Featured

ದೇಶವನ್ನು ಬಿಜೆಪಿಯಿಂದ ರಕ್ಷಿಸಿ ಪ್ರಜಾಪ್ರಭುತ್ವ ಉಳಿಸಲು ಕಾಂಗ್ರೆಸ್ ಜೊತೆ ಕೈ ಜೋಡಿಸಿದ್ದೇವೆ: ಚಂದ್ರಬಾಬು ನಾಯ್ಡು

ನವದೆಹಲಿ: ದೇಶವನ್ನು ಬಿಜೆಪಿಯಿಂದ ಉಳಿಸಲು ಕಾಂಗ್ರೆಸ್ ಜೊತೆ ತೆಲುಗು ದೇಶಂ ಪಕ್ಷ(ಟಿಡಿಪಿ) ಕೈ ಜೋಡಿಸಿದೆ ಎಂದು ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಹೇಳಿದ್ದಾರೆ.

ಮುಂಬರುವ ಲೋಕಸಭಾ ಚುನಾವಣೆ ಹೊತ್ತಿಗೆ ವಿರೋಧ ಪಕ್ಷಗಳ ಮಹಾ ಮೈತ್ರಿಕೂಟ ರಚನೆಯಲ್ಲಿ ಪ್ರಮುಖ ಪಾತ್ರ ವಹಿಸಲು ಮುಂದಾಗಿರುವ ಟಿಡಿಪಿ ಅಧ್ಯಕ್ಷ ಚಂದ್ರಬಾಬು ನಾಯ್ಡು ಅವರು ಗುರುವಾರ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಎನ್ ಸಿಪಿ ಅಧ್ಯಕ್ಷ ಶರದ್ ಪವರ್ ಮತ್ತು ನ್ಯಾಷನಲ್ ಕಾನ್ಫರೆನ್ಸ್ ಮುಖ್ಯಸ್ಥ ಫಾರೂಕ್ ಅಬ್ದುಲ್ ಅವರನ್ನು ಗುರುವಾರ ಭೇಟಿಯಾದರು.

ಪ್ರಜಾಪ್ರಭುತ್ವವನ್ನುರಕ್ಷಿಸಿ. ಭವಿಷ್ಯವನ್ನು ಉಳಿಸಿಕೊಳ್ಳುವುದಕ್ಕೋಸ್ಕರ ಈ ನಿರ್ಧಾರ ಕೈಗೊಂಡಿದ್ದೇವೆ ಎಂದು ಹೇಳಿದ್ದಾರೆ. 2019ರ ಲೋಕಸಭಾ ಚುನಾವಣೆಗೋಸ್ಕರ ಯೋಜನೆ ರೂಪುಗೊಳಿಸಲು ಪ್ರತಿಪಕ್ಷಗಳೆಲ್ಲ ಒಂದಾಗಿದ್ದಾಗಿ ತಿಳಿಸಿದ್ದಾರೆ.ದೇಶ ಮತ್ತು ಪ್ರಜಾಪ್ರಭುತ್ವವನ್ನು ರಕ್ಷಿಸಲು ಒಟ್ಟಾಗುವುದು ಅಗತ್ಯವಾಗಿದೆ ಎಂದಿದ್ದಾರೆ.

ಇದೇ ವೇಳೆ ರಾಹುಲ್ ಗಾಂಧಿ ಮಾತನಾಡಿ, ಆಂಧ್ರ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ನೇತೃತ್ವದ ಟಿಡಿಪಿ ಪಕ್ಷ ಇಂದು ಕಾಂಗ್ರೆಸ್ ಜೊತೆ ಒಂದಾಗಿದೆ. ಈ ಮೂಲಕ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ಮೋದಿ ಸರ್ಕಾರದ ಭ್ರಷ್ಟಾಚಾರ, ರಫೇಲ್ ಡೀಲ್, ನಿರುದ್ಯೋಗ ಹಾಗೂ ವ್ಯವಸಾಯಕ್ಕೆ ಸಂಬಂಧಪಟ್ಟ ಸಮಸ್ಯೆಗಳನ್ನು ಪ್ರಮುಖ ಅಸ್ತ್ರವನ್ನಾಗಿ ಬಳಸಿ ಬಿಜೆಪಿ ಸರ್ಕಾರವನ್ನು ಕಿತ್ತೊಗೆಯುತ್ತೇವೆ. ಮೋದಿ ನೇತೃತ್ವದ ಎನ್‍ಡಿಎ ಸರ್ಕಾರ ಸುಪ್ರೀಂ ಕೋರ್ಟ್, ಸಿಬಿಐ, ಜಾರಿ ನಿರ್ದೇಶನಾಲಯ, ಆರ್ ಬಿಐ ಸೇರಿದಂತೆ ಹಲವು ಸಂಸ್ಥೆಗಳನ್ನು ಹಾಳು ಮಾಡುತ್ತಿದೆ ಎಂದು ದೂರಿದರು.

ಪ್ರಧಾನಿ ಮೋದಿಯವರು ಆಂಧ್ರಪ್ರದೇಶದ ಜನರಿಗೆ ದ್ರೋಹ ಮಾಡಿದ್ದಾರೆ. ಬಿಜೆಪಿಯ ರೀತಿ ರಿವಾಜುಗಳು ಪ್ರಜಾಪ್ರಭುತ್ವಕ್ಕೆ ವಿರುದ್ಧವಾಗಿವೆ. ನಾನು ದೇಶವನ್ನು ಬಿಜೆಪಿಯಿಂದ ರಕ್ಷಿಸುವುದಕ್ಕೋಸ್ಕರ ಮೈತ್ರಿಯಿಂದ ಹೊರಗೆ ಬಂದಿದ್ದೇನೆ ಎಂದು ನಾಯ್ಡು ಹೇಳಿದ್ದಾರೆ.

ಜಾಹೀರಾತುಗಳು

Vishwa News 24

Recent Posts

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ -vishwanews24

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…

22 hours ago

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  -vishwanews24

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  ಉಡುಪಿ : ಮಲಬಾರ್…

2 days ago

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ – vishwanews24

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ  ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…

2 days ago

ಭಸ್ಮಾಸುರ ಆಗಿರುವ ನರೇಂದ್ರ ಮೋದಿ ಅವರು ಪ್ರಜಾಪ್ರಭುತ್ವ ಸಂವಿಧಾನದ ಮೇಲೆ ಕೈ ಇಡದಿದ್ದರೆ ಸಾಕು : ಬಿ.ಕೆ ಹರಿಪ್ರಸಾದ್ ವಾಗ್ದಾಳಿ – vishwanews24

ಪ್ರಧಾನಿ  ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ  .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…

2 days ago

ಮಂಗಳೂರು : ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ – vishwanews24

ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…

2 days ago

ಮೂಳೂರು ಪರಿಸರದಲ್ಲಿ ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಿಸದಂತೆ ಅಧಿಕಾರಿಗಳಿಗೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮನವಿ – vishwanews24

ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…

2 days ago