Featured

ದೇಶವನ್ನು ಬಿಜೆಪಿಯಿಂದ ರಕ್ಷಿಸಿ ಪ್ರಜಾಪ್ರಭುತ್ವ ಉಳಿಸಲು ಕಾಂಗ್ರೆಸ್ ಜೊತೆ ಕೈ ಜೋಡಿಸಿದ್ದೇವೆ: ಚಂದ್ರಬಾಬು ನಾಯ್ಡು

ನವದೆಹಲಿ: ದೇಶವನ್ನು ಬಿಜೆಪಿಯಿಂದ ಉಳಿಸಲು ಕಾಂಗ್ರೆಸ್ ಜೊತೆ ತೆಲುಗು ದೇಶಂ ಪಕ್ಷ(ಟಿಡಿಪಿ) ಕೈ ಜೋಡಿಸಿದೆ ಎಂದು ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಹೇಳಿದ್ದಾರೆ.

ಮುಂಬರುವ ಲೋಕಸಭಾ ಚುನಾವಣೆ ಹೊತ್ತಿಗೆ ವಿರೋಧ ಪಕ್ಷಗಳ ಮಹಾ ಮೈತ್ರಿಕೂಟ ರಚನೆಯಲ್ಲಿ ಪ್ರಮುಖ ಪಾತ್ರ ವಹಿಸಲು ಮುಂದಾಗಿರುವ ಟಿಡಿಪಿ ಅಧ್ಯಕ್ಷ ಚಂದ್ರಬಾಬು ನಾಯ್ಡು ಅವರು ಗುರುವಾರ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಎನ್ ಸಿಪಿ ಅಧ್ಯಕ್ಷ ಶರದ್ ಪವರ್ ಮತ್ತು ನ್ಯಾಷನಲ್ ಕಾನ್ಫರೆನ್ಸ್ ಮುಖ್ಯಸ್ಥ ಫಾರೂಕ್ ಅಬ್ದುಲ್ ಅವರನ್ನು ಗುರುವಾರ ಭೇಟಿಯಾದರು.

ಪ್ರಜಾಪ್ರಭುತ್ವವನ್ನುರಕ್ಷಿಸಿ. ಭವಿಷ್ಯವನ್ನು ಉಳಿಸಿಕೊಳ್ಳುವುದಕ್ಕೋಸ್ಕರ ಈ ನಿರ್ಧಾರ ಕೈಗೊಂಡಿದ್ದೇವೆ ಎಂದು ಹೇಳಿದ್ದಾರೆ. 2019ರ ಲೋಕಸಭಾ ಚುನಾವಣೆಗೋಸ್ಕರ ಯೋಜನೆ ರೂಪುಗೊಳಿಸಲು ಪ್ರತಿಪಕ್ಷಗಳೆಲ್ಲ ಒಂದಾಗಿದ್ದಾಗಿ ತಿಳಿಸಿದ್ದಾರೆ.ದೇಶ ಮತ್ತು ಪ್ರಜಾಪ್ರಭುತ್ವವನ್ನು ರಕ್ಷಿಸಲು ಒಟ್ಟಾಗುವುದು ಅಗತ್ಯವಾಗಿದೆ ಎಂದಿದ್ದಾರೆ.

ಇದೇ ವೇಳೆ ರಾಹುಲ್ ಗಾಂಧಿ ಮಾತನಾಡಿ, ಆಂಧ್ರ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ನೇತೃತ್ವದ ಟಿಡಿಪಿ ಪಕ್ಷ ಇಂದು ಕಾಂಗ್ರೆಸ್ ಜೊತೆ ಒಂದಾಗಿದೆ. ಈ ಮೂಲಕ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ಮೋದಿ ಸರ್ಕಾರದ ಭ್ರಷ್ಟಾಚಾರ, ರಫೇಲ್ ಡೀಲ್, ನಿರುದ್ಯೋಗ ಹಾಗೂ ವ್ಯವಸಾಯಕ್ಕೆ ಸಂಬಂಧಪಟ್ಟ ಸಮಸ್ಯೆಗಳನ್ನು ಪ್ರಮುಖ ಅಸ್ತ್ರವನ್ನಾಗಿ ಬಳಸಿ ಬಿಜೆಪಿ ಸರ್ಕಾರವನ್ನು ಕಿತ್ತೊಗೆಯುತ್ತೇವೆ. ಮೋದಿ ನೇತೃತ್ವದ ಎನ್‍ಡಿಎ ಸರ್ಕಾರ ಸುಪ್ರೀಂ ಕೋರ್ಟ್, ಸಿಬಿಐ, ಜಾರಿ ನಿರ್ದೇಶನಾಲಯ, ಆರ್ ಬಿಐ ಸೇರಿದಂತೆ ಹಲವು ಸಂಸ್ಥೆಗಳನ್ನು ಹಾಳು ಮಾಡುತ್ತಿದೆ ಎಂದು ದೂರಿದರು.

ಪ್ರಧಾನಿ ಮೋದಿಯವರು ಆಂಧ್ರಪ್ರದೇಶದ ಜನರಿಗೆ ದ್ರೋಹ ಮಾಡಿದ್ದಾರೆ. ಬಿಜೆಪಿಯ ರೀತಿ ರಿವಾಜುಗಳು ಪ್ರಜಾಪ್ರಭುತ್ವಕ್ಕೆ ವಿರುದ್ಧವಾಗಿವೆ. ನಾನು ದೇಶವನ್ನು ಬಿಜೆಪಿಯಿಂದ ರಕ್ಷಿಸುವುದಕ್ಕೋಸ್ಕರ ಮೈತ್ರಿಯಿಂದ ಹೊರಗೆ ಬಂದಿದ್ದೇನೆ ಎಂದು ನಾಯ್ಡು ಹೇಳಿದ್ದಾರೆ.

ಜಾಹೀರಾತುಗಳು

Vishwa News 24

Recent Posts

ಇನ್ನು ಮುಂದೆ ಭಕ್ತರು ಗೋಕರ್ಣದ ಮಹಾಗಣಪತಿ ವಿಗ್ರಹವನ್ನು ಸ್ಪರ್ಶಿಸಿ ಪೂಜಿಸುವಂತಿಲ್ಲ – vishwanews24

ಭಕ್ತರು ಗೋಕರ್ಣದ ಗಣೇಶನ ವಿಗ್ರಹ ಸ್ಪರ್ಶಿಸಿ ಪೂಜೆ ಮಾಡುವಂತಿಲ್ಲ ಗೋಕರ್ಣ (ಉತ್ತರ ಕನ್ನಡ ಜಿಲ್ಲೆ): ಗೋಕರ್ಣದ ಮಹಾಗಣಪತಿ ದೇವಸ್ಥಾನದಲ್ಲಿರುವ ಸಾವಿರಾರು ವರ್ಷಗಳಷ್ಟು…

5 hours ago

ಕೊಲಂಬೊ : 9 ಭಾರತೀಯ ಮೀನುಗಾರರನ್ನು ಬಂಧಿಸಿದ ಶ್ರೀಲಂಕಾ – vishwanews24

ಕೊಲಂಬೊ : ಅಕ್ರಮ ಪ್ರವೇಶಿಸಿ ಮೀನುಗಾರಿಕೆ ನಡೆಸಿದ ಆರೋಪ : 9 ಭಾರತೀಯ ಮೀನುಗಾರರನ್ನು ಬಂಧಿಸಿದ ಶ್ರೀಲಂಕಾ ಕೊಲಂಬೊ :…

5 hours ago

ಸುಳ್ಯ: ಬೈಕ್-ಕಾರು ಅಪಘಾತ ; ದ್ವಿತೀಯ ಪಿಯು ವಿದ್ಯಾರ್ಥಿ ಸಾವು – vishwanews24

ಸುಳ್ಯ: ಬೈಕ್-ಕಾರು ಅಪಘಾತ;  ದ್ವಿತೀಯ ಪಿಯು ವಿದ್ಯಾರ್ಥಿ ಸಾವು ಅರಂತೋಡು: ಅರಂತೋಡು ಕುಲ್ಚಾರ್ ಸಮೀಪ ಬೈಕ್ ಕಾರು ನಡುವೆ ಅಪಘಾತ…

5 hours ago

ಮಂಗಳೂರು: ವಿದ್ಯಾರ್ಥಿಗಳು, ವಿಪಕ್ಷ ನಾಯಕನ ಜೊತೆ ಆಡಳಿತ ಪಕ್ಷ ನಡೆಸಿಕೊಂಡ ರೀತಿ ಖಂಡನೀಯ: ರಮಾನಾಥ ರೈ – vishwanews24

ಮಂಗಳೂರು: ವಿದ್ಯಾರ್ಥಿಗಳು, ವಿಪಕ್ಷ ನಾಯಕನ ಜೊತೆ ಆಡಳಿತ ಪಕ್ಷ ನಡೆಸಿಕೊಂಡ ರೀತಿ ಖಂಡನೀಯ: ರಮಾನಾಥ ರೈ ಮಂಗಳೂರು: ನೀಟ್ ಪರೀಕ್ಷೆಯಲ್ಲಿನ…

6 hours ago

ಪ್ರಶ್ನೆ ಪತ್ರಿಕೆ ಸೋರಿಕೆ: ಕೇಂದ್ರ ಸರ್ಕಾರ ಯಾರನ್ನೂ ಕಾಪಾಡಬಾರದು : ಡಿ ಕೆ ಶಿ ಆಗ್ರಹ – vishwanews24

ಪ್ರಶ್ನೆ ಪತ್ರಿಕೆ ಸೋರಿಕೆ: ಕೇಂದ್ರ ಸರ್ಕಾರ ಯಾರನ್ನೂ ಕಾಪಾಡಬಾರದು : ಡಿ ಕೆ ಶಿವಕುಮಾರ್ ಆಗ್ರಹ ಬೆಂಗಳೂರು: ಪ್ರಶ್ನೆ ಪತ್ರಿಕೆ…

6 hours ago

ಕಾಂಗ್ರೆಸ್ ವಿದ್ಯಾರ್ಥಿಗಳ ಹಿತಕ್ಕಾಗಿ ಪ್ರತಿಭಟನೆ ನಡೆಸುತ್ತಿದ್ದರೆ, ಬಿಜೆಪಿ ನಾಯಕರು ಮೋದಿ ಮೆಚ್ಚಿಸಲು ಪ್ರತಿಭಟಿಸುತ್ತಿದ್ದಾರೆ : ಪ್ರಿಯಾಂಕ್ ಖರ್ಗೆ – vishwanews24

 ವಿದ್ಯಾರ್ಥಿಗಳ ಹಿತಕ್ಕಾಗಿ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದ್ದರೆ, ಬಿಜೆಪಿ ನಾಯಕರು ಮೋದಿ ಮೆಚ್ಚಿಸಲು ಪ್ರತಿಭಟಿಸುತ್ತಿದ್ದಾರೆ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಬೆಂಗಳೂರು:…

6 hours ago