ದೇಶಭಕ್ತ ಸೇವಾ ಸಂಘಟನೆ ಆರ್.ಎಸ್.ಎಸ್. ಭಯೋತ್ಪಾದಕರು ಎಂದಿರುವ ಮಾಜಿ ಸಿ.ಎಂ. ಸಿದ್ಧರಾಮಯ್ಯ ಹೇಳಿಕೆಯನ್ನು ಉಡುಪಿ ಜಿಲ್ಲಾ ಬಿಜೆಪಿ ತೀವ್ರವಾಗಿ ಖಂಡಿಸಿದೆ.
ತನ್ನ ಆಡಳಿತಾವಧಿಯಲ್ಲಿ ಅನೇಕ ಹಿಂದೂ ಕಾರ್ಯಕರ್ತರ ಮಾರಣ ಹೋಮ ನಡೆದರೂ ಸುಮ್ಮನಿದ್ದು, ಪಿ.ಎಫ್.ಐ., ಎಸ್.ಡಿ.ಪಿ.ಐ. ನಂತಹ ದೇಶ ವಿರೋಧಿ ಸಂಘಟನೆಗಳ ಕಾರ್ಯಕರ್ತರ ಪ್ರಕರಣಗಳನ್ನು ಹಿಂಪಡೆದು, ರಾಜ್ಯಾದ್ಯಂತ ವ್ಯವಸ್ಥಿತ ಪಿತೂರಿಯೊಂದಿಗೆ ಗಲಭೆ ಸೃಷ್ಠಿಸಲು ಮೂಲ ಕಾರಣರಾಗಿರುವ ಸಿದ್ಧರಾಮಯ್ಯ ಓರ್ವ ನೈಜ ಭಯೋತ್ಪಾದಕ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದ್ದಾರೆ.
ಕಾಂಗ್ರೆಸ್ ಪಕ್ಷದ ನಿರಂತರ ಸೋಲಿನಿಂದ ಕಂಗೆಟ್ಟು, ಡಿಕೆಶಿ ಜೊತೆಗಿನ ಒಳ ಜಗಳದಿಂದ ಮೂಲೆ ಗುಂಪಾಗುವ ಭಯದಿಂದ ಹತಾಶೆಗೊಂಡು ಮಾನಸಿಕ ಸ್ಥಿಮಿತ ಕಳೆದುಕೊಂಡಿರುವ ಸಿದ್ಧುಗೆ ತುರ್ತು ಚಿಕಿತ್ಸೆಯ ಅವಶ್ಯಕತೆ ಇದ್ದು, ಅದರ ವೆಚ್ಚವನ್ನು ಭರಿಸಲು ಜಿಲ್ಲಾ ಬಿಜೆಪಿ ಸಿದ್ದವಿದೆ ಎಂದಿರುವ ಕುಯಿಲಾಡಿ, ಕೇಸರಿ ಕಂಡರೆ ಮಾರುದ್ದ ಓಡುವ ಹಿಂದೂ ವಿರೋಧಿ ಸಿದ್ಧರಾಮಯ್ಯಗೆ ಆರ್.ಎಸ್.ಎಸ್. ಬಗ್ಗೆ ಮಾತನಾಡುವ ನೈತಿಕತೆ ಇದೆಯೇ ಎಂದು ಪ್ರಶ್ನಿಸಿದ್ದಾರೆ.
ಸಿದ್ಧರಾಮಯ್ಯ ಹೆಸರಿಗೆ ಮಾತ್ರ ಸಮಾಜವಾದಿ, ಆಚರಣೆಯಲ್ಲಿ ಬರೇ ಮಜಾವಾದಿ. ನನ್ನ ಹೆಸರಲ್ಲೂ ರಾಮನಿದ್ದಾನೆ ಎಂಬ ಬೂಟಾಟಿಕೆಯ ಮಾತನ್ನಾಡುವ ಸಿದ್ಧರಾಮಯ್ಯ ವಾಸ್ತವಿಕವಾಗಿ ಹಿಂದುವೇ ಅಲ್ಲ. ಬೇಲ್ ಮೇಲೆ ತಿರುಗಾಡುತ್ತಿರುವ ಕಾಂಗ್ರೆಸ್ ವರಿಷ್ಠೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ರಾಜ್ಯಾಧ್ಯಕ್ಷ ಡಿ.ಕೆ. ಶಿವಕುಮಾರ್ ಹಗರಣಗಳ ಸರಮಾಲೆಯಲ್ಲಿ ಸಿಲುಕಿ ಕಾನೂನಾತ್ಮಕ ಇ.ಡಿ. ವಿಚಾರಣೆಯನ್ನು ಎದುರಿಸುತ್ತಿರುವುದು ಕಾಂಗ್ರೆಸ್ಸಿಗೆ ನುಂಗಲಾರದ ತುತ್ತೆನಿಸಿದೆ. ಸಿದ್ದರಾಮಯ್ಯ ವರ್ತನೆಯು ಅವಕಾಶದ ಸದುಪಯೋಗವನ್ನು ಪಡೆದು ಕಾಂಗ್ರೆಸ್ ಪಕ್ಷವನ್ನು ಮುಗಿಸಿಯೇ ತೀರುತ್ತೇನೆ ಎಂಬಂತಿದೆ.
ಜನರ ತೆರಿಗೆ ಹಣದಿಂದ ಒಂದೇ ವರ್ಗದ ಓಲೈಕೆಗಾಗಿ ಬಿಟ್ಟಿ ಭಾಗ್ಯಗಳನ್ನು ನೀಡಿ, ಖಜಾನೆಯನ್ನು ಬರಿದಾಗಿಸಿ ಅತಿ ಹೆಚ್ಚು ಸಾಲ ಮಾಡಿದ ಮುಖ್ಯಮಂತ್ರಿ ಎಂಬ ಕುಖ್ಯಾತಿಗೆ ಪಾತ್ರವಾಗಿರುವ ಸಿದ್ಧರಾಮಯ್ಯ ಒಡೆದು ಆಳುವ ನೀತಿಯಲ್ಲೂ ನಿಸ್ಸೀಮರು. ಸದಾ ಧರ್ಮ ಜಾತಿಗಳನ್ನು ಒಡೆಯುವ ಹುನ್ನಾರದಲ್ಲಿ ನಿರತರಾಗಿರುವ ಸಿದ್ಧರಾಮಯ್ಯ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಹೀನಾಯವಾಗಿ ಸೋತು ಬಾದಾಮಿಯಲ್ಲಿ ಬೆರಳೆಣಿಕೆ ಮತಗಳಿಂದ ಗೆದ್ದು ಕೊಂಚ ಮರ್ಯಾದೆ ಉಳಿಸಿಕೊಂಡಿದ್ದರೂ ತನ್ನ ಅಧಿಕ ಪ್ರಸಂಗಿತನದಿಂದಾಗಿ ಶಾಶ್ವತವಾಗಿ ಮೂಲೆಗುಂಪಾಗುವ ದಿನ ದೂರವಿಲ್ಲ.
ಆನೆ ನಡೆದಾಡುವಾಗ ಶ್ವಾನಗಳು ಬೊಗಳುತ್ತಾ ದಿಕ್ಕೆಟ್ಟು ಓಡಿದಂತೆ ಆರ್.ಎಸ್.ಎಸ್ ಎಂಬ ಬೃಹತ್ ಸೇವಾ ಸಂಘಟನೆಯ ಬಗ್ಗೆ ಕ್ಷುಲ್ಲಕ ಮಾತನ್ನಾಡುವುದು ಬೌದ್ಧಿಕ ದಿವಾಳಿತನದ ಪರಮಾವಧಿಯಲ್ಲದೆ ಮತ್ತೇನಿಲ್ಲ. ಇದೆಲ್ಲದರ ಅರಿವಿದ್ದರೂ ಕೇವಲ ವೋಟ್ ಬ್ಯಾಂಕಿನ ದುರಾಸೆಯಿಂದ ಒಂದೇ ವರ್ಗದ ಓಲೈಕೆ ರಾಜಕಾರಣದ ಅಪೀಮನ್ನು ತಲೆಯೊಳಗೆ ತುಂಬಿಕೊಂಡಿರುವ ಸಿದ್ಧರಾಮಯ್ಯ ಭವಿಷ್ಯದಲ್ಲಿ ಚಡ್ಡಿ ಲಂಗೋಟಿ ಸುಡುವ ಕಾಯಕವನ್ನು ಆಯ್ದುಕೊಂಡಿರುವುದು ಹಾಸ್ಯಾಸ್ಪದ ಎಂದು ಕುಯಿಲಾಡಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…