಮಯ್ಯ‌ಗೆ ಆರ್.ಎಸ್.ಎಸ್. ಬಗ್ಗೆ ಮಾತನಾಡುವ ನೈತಿಕತೆ ಇದೆಯೇ ಎಂದು ಪ್ರಶ್ನಿಸಿದ್ದಾರೆ.

ಸಿದ್ಧರಾಮಯ್ಯ ಹೆಸರಿಗೆ ಮಾತ್ರ ಸಮಾಜವಾದಿ, ಆಚರಣೆಯಲ್ಲಿ ಬರೇ ಮಜಾವಾದಿ. ನನ್ನ ಹೆಸರಲ್ಲೂ ರಾಮನಿದ್ದಾನೆ ಎಂಬ‌ ಬೂಟಾಟಿಕೆಯ ಮಾತನ್ನಾಡುವ ಸಿದ್ಧರಾಮಯ್ಯ ವಾಸ್ತವಿಕವಾಗಿ ಹಿಂದುವೇ ಅಲ್ಲ. ಬೇಲ್ ಮೇಲೆ ತಿರುಗಾಡುತ್ತಿರುವ ಕಾಂಗ್ರೆಸ್ ವರಿಷ್ಠೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ರಾಜ್ಯಾಧ್ಯಕ್ಷ ಡಿ.ಕೆ. ಶಿವಕುಮಾರ್ ಹಗರಣಗಳ ಸರಮಾಲೆಯಲ್ಲಿ ಸಿಲುಕಿ ಕಾನೂನಾತ್ಮಕ ಇ.ಡಿ. ವಿಚಾರಣೆಯನ್ನು‌ ಎದುರಿಸುತ್ತಿರುವುದು ಕಾಂಗ್ರೆಸ್ಸಿಗೆ ನುಂಗಲಾರದ ತುತ್ತೆನಿಸಿದೆ. ಸಿದ್ದರಾಮಯ್ಯ ವರ್ತನೆಯು ಅವಕಾಶದ ಸದುಪಯೋಗವನ್ನು ಪಡೆದು‌ ಕಾಂಗ್ರೆಸ್‌ ಪಕ್ಷವನ್ನು ಮುಗಿಸಿಯೇ ತೀರುತ್ತೇನೆ ಎಂಬಂತಿದೆ.

ಜನರ ತೆರಿಗೆ ಹಣದಿಂದ ಒಂದೇ ವರ್ಗದ ಓಲೈಕೆಗಾಗಿ ಬಿಟ್ಟಿ ಭಾಗ್ಯಗಳನ್ನು ನೀಡಿ, ಖಜಾನೆಯನ್ನು ಬರಿದಾಗಿಸಿ ಅತಿ ಹೆಚ್ಚು ಸಾಲ ಮಾಡಿದ ಮುಖ್ಯಮಂತ್ರಿ ಎಂಬ ‌ಕುಖ್ಯಾತಿಗೆ ಪಾತ್ರವಾಗಿರುವ ಸಿದ್ಧರಾಮಯ್ಯ ಒಡೆದು ಆಳುವ ನೀತಿಯಲ್ಲೂ ನಿಸ್ಸೀಮರು. ಸದಾ ಧರ್ಮ ಜಾತಿಗಳನ್ನು ಒಡೆಯುವ ಹುನ್ನಾರದಲ್ಲಿ ನಿರತರಾಗಿರುವ ಸಿದ್ಧರಾಮಯ್ಯ‌ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಹೀನಾಯವಾಗಿ ಸೋತು ಬಾದಾಮಿಯಲ್ಲಿ ಬೆರಳೆಣಿಕೆ ಮತಗಳಿಂದ ಗೆದ್ದು ಕೊಂಚ ಮರ್ಯಾದೆ ಉಳಿಸಿಕೊಂಡಿದ್ದರೂ ತನ್ನ ಅಧಿಕ ಪ್ರಸಂಗಿತನದಿಂದಾಗಿ‌ ಶಾಶ್ವತವಾಗಿ ಮೂಲೆಗುಂಪಾಗುವ ದಿನ ದೂರವಿಲ್ಲ.

ಆನೆ ನಡೆದಾಡುವಾಗ ಶ್ವಾನಗಳು ಬೊಗಳುತ್ತಾ ದಿಕ್ಕೆಟ್ಟು ಓಡಿದಂತೆ ಆರ್.ಎಸ್.ಎಸ್ ಎಂಬ ಬೃಹತ್ ಸೇವಾ ಸಂಘಟನೆಯ ಬಗ್ಗೆ ಕ್ಷುಲ್ಲಕ ಮಾತನ್ನಾಡುವುದು‌ ಬೌದ್ಧಿಕ ದಿವಾಳಿತನದ ಪರಮಾವಧಿಯಲ್ಲದೆ ಮತ್ತೇನಿಲ್ಲ. ಇದೆಲ್ಲದರ ಅರಿವಿದ್ದರೂ ಕೇವಲ ವೋಟ್ ಬ್ಯಾಂಕಿನ ದುರಾಸೆಯಿಂದ ಒಂದೇ ವರ್ಗದ ಓಲೈಕೆ ರಾಜಕಾರಣದ ಅಪೀಮನ್ನು ತಲೆಯೊಳಗೆ ತುಂಬಿಕೊಂಡಿರುವ ಸಿದ್ಧರಾಮಯ್ಯ ಭವಿಷ್ಯದಲ್ಲಿ ಚಡ್ಡಿ ಲಂಗೋಟಿ ಸುಡುವ ಕಾಯಕವನ್ನು ಆಯ್ದುಕೊಂಡಿರುವುದು ಹಾಸ್ಯಾಸ್ಪದ ಎಂದು ಕುಯಿಲಾಡಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ – vishwanews24

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…

12 seconds ago

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ – vishwanews24

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…

34 minutes ago

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ – vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…

38 minutes ago

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

2 days ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

2 days ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

2 days ago