ಮಂಗಳೂರು: 2014ರ ವರೆಗೆ ದೇಶದ ಸಾಲ 53 ಲಕ್ಷ ಕೋಟಿ ಇತ್ತು. ನರೇಂದ್ರ ಮೋದಿ ಪ್ರಧಾನಿ ಆದ 10 ವರ್ಷಗಳಲ್ಲಿ ದೇಶದ ಸಾಲ 185 ಲಕ್ಷ ಕೋಟಿಗೆ ಏರಿಕೆಯಾಗಿದೆ. ದೇಶವನ್ನು ದಿವಾಳಿ ಮಾಡಿದ್ದು ಮೋದಿ ಅವರ ಸರ್ಕಾರವೇ ಹೊರತು ನಾವಲ್ಲ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ವಾಗ್ದಾಳಿ ನಡೆಸಿದ್ದಾರೆ.
ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ಕಾಂಗ್ರೆಸ್ ಕಾರ್ಯಕರ್ತರನ್ನು ಭೇಟಿ ಮಾಡಿ ಬಳಿಕ ಅವರು ಮಾತನಾಡುತ್ತಿದ್ದರು.
ಬಿಜೆಪಿಗರು ಚುನಾವಣೆ ಸಂದರ್ಭ ಅಭಿವೃದ್ಧಿ ಬಗ್ಗೆ ಮಾತನಾಡುವುದಿಲ್ಲ, ಬದಲಾಗಿ ಪಾಕಿಸ್ತಾನ, ಮುಸಲ್ಮಾನ, ಅಪಘಾನಿಸ್ತಾನ ಬಗ್ಗೆ ಮಾತ್ರ ಮಾತನಾಡುತ್ತಾರೆ. ರಾಹುಲ್ ಗಾಂಧಿ ಇದುವರೆಗೆ ಸಾವಿರಕ್ಕೂ ಅಧಿಕ ಪತ್ರಿಕಾಗೋಷ್ಠಿ ನಡೆಸಿದ್ದಾರೆ. ಹೊರ ದೇಶಗಳಿಗೆ ಭೇಟಿ ನೀಡಿದ ಬಳಿಕ ಸಾಮಾನ್ಯವಾಗಿ ಪ್ರಾಧನಿಯಾದವರೂ ಪತ್ರಿಕಾಗೋಷ್ಠಿ ನಡೆಸುತ್ತಾರೆ. ಆದರೆ ಪ್ರಧಾನಿ ಮೋದಿ ಅವರು ತಿಂಗಳಿಗೆ ಒಂದು ಸುದ್ದಿಗೋಷ್ಠಿಯನ್ನೂ ನಡೆಸಿಲ್ಲ. ಬಿಹಾರ ಚುನಾವಣೆಗಾಗಿ ಬಿಜೆಪಿ ಸರಕಾರ ಒಂದು ವರ್ಷದ ಆಡಳಿತದ ಹಣವನ್ನು ಮಹಿಳೆಯರ ಖಾತೆಗೆ ಹತ್ತು ಸಾವಿರ ಹಾಕಲಾಗುತ್ತಿದೆ ಎಂದು ಹೇಳಿದರು.
ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಬೇಕಾದರೆ ಬಸವಣ್ಣ, ಬುದ್ಧ, ಅಂಬೇಡ್ಕರ್, ಕಾಂಗ್ರೆಸ್ ಸಿದ್ಧಾಂತವುಳ್ಳ ಯುವಕರನ್ನು ಗುರುತಿಸಬೇಕು. ಕಟ್ಟೆ ಮೇಲೆ ನಿಂತು ಭಾಷಣ ಮಾತನಾಡುವ ಯುವಕರನ್ನು ಮುನ್ನೆಲೆಗೆ ತರಬೇಕು ಎಂದರು.
ಅಸಂಘಟಿತ ವರ್ಗದ ಕಾರ್ಮಿಕರಲ್ಲಿ ಖಾಸಗಿ ವಾಣಿಜ್ಯ ಸಾರಿಗೆ ಹಾಗೂ ಇತರೆ ಸಂಬಂಧಿತ ಕಾರ್ಮಿಕರು ಸುಮಾರು 40 ಲಕ್ಷ ಇರುವುದಾಗಿ ಅಂದಾಜಿಸಲಾಗಿದ್ದು, ಅವರಿಗೆ ಸಾಮಾಜಿಕ ಭದ್ರತೆ ಹಾಗೂ ಕಲ್ಯಾಣ ಸೌಲಭ್ಯಗಳನ್ನು ಒದಗಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಕರ್ನಾಟಕ ಮೋಟಾರು ಸಾರಿಗೆ ಮತ್ತು ಇತರೆ ಸಂಬಂಧಿತ ಕಾರ್ಮಿಕರ ಸಾಮಾಜಿಕ ಭದ್ರತೆ ಮತ್ತು ಕ್ಷೇಮಾಭಿವೃದ್ಧಿ ಅಧಿನಿಯಮ ಜಾರಿಗೆ ತರಲಾಗಿದೆ. ಕಾರ್ಮಿಕರ ಸಾಮಾಜಿಕ ಭದ್ರತೆ ಮತ್ತು ಕ್ಷೇಮಾಭಿವೃದ್ಧಿ ಮಂಡಳಿಯನ್ನು ರಚಿಸಿದ್ದು, ಈ ಮಂಡಳಿಯ ಮೂಲಕ ಕಾರ್ಮಿಕರಿಗೆ ಸಾಮಾಜಿಕ ಭದ್ರತಾ ಯೋಜನೆಗಳನ್ನು ಜಾರಿಗೊಳಿಸಲಾಗುತ್ತಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಮಾಜಿ ಮೇಯರ್ ಸುರೇಶ್ ಬಳ್ಳಾಲ್, ಶಶಿಧರ್ ಹೆಗ್ಡೆ, ಸದಾಶಿವ್ ಉಳ್ಳಾಲ್, ಪದ್ಮರಾಜ್ ಪೂಜಾರಿ, ಟಿ.ಎಂ ಶಹೀದ್, ಎಂ.ಎ ಗಫೂರ್, ಲಾವಣ್ಯ ಬಳ್ಳಾಲ್, ಮಮತಾ ಗಟ್ಟಿ, ಅನೀಲ್ ತಡ್ಕಲ್, ಸೇರಿಂದತೆ ಮುಖಂಡರು, ಬ್ಲಾಕ್ ಅಧ್ಯಕ್ಷರು ಉಪಸ್ಥಿತರಿದ್ದರು. ದ.ಕ.ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಕೆ.ಹರೀಶ್ ಕುಮಾರ್ ಸ್ವಾಗತಿಸಿದರು.
ವಿಟ್ಲ: ಕಾರು ಮತ್ತು ದ್ವಿಚಕ್ರ ವಾಹನ ಭೀಕರ ಅಪಘಾತ; ಸವಾರ ಮೃತ್ಯು ವಿಟ್ಲ: ಮಿತ್ತೂರು ಸಮೀಪದ ಪರ್ಲೋಟು ಎಂಬಲ್ಲಿ ಸಂಭವಿಸಿದ…
ಉಡುಪಿ: ಸೆ. 4ರಂದು ಶ್ರೀಕೃಷ್ಣ ಜನ್ಮಾಷ್ಟಮಿ ; ಸೆ.5ರಂದು ವಿಟ್ಲಪಿಂಡಿ ಉತ್ಸವ ಉಡುಪಿ: ಉಡುಪಿ ಶ್ರೀಕೃಷ್ಣಮಠ ಪರ್ಯಾಯ ಶಿರೂರು ಮಠದ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್ ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ…
ಜವಾಬ್ದಾರಿಗಳನ್ನು ಹೊಸ ಪೀಳಿಗೆಗೆ ಹಸ್ತಾಂತರಿಸುವ ಸಮಯ ಬಂದಿದೆ : ನಿತಿನ್ ಗಡ್ಕರಿ ಮುಂಬೈ: ಈ ಹಿಂದೆ ಮಾಡುತ್ತಿದ್ದಷ್ಟು ಕೆಲಸವನ್ನು ಇನ್ನು…
ಹಬ್ಬಗಳ ಹಿನ್ನೆಲೆ : ದಕ್ಷಿಣ ಕನ್ನಡ ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ ರಾತ್ರಿ 11:30 ಗಂಟೆಯ ನಂತರ ಮೆರವಣಿಗೆ ,…
ಸೆ. 1 ರಿಂದ 10 ರವರೆಗೆ ಬೃಹತ್ ಪಾದಯಾತ್ರೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬೆಂಗಳೂರು : ರಾಜ್ಯ ಸರ್ಕಾರದ…