Featured

ದೇಶವನ್ನು ದಿವಾಳಿ ಮಾಡಿದ್ದು ಮೋದಿ ಸರ್ಕಾರವೇ ಹೊರತು ನಾವಲ್ಲ : ಸಚಿವ ಸಂತೋಷ್ ಲಾಡ್ ವಾಗ್ದಾಳಿ – vishwanews24

ದೇಶವನ್ನು ದಿವಾಳಿ ಮಾಡಿದ್ದು ಮೋದಿ ಸರ್ಕಾರವೇ ಹೊರತು ನಾವಲ್ಲ : ಸಚಿವ ಸಂತೋಷ್ ಲಾಡ್ ವಾಗ್ದಾಳಿ

ಮಂಗಳೂರು: 2014ರ ವರೆಗೆ ದೇಶದ ಸಾಲ 53 ಲಕ್ಷ ಕೋಟಿ ಇತ್ತು. ನರೇಂದ್ರ ಮೋದಿ ಪ್ರಧಾನಿ ಆದ 10 ವರ್ಷಗಳಲ್ಲಿ ದೇಶದ ಸಾಲ 185 ಲಕ್ಷ ಕೋಟಿಗೆ ಏರಿಕೆಯಾಗಿದೆ. ದೇಶವನ್ನು ದಿವಾಳಿ ಮಾಡಿದ್ದು ಮೋದಿ ಅವರ ಸರ್ಕಾರವೇ ಹೊರತು ನಾವಲ್ಲ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ವಾಗ್ದಾಳಿ ನಡೆಸಿದ್ದಾರೆ.

ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ಕಾಂಗ್ರೆಸ್ ಕಾರ್ಯಕರ್ತರನ್ನು ಭೇಟಿ ಮಾಡಿ ಬಳಿಕ ಅವರು ಮಾತನಾಡುತ್ತಿದ್ದರು.

ಬಿಜೆಪಿಗರು ಚುನಾವಣೆ ಸಂದರ್ಭ ಅಭಿವೃದ್ಧಿ ಬಗ್ಗೆ ಮಾತನಾಡುವುದಿಲ್ಲ, ಬದಲಾಗಿ ಪಾಕಿಸ್ತಾನ, ಮುಸಲ್ಮಾನ, ಅಪಘಾನಿಸ್ತಾನ ಬಗ್ಗೆ ಮಾತ್ರ ಮಾತನಾಡುತ್ತಾರೆ. ರಾಹುಲ್ ಗಾಂಧಿ ಇದುವರೆಗೆ ಸಾವಿರಕ್ಕೂ ಅಧಿಕ ಪತ್ರಿಕಾಗೋಷ್ಠಿ ನಡೆಸಿದ್ದಾರೆ. ಹೊರ ದೇಶಗಳಿಗೆ ಭೇಟಿ ನೀಡಿದ ಬಳಿಕ ಸಾಮಾನ್ಯವಾಗಿ ಪ್ರಾಧನಿಯಾದವರೂ ಪತ್ರಿಕಾಗೋಷ್ಠಿ ನಡೆಸುತ್ತಾರೆ. ಆದರೆ ಪ್ರಧಾನಿ ಮೋದಿ ಅವರು ತಿಂಗಳಿಗೆ ಒಂದು ಸುದ್ದಿಗೋಷ್ಠಿಯನ್ನೂ ನಡೆಸಿಲ್ಲ. ಬಿಹಾರ ಚುನಾವಣೆಗಾಗಿ ಬಿಜೆಪಿ ಸರಕಾರ ಒಂದು ವರ್ಷದ ಆಡಳಿತದ ಹಣವನ್ನು ಮಹಿಳೆಯರ ಖಾತೆಗೆ ಹತ್ತು ಸಾವಿರ ಹಾಕಲಾಗುತ್ತಿದೆ ಎಂದು ಹೇಳಿದರು.

ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಬೇಕಾದರೆ ಬಸವಣ್ಣ, ಬುದ್ಧ, ಅಂಬೇಡ್ಕರ್, ಕಾಂಗ್ರೆಸ್ ಸಿದ್ಧಾಂತವುಳ್ಳ ಯುವಕರನ್ನು ಗುರುತಿಸಬೇಕು. ಕಟ್ಟೆ ಮೇಲೆ ನಿಂತು ಭಾಷಣ ಮಾತನಾಡುವ ಯುವಕರನ್ನು ಮುನ್ನೆಲೆಗೆ ತರಬೇಕು ಎಂದರು.

ಅಸಂಘಟಿತ ವರ್ಗದ ಕಾರ್ಮಿಕರಲ್ಲಿ ಖಾಸಗಿ ವಾಣಿಜ್ಯ ಸಾರಿಗೆ ಹಾಗೂ ಇತರೆ ಸಂಬಂಧಿತ ಕಾರ್ಮಿಕರು ಸುಮಾರು 40 ಲಕ್ಷ ಇರುವುದಾಗಿ ಅಂದಾಜಿಸಲಾಗಿದ್ದು, ಅವರಿಗೆ ಸಾಮಾಜಿಕ ಭದ್ರತೆ ಹಾಗೂ ಕಲ್ಯಾಣ ಸೌಲಭ್ಯಗಳನ್ನು ಒದಗಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಕರ್ನಾಟಕ ಮೋಟಾರು ಸಾರಿಗೆ ಮತ್ತು ಇತರೆ ಸಂಬಂಧಿತ ಕಾರ್ಮಿಕರ ಸಾಮಾಜಿಕ ಭದ್ರತೆ ಮತ್ತು ಕ್ಷೇಮಾಭಿವೃದ್ಧಿ ಅಧಿನಿಯಮ ಜಾರಿಗೆ ತರಲಾಗಿದೆ. ಕಾರ್ಮಿಕರ ಸಾಮಾಜಿಕ ಭದ್ರತೆ ಮತ್ತು ಕ್ಷೇಮಾಭಿವೃದ್ಧಿ ಮಂಡಳಿಯನ್ನು ರಚಿಸಿದ್ದು, ಈ ಮಂಡಳಿಯ ಮೂಲಕ ಕಾರ್ಮಿಕರಿಗೆ ಸಾಮಾಜಿಕ ಭದ್ರತಾ ಯೋಜನೆಗಳನ್ನು ಜಾರಿಗೊಳಿಸಲಾಗುತ್ತಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಮಾಜಿ ಮೇಯರ್ ಸುರೇಶ್ ಬಳ್ಳಾಲ್, ಶಶಿಧರ್ ಹೆಗ್ಡೆ, ಸದಾಶಿವ್ ಉಳ್ಳಾಲ್, ಪದ್ಮರಾಜ್ ಪೂಜಾರಿ, ಟಿ.ಎಂ ಶಹೀದ್, ಎಂ.ಎ ಗಫೂರ್, ಲಾವಣ್ಯ ಬಳ್ಳಾಲ್, ಮಮತಾ ಗಟ್ಟಿ, ಅನೀಲ್ ತಡ್ಕಲ್, ಸೇರಿಂದತೆ ಮುಖಂಡರು, ಬ್ಲಾಕ್ ಅಧ್ಯಕ್ಷರು ಉಪಸ್ಥಿತರಿದ್ದರು. ದ.ಕ.ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಕೆ.ಹರೀಶ್ ಕುಮಾರ್ ಸ್ವಾಗತಿಸಿದರು.

Vishwa News 24

Recent Posts

ಉಡುಪಿ: ವಂಚನೆ ಹಾಗೂ ಬ್ಲ್ಯಾಕ್‌ಮೇಲ್ ಪ್ರಕರಣ ; ಆರೋಪಿ ಝೀನತ್ ವಿರುದ್ಧ ಮತ್ತೆರಡು ಹೊಸ ಪ್ರಕರಣ ದಾಖಲು – vishwanews24

ಉಡುಪಿ: ವಂಚನೆ ಹಾಗೂ ಬ್ಲ್ಯಾಕ್‌ಮೇಲ್ ಪ್ರಕರಣ ; ಆರೋಪಿ ಝೀನತ್ ವಿರುದ್ಧ ಮತ್ತೆರಡು ಹೊಸ ಪ್ರಕರಣ ದಾಖಲು ಉಡುಪಿ:ಬಹುಕೋಟಿ ವಂಚನೆ…

5 minutes ago

ಆಗುಂಬೆ ಕೊಲೆ ಪ್ರಕರಣ: ಆರೋಪಿಗೆ ಜೀವಾವಧಿ ಶಿಕ್ಷೆ – ಮಹತ್ವದ ತೀರ್ಪು ನೀಡಿದ ಶಿವಮೊಗ್ಗ ನ್ಯಾಯಾಲಯ – vishwanews24

ಆಗುಂಬೆ ಕೊಲೆ ಪ್ರಕರಣ: ಆರೋಪಿಗೆ ಜೀವಾವಧಿ ಶಿಕ್ಷೆ - ಮಹತ್ವದ ತೀರ್ಪು ನೀಡಿದ ಶಿವಮೊಗ್ಗ ನ್ಯಾಯಾಲಯ ತೀರ್ಥಹಳ್ಳಿ: ಲೈಂಗಿಕ ದೌರ್ಜನ್ಯಕ್ಕೆ…

44 minutes ago

ಅಯೋಧ್ಯೆ ಪ್ರಕರಣದ ಹಿನ್ನೆಲೆ : ರಾಜ್ಯದ ಎಲ್ಲಾ ಮುಜುರಾಯಿ ದೇಗುಲಗಳಲ್ಲಿ ಕಡ್ಡಾಯ ಸಿಸಿಟಿವಿ ಅಳವಡಿಕೆಗೆ ಸಿಎಂ ಆದೇಶ – vishwanews24

ರಾಮ ಮಂದಿರದಲ್ಲಿ ನಡೆದ ಘಟನೆ ಅವಮಾನಕರ; ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ನೋವುಂಟು ಮಾಡಿದೆ :ಸಿಎಂ  ಡಿ.ಕೆ. ಶಿ ಬೆಳಗಾವಿ: ಮುಜರಾಯಿ…

50 minutes ago

ಷೇರು ಮಾರುಕಟ್ಟೆ ಹೂಡಿಕೆ ಹೆಸರಿನಲ್ಲಿ 10 ಲಕ್ಷ ರೂ.ವಂಚನೆ ಪ್ರಕರಣ: ಮಹಿಳೆ ಬಂಧನ – vishwanews24

ಷೇರು ಮಾರುಕಟ್ಟೆ ಹೂಡಿಕೆ ಹೆಸರಿನಲ್ಲಿ 10 ಲಕ್ಷ ರೂ.ವಂಚನೆ ಪ್ರಕರಣ: ಮುಂಬಯಲ್ಲಿ ಉಡುಪಿ ಮೂಲದ ಮಹಿಳೆ ಬಂಧನ ಮುಂಬೈ,: ಷೇರು…

1 hour ago

ಪುತ್ತೂರು: ಕೋಮು ಪ್ರಚೋದನೆ ಆರೋಪ ;  7 ವೆಬ್ ನ್ಯೂಸ್, ಸಾಮಾಜಿಕ ಜಾಲತಾಣಗಳ ವಿರುದ್ಧ ಪ್ರಕರಣ ದಾಖಲು – vishwanews24

ಪುತ್ತೂರು: ಕೋಮು ಪ್ರಚೋದನೆ ಆರೋಪ ;  7 ವೆಬ್ ನ್ಯೂಸ್, ಸಾಮಾಜಿಕ ಜಾಲತಾಣಗಳ ವಿರುದ್ಧ ಪ್ರಕರಣ ದಾಖಲು ಪುತ್ತೂರು: ಪುರುಷರಕಟ್ಟೆಯಲ್ಲಿ…

2 hours ago

ಮಂಗಳೂರು : ಜಿಲ್ಲಾ ಕಾರಾಗೃಹದಲ್ಲಿ ಕೈದಿಗಳ ಬಳಿ ಮೊಬೈಲ್ ಪತ್ತೆ ; ಪ್ರಕರಣ ದಾಖಲು – vishwanews24

ಮಂಗಳೂರು : ಜಿಲ್ಲಾ ಕಾರಾಗೃಹದಲ್ಲಿ ಕೈದಿಗಳ ಬಳಿ ಮೊಬೈಲ್ ಪತ್ತೆ  ಮಂಗಳೂರು: ಕೊಡಿಯಾಲಬೈಲಿನ ಜಿಲ್ಲಾ ಕಾರಾಗೃಹದಲ್ಲಿ ಇಬ್ಬರು ವಿಚಾರಣಾಧೀನ ಕೈದಿಗಳ…

2 hours ago