Featured

ದೇಶವನ್ನು ಆಳುವ ಅರ್ಹತೆ ಕಾಂಗ್ರೆಸ್‌ಗೆ ಮಾತ್ರ ಇದೆ : ಅಮೃತ್ ಶೆಣೈ – Vishwanews24

ಬಂಟ್ವಾಳ, : ತೀವ್ರಗಾಮಿಗಳಿಗೆ ಮಾತ್ರ ಬಿಜೆಪಿ ಟಿಕೆಟ್ ನೀಡುತ್ತಿದೆ. ಅನಂತ್ ಕುಮಾರ್, ಶೋಭಾ ಕರಂದ್ಲಾಜೆ, ನಳಿನ್ ಕುಮಾರ್ ಕಟೀಲು, ಪ್ರತಾಪ್ ಸಿಂಹ ಇದರ ಬ್ರಾಂಡ್‍ಗಳು. ಕಲ್ಲು ಒಡೆಯುವ, ಬೆಂಕಿ ಹಚ್ಚುವ ಮೂಲಕ ಕೋಮು ಸೌಹಾರ್ದತೆಯನ್ನು ಹಾಳು ಮಾಡುವುದೇ ಇವರ ಉದ್ದೇಶ. ಇವರಿಗೆ ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿ ಬೇಕಾಗಿಲ್ಲ ಎಂದು ಎಐಸಿಸಿಯ ಸದಸ್ಯ ಅಮೃತ್ ಶೆಣೈ ಹೇಳಿದ್ದಾರೆ.

ಹಾಸನ- ಗುಂಡ್ಯ- ಬಿ.ಸಿ.ರೋಡ್ ಅಪೂರ್ಣ ಹೆದ್ದಾರಿಯ ಅಸ್ಥವ್ಯಸ್ಥೆಯನ್ನು ವಿರೋಧಿಸಿ ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿಯ ಆಶ್ರಯದಲ್ಲಿ ನಡೆಯುತ್ತಿರುವ ಕಾಲ್ನಡಿಗೆ ಜಾಥಾ ಮಂಗಳವಾರ ಸಂಜೆ ಮಾಣಿ ಜಂಕ್ಷನ್‌ಗೆ ತಳುಪಿದ ಸಂದರ್ಭ ನಡೆದ ಪ್ರತಿಭಟನಾ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು. ಮೋದಿ ಎರಡನೇ ಬಾರಿ ಪ್ರಧಾನಿಯಾಗುವ ಸಾಧ್ಯತೆಯೇ ಇಲ್ಲ. ಈ ಬಾರಿ ಬಿಜೆಪಿ ಸರಕಾರವನ್ನು ಜನರು ಮನೆಗೆ ಕಳುಹಿಸುತ್ತಾರೆ. ದೇಶವನ್ನು ಆಳುವ ಅರ್ಹತೆ ಕಾಂಗ್ರೆಸ್‌ಗೆ ಮಾತ್ರ ಇದೆ ಎಂದು ಅವರು ಹೇಳಿದರು.

ನಾವೆಲ್ಲರೂ ಹಿಂದು-ಒಂದು ಹೇಳುವವರು ಮೊದಲು ಒಟ್ಟಿಗೆ ಕುಳಿತು ಊಟ ಮಾಡಲಿ. ಕಾಂಗ್ರೆಸ್‌ನದ್ದು ಒಂದೇ ನಿಲುವು. ಬಿಜೆಪಿಯದ್ದು ದ್ವಂದ ನಿಲುವು. ಆಯ ರಾಜ್ಯಗಳಲ್ಲಿ ಒಂದೊಂದು ನೀತಿಯನ್ನು ಬಿಜೆಪಿ ಅನುಸರಿಸುತ್ತಿದೆ ಎಂದ ಅವರು, ನಮಗೆ ಇಷ್ಟವಾದ ಆಹಾರ ಸೇವಿಸುವುದು ನಮ್ಮ ಹಕ್ಕು. ಇದನ್ನು ಸಂವಿಧಾನವೇ ಎತ್ತಿ ಹಿಡಿದಿದೆ ಎಂದರು.

30 ವರ್ಷಗಳಿಂದ ಮಂಗಳೂರು ಲೋಕಸಭಾ ಸದಸ್ಯರಾದವರ ಸಾಧನೆ ಏನೆಂದು ಪ್ರಶ್ನೆ ಮಾಡಿದರೆ ಸಿಗುವ ಉತ್ತರ ಶೂನ್ಯ. ಕಾಂಗ್ರೆಸ್ ಲೋಕಸಭಾ ಸದಸ್ಯರ ಕಾಲದಲ್ಲಿ ಅವಕಾಶ ಸಿಕ್ಕಿದಷ್ಟು ಉತ್ತಮ ಕೆಲಸಗಳು ಆಗಿವೆ. ಜಿಲ್ಲೆಗೆ ಬಂದರು, ವಿಮಾನ ನಿಲ್ದಾಣಗಳು ಬಂದಿದ್ದರೆ ಅದು ಶ್ರೀನಿವಾಸ ಮಲ್ಯರ ಕಾಲದಲ್ಲಿ. ಜಿಲ್ಲೆಯ ಸಂಸದರಾಗಿ ಜವಹರಲಾಲ್ ನೆಹರೂ ಆತ್ಮೀಯರಾಗಿ ಅನೇಕ ಕೆಲಸಗಳು ಆಗಿದೆ. ಮಾತ್ರವಲ್ಲದೆ ಅನೇಕ ಕೆಲಸ ಕಾರ್ಯಗಳು ಜಿಲ್ಲೆಯ ಕಾಂಗ್ರೆಸ್ ಸಂಸದರ ಕಾಲದಲ್ಲಿ ಆಗಿದೆ ಎಂದರು.

ಬಿಜೆಪಿ ದೇಶದ ಸಂಪತ್ತು ಮತ್ತು ಸೌಹಾರ್ದವನ್ನು ನಾಶ ಮಾಡಿದೆ. ಇಡೀ ಬ್ಯಾಂಕ್ ವ್ಯವಸ್ಥೆಯೇ ನಷ್ಟದಲ್ಲಿದ್ದು, ಸುಮಾರು 27 ಮಂದಿ ಬ್ಯಾಂಕ್ ಲೂಟಿ ಮಾಡಿ ವಿದೇಶಕ್ಕೆ ಓಡಿ ಹೋಗಿದ್ದು, ಕೇಂದ್ರ ಸರಕಾರ ಇದರ ಪಾಲುಪಾರ ಎಂದ ಅವರು, ಆಡಂಬರದ ಜೀವನವನ್ನು ಅನುಭವಿಸುತ್ತಿರುವ ನರೇಂದ್ರ ಮೋದಿ ಆಧುನಿಕ ಭಾರತದ ಹಿಟ್ಲರ್ ಎಂದು ಅವರು ಹೇಳಿದರು.

Vishwa News 24

Recent Posts

ಉಡುಪಿ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ, ವಂಚನೆ ಪ್ರಕರಣ: ಪೋಕ್ಸೋ ಕಾಯಿದೆಯಡಿ ಇಬ್ಬರ ಬಂಧನ – vishwanews24

ಉಡುಪಿ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ, ವಂಚನೆ ಪ್ರಕರಣ: ಪೋಕ್ಸೋ ಕಾಯಿದೆಯಡಿ ಇಬ್ಬರ ಬಂಧನ ಉಡುಪಿ: ಅಪ್ರಾಪ್ತ ಬಾಲಕಿಯೊಬ್ಬಳನ್ನು ಪ್ರೀತಿಯ…

9 hours ago

ಹೆಜಮಾಡಿ ಕಾಂಗ್ರೆಸ್ ಗೆ ಭರವಸೆ ನಾಯಕ : ಪ್ರಭೋದ್ ಚಂದ್ರ ಹೆಜಮಾಡಿ – vishwanews24

ಹೆಜಮಾಡಿ ಕಾಂಗ್ರೆಸ್ ಗೆ ಭರವಸೆ ನಾಯಕ : ಪ್ರಭೋದ್ ಚಂದ್ರ ಹೆಜಮಾಡಿ ಕಾಪು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ…

13 hours ago

ಉಡುಪಿ: ಟಯರ್ ಸ್ಫೋಟಗೊಂಡು ಮೀನು ಸಾಗಾಟದ ಲಾರಿ ಪಲ್ಟಿ  – vishwanews24

ಉಡುಪಿ: ಟಯರ್ ಸ್ಫೋಟಗೊಂಡು ಮೀನು ಸಾಗಾಟದ ಲಾರಿ ಪಲ್ಟಿ  ಉಡುಪಿ: ಉಡುಪಿಯಿಂದ ಕುಂದಾಪುರ ಕಡೆಗೆ ಸಾಗುತ್ತಿದ್ದ ಮೀನು ಸಾಗಾಟದ ಲಾರಿಯೊಂದು…

14 hours ago

ಸತತ 4ನೇ ಬಾರಿ CNG ದರ ಏರಿಕೆ: ಪ್ರತಿ ಕೆಜಿಗೆ 2 ರೂ. ಹೆಚ್ಚಳ – vishwanews24

ಸತತ 4ನೇ ಬಾರಿ CNG ದರ ಏರಿಕೆ: ಪ್ರತಿ ಕೆಜಿಗೆ 2 ರೂ. ಹೆಚ್ಚಳ ನವದೆಹಲಿ: ಪೆಟ್ರೋಲ್‌, ಡೀಸೆಲ್‌ ಬಳಿಕ…

14 hours ago

ದುಬೈನಲ್ಲಿ ರಸ್ತೆ ಅಪಘಾತ : ಕಿನ್ನಿಗೋಳಿಯ ಯುವತಿ ಸಾವು – vishwanews24

ದುಬೈನಲ್ಲಿ ರಸ್ತೆ ಅಪಘಾತ : ಕಿನ್ನಿಗೋಳಿಯ ಯುವತಿ ಸಾವು ಮಂಗಳೂರು: ದುಬೈನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು, ಕಳೆದ ಕೆಲವು…

15 hours ago

ಗೋ ರಕ್ಷಣೆಯ ಹೆಸರಿನಲ್ಲಿ ನಡೆಯುತ್ತಿರುವ ದೌರ್ಜನ್ಯಗಳ ವಿರುದ್ಧ ಮಂಗಳೂರಿನಲ್ಲಿ SDPI ಪ್ರತಿಭಟನೆ – vishwanews24

ಬಿಜೆಪಿ ಸಂಘಪರಿವಾರವು ದೇಶದ ಕಾನೂನಿಗೆ ವಿರುದ್ಧವಾಗಿದೆ: ರಿಯಾಝ್ ಫರಂಗಿಪೇಟೆ ಗಲಭೆಕೋರರ ವಿರುದ್ಧದ ಪ್ರಕರಣ ಹಿಂಪಡೆದ ಕ್ರಮಕ್ಕೆ SDPI ತೀವ್ರ ವಿರೋಧ…

15 hours ago